Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...