Homeಕವನಕವನ | ಅಂತಿಮ ವಲಸೆಯ ಮುನ್ನ

ಕವನ | ಅಂತಿಮ ವಲಸೆಯ ಮುನ್ನ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ

ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು

ಸಾಗಬೇಕು, ಚಲಿಸಬೇಕು,

ಎದ್ದೆದ್ದು ಬಿದ್ದು ಪಾರಾಗಬೇಕು

 

ರಮಣಿಸುವ ಕಾಲುಹಾದಿಗಳು

ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ

ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು

ಬರೀ ಪೊದೆಗಳು

ತೀವ್ರ ವಿಷಕರ ಮುಳ್ಳುಗಂಟೆಗಳು

ಅವಿತುಕೊಂಡ ಹಾವು, ಚೇಳು

ಮೋಹಿನಿ-ಭೂತ ಪ್ರೇತಗಳು

ರಂಜಿಸುವ ಮೋಹ-ಮಾಯೆಗೆ ಸಿಲುಕದೆ

ಸಾಗುತ್ತಿರುವೆ ಇತ್ತ ನೇರ ನಾನು.

 

ಎಲ್ಲಾದರೊಂದು ಸಿಕ್ಕೆ ಸಿಗುವುದು

ಲಕ್ಷ್ಯದ ಘಟಕಗಳು

ಇಲ್ಲಿಯೇ ನಿಂತು ಮರಳಿಬಾರದೆಂದು

ಇಲ್ಲಿಂದಲೆ ಆಜಾ಼ನ್, ಇಲ್ಲಿಯೇ ಗಂಟೆಯ ನಾದಸ್ವರ

ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ ಅರ್ತನಾದ

ಇಲ್ಲಿಯೇ ಹಗಲಿರುಳು

ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ

ಹವನದ ತಾಜಾ ತಾಜಾ

ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ

ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ

ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೆರುವ ನಿರಂತರ ಬಳ್ಳಿ

ಹಬ್ಬಿರಲಿ ನಂದನವನದಲ್ಲಿ

 

ಉಳಿದಿರುವ ಇದೇ ತಾನೆ ಏಕೈಕ ಹಾದಿ

ಇದರಿಂದ ಪಾರಾಗಲೇಬೇಕಿದೆ ನಾನು

ಒಮ್ಮೆ ನಿನ್ನ ಸನಿಹದೊಂದಿಗೆ

ಇನ್ನೊಮ್ಮೆ ಒಬ್ಬಂಟಿಯಾಗಿ

ಒಮ್ಮೆ ಜನಜಂಗುಳಿಯೊಂದಿಗೆ

ನನ್ನ ಅಸ್ಮಿತೆಯ ಪಾಪ-ಪುಣ್ಯವ

ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ

ನುಡಿಯಲೇಬೇಕು, ಪಠಿಸಲೇಬೇಕು

ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ

ಆರಾಧನೆಯ ಹೊದಿಕೆಯಿಂದ ಹೊದಿಸಿ

ನೈಜತೆಯೋ ಅಥವಾ ಭ್ರಾಂತಿಯೋ

ದಾನಶೂರನೋ-ತಿರುಕನೋ

ತುಂಬಿ ತುಳುಕುತ್ತಿರುವುದೋ

ಅಥವಾ

ಬರಿದು ಬರಡಾಗಿರುವುದೋ

ಉಳಿದಿರುವುದು ಇದೇ ಒಂದು ದಾರಿ.

 

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ

ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು

ಸರ್ವಶಕ್ತತೆಯಿಂದ ಸುರಿಯುತ್ತಿರುವ

ಮನೋ-ಸಲ್ವಾ*ದ ಮಳೆಯು

ನನ್ನ ನಿನ್ನ ಹಸ್ತದೊಂದಿಗೆ

ಅಥವಾ

ಪರಹಸ್ತದಲ್ಲಿ

ಅಥವಾ

ನನ್ನೊಡನೆಯೋ

ಇಲ್ಲಿಯೇ ತೆರೆದಿರುವುದು ನಮ್ಮ

ಅಂತರಂಗದ ಕಣ್ಣುಗಳು

ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ

ಮತ್ತೆ ನಾವೆಂದಿಗೂ.

ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು

ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ

ಯಾವ ಅಲ್ವಂದ್** ಪರ್ವತದಿಂದಲೂ

ಮರಳಿ ಬರುವುದುಂಟೆ ಕೂಗು.

 

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ

ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,

ಮರಣಿಸುವೆ, ಕಾದಾಡುವೆ

ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ

ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ

ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ

ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ

ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ

ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು

ಮರಳಿ ಎಚ್ಚರಿಸಿ ತನ್ನೊಡನೆಯೇ

ಅಂತಿಮ ಗುರಿಯೆಡೆಗೆ

ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

 

ಮೂಲ ಉರ್ದು: ಖಲೀಲ್ ಮಾಮೂನ್

ಅನುವಾದ: ಡಾ. ತಸ್ನೀಮ್ ತಾಜ್


ಅಡಿ ಟಿಪ್ಪಣಿ

*ಮನೋ-ಸಲ್ವಾʼ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿದ್ದು, ಮೂಸಾ ಅವರು ಅಲ್ಲಾಹ‌ನೊಂದಿಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೀಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಲಾಹನ ವರದಾನ ಎಂದು ಭಾವಿಸಲಾಗಿದೆ.

** ’ಅಲ್ವಂದ್’ ಇರಾನ್‌ನಲ್ಲಿರುವ ಅತಿ ಎತ್ತರವಾದ ಪರ್ವತ.


ಓದಿ: ಬುದ್ಧನಾಗುವ ಆಸೆ| ಕವನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...