Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...