Homeಮುಖಪುಟಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

- Advertisement -
- Advertisement -

ಅಡ್ಮಿರಲ್ ಲಕ್ಷ್ಮೀನಾರಾಯಣ ರಾಮದಾಸ್, ಪಿವಿಎಸ್‌ಎಂ, ಎವಿಎಸ್‌ಎಂ, ವೀರಚಕ್ರ, ವಿಎಸ್‌ಎಂ, ಎಡಿಸಿ ಅವರು ಭಾರತೀಯ ನೌಕಾಸೇನೆಯ ಮಾಜಿ ಮಹಾದಂಡನಾಯಕರಾಗಿದ್ದು, ಮೊದಲ ಪ್ರಧಾನಿ ನೆಹರೂ ಅವರು ಲಾಠಿ ಹಿಡಿದು ಹಿಂಸಾನಿರತ ಗುಂಪನ್ನು ಚದರಿಸಿದ ಘಟನೆಯನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

***

1947ರಲ್ಲಿ ನಾನು ಹದಿನಾಲ್ಕು ವರ್ಷದ ಹುಡುಗನಾಗಿದ್ದು, ದಿಲ್ಲಿಯಲ್ಲಿ ವಾಸಿಸುತ್ತಿದ್ದೆ. ದೇಶ ವಿಭಜನೆಯ ಯಾತನೆ ಮತ್ತು ಉದ್ವೇಗ ಹಾಗೂ ಸ್ವಾತಂತ್ರ್ಯದ ಭರವಸೆಯಲ್ಲಿ ನಾನಿದ್ದೆ. ನಾನು ನೌಕಾಪಡೆಗೆ ಸೇರಿದ್ದಕ್ಕೆ ಪ್ರೇರಣೆಯೇ ಅದು ದೇಶಸೇವೆಗೆ ಅವಕಾಶ ಒದಗಿಸಿ, ದೇಶ ಕಟ್ಟುವ ಕೆಲಸದಲ್ಲಿ ನೆರವಾಗಬಹುದೆಂಬ ನಿರೀಕ್ಷೆ. ನಾನು ಭಾರತದ ಕೊನೆಯ ವೈಸರಾಯ್ ಮತ್ತು ಮೊದಲ ಗವರ್ನರ್ ಜನರಲ್ ಆಗಿದ್ದ ಬರ್ಮಾದ ಲಾರ್ಡ್ ಲೂಯಿ ಮೌಂಟ್‌ಬ್ಯಾಟನ್ ಅವರ ಸ್ವಚ್ಛ, ಬಿಳಿ ಸಮವಸ್ತ್ರದಿಂದ ಸಂಪೂರ್ಣ ಮಂತ್ರಮುಗ್ಧನಾಗಿದ್ದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನೆಹರೂ ಅವರನ್ನು ಅವರ ನಿಷ್ಕಳಂಕ ಚೂಡಿದಾರ್- ಕುರ್ತಾ ಮತ್ತು ವಿಶಿಷ್ಟ “ನೆಹರೂ” ಜ್ಯಾಕೆಟ್‌ನಲ್ಲಿ ನೋಡದಿರುವುದು ಸಾಧ್ಯವಿರಲಿಲ್ಲ- ಅದಕ್ಕೆ ಈ ದಿನಗಳಲ್ಲಿ ಬೇರೆಯೇ ಹೆಸರಿದೆ.

ನೆನಪಿನಲ್ಲಿ ಎದ್ದು ಕಾಣುವ ಆ ತಲೆಮಾರಿನ ನಾಯಕರ ಗುಣಗಳ ಕುರಿತು ಹಿಂತಿರುಗಿ ನೋಡಿದಾಗ ಒಂದು ಚಿತ್ರವನ್ನು ಅದೂ ತೀರಾ ಹತ್ತಿರದಿಂದ ನೋಡಿದ ಒಂದು ಚಿತ್ರವನ್ನು ನಾನೆಂದಿಗೂ ಮರೆಯಲಾರೆ. ಅದೆಂದರೆ “ಕಾರ್ಯಾಚರಣೆಯಲ್ಲಿ ನೆಹರೂ”.

ಆ ಭಯಾನಕ ದಿನಗಳ ಮೂರು ಚಿತ್ರಗಳು ನನ್ನ ಮನದಲ್ಲಿ ಅಚ್ಚೊತ್ತಿ ಉಳಿದಿವೆ-

– ನನ್ನ ಕಣ್ಣೆದುರೇ ಅಸಹಾಯಕ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಚೂರಿ ಇರಿತದ ಕ್ರೂರ ಘಟನೆ.

-ನಮ್ಮ ಬಂಗಾಳಿ ಮಾರ್ಕೆಟ್ ಮನೆಯ ಹೊರಗೆ ಉದ್ರಿಕ್ತ ಗುಂಪೊಂದು ನಮ್ಮ ಮನೆಯಲ್ಲಿ ಆಶ್ರಯ ಪಡೆದಿದ್ದ ನನ್ನ ತಂದೆಯವರ ಮಿತ್ರ ಹಾಗೂ ಸಹೋದ್ಯೋಗಿ ಗುಲಾಂ ಮೊಹಮ್ಮದ್ ಅವರನ್ನು ಹೊರಗೆ ಕಳುಹಿಸದಿದ್ದರೆ ತಂದೆಯವರಿಗೆ ಹಿಂಸಾಚಾರದ ಬೆದರಿಕೆ ಒಡ್ಡಿದ್ದು.

– ತನ್ನ ಸ್ವಂತ ಜೀವದ ಬೆದರಿಕೆಯನ್ನೂ ಲೆಕ್ಕಿಸದೆ ಪಂಡಿತ್ ನೆಹರೂ ಅವರು ಹಿಂಸಾನಿರತ ಉದ್ರಿಕ್ತ ಜನರ ಗುಂಪನ್ನು ಚದರಿಸಲು ಲಾಠಿ ಹಿಡಿದು ಧುಮುಕಿದ್ದು.

ಈ ಕೊನೆಯ ಘಟನೆಯನ್ನು ನೆನಪಿಸಿಕೊಳ್ಳಲು ನಾನು ಕೆಲವು ಸೆಕೆಂಡುಗಳನ್ನು ಕಳೆಯುತ್ತೇನೆ.

ನಾನು ಕನ್ನಾಟ್ ಸರ್ಕಸ್‌ನ ಅಗ್ನಿಶಾಮಕ ಠಾಣೆಯ ಎದುರಿದ್ದ ಕಟ್ಟಡವೊಂದರ ಮೊದಲ ಮಹಡಿಯಲ್ಲಿದ್ದ ನ್ಯೂ ಕ್ಯಾಂಬ್ರಿಡ್ಜ್ ಸ್ಕೂಲ್‌ನಿಂದ ಮನೆಗೆ ಮರಳುವ ಹಾದಿಯಲ್ಲಿದ್ದೆ. ಆಗ ಅಲ್ಲಲ್ಲಿ ಉದ್ರಿಕ್ತ ಮತ್ತು ಹಿಂಸಾಚಾರ ನಿರತ ಗುಂಪುಗಳಿರುತ್ತಿದ್ದವು. ಅಂತಹಾ ಒಂದು ಗುಂಪು ದಿಲ್ಲಿಯ ಹಲವಾರು ಜನರಿಗೆ ಪ್ರಿಯ ತಾಣವಾಗಿದ್ದ ಪ್ರಸಿದ್ಧ ಪುಸ್ತಕದಂಗಡಿಯಾಗಿದ್ದ ಎಸ್. ರಿಯಾಜುದ್ದೀನ್ ಎಂಡ್ ಸನ್ಸ್‌ನತ್ತ ಸಾಗುತ್ತಿತ್ತು.

ಏಕಾಏಕಿಯಾಗಿ ಒಂದು ಕೆನೆಬಣ್ಣದ ಅಂಬಾಸಿಡರ್ ಕಾರು ಬಂದು ನಿಂತಿತು, ಅದರ ಬಾಗಿಲು ತೆರೆಯಿತು ಮತ್ತು ನನ್ನನ್ನು ದಂಗುಬಡಿಸುವಂತಹ ಅಚ್ಚರಿಯಲ್ಲಿ ಕೆಡಹುವಂತೆ ಕೆಳಗಿಳಿದ ಜವಾಹರಲಾಲ್ ನೆಹರೂ ಅವರು ತನ್ನ ಕೈಯಲ್ಲಿದ್ದ ಲಾಠಿಯನ್ನು ಝಳಪಿಸುತ್ತಾ, ಹಿಂಸಾಚಾರ ನಿಲ್ಲಿಸುವಂತೆ ಕೂಗುತ್ತಾ ಗುಂಪಿನತ್ತ ಓಡಿದರು. ನಮ್ಮ ಪ್ರಧಾನಿಯವರೇ ಸ್ವಂತ ಭದ್ರತೆಯನ್ನು ಲೆಕ್ಕಿಸದೇ, ಯಾವುದೇ ಭದ್ರತೆ ಇಲ್ಲದೇ ಕಾರ್ಯಾಚರಣೆಗೆ ಧುಮುಕಿದ್ದನ್ನು ನೋಡಿ ದಂಗಾಗಿಹೋದೆ.

ಹೀಗೆ ನಡೆದಂತೆ, ನಾನು ಚಿಕ್ಕದೊಂದು ಭೇಟಿಗಾಗಿ ಮುಂಬಯಿಗೆ ಹೋಗಿದ್ದವನು ಮಹಮ್ಮದಾಲಿ ರಸ್ತೆಯಲ್ಲಿದ್ದಾಗ ದಿಲ್ಲಿಯ ಬಿರ್ಲಾ ಭವನದಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯಾದ ಸುದ್ದಿ ಬಂತು. ವ್ಯಾಪಾರಿಗಳು ತರಾತುರಿಯಲ್ಲಿ ಅಂಗಡಿ ಬಾಗಿಲುಗಳನ್ನು ಮುಚ್ಚುವುದನ್ನು ಮತ್ತು ಜನರು ಯದ್ವಾತದ್ವಾ ಓಡುವುದನ್ನು ಕಂಡೆ. ಗಾಂಧೀಜಿಯವರನ್ನು ಕೊಂದದ್ದು ಒಬ್ಬ ಹಿಂದೂ ಎಂದು ಆಕಾಶವಾಣಿಯಲ್ಲಿ ಮಾತನಾಡಿದ ಪ್ರಧಾನಿ ನೆಹರೂ ಮತ್ತೆ ಮತ್ತೆ ಹೇಳಿದ್ದನ್ನು ಕೇಳಿ ನಮಗೆಷ್ಟು ಸಮಾಧಾನವಾಯಿತು ಎಂಬುದನ್ನು ನೆನಪಿಸಿಕೊಳ್ಳಬಲ್ಲೆ. ಇದರಿಂದ ಅವರು ಅಲ್ಪಪಸಂಖ್ಯಾತ ಸಮುದಾಯದ ಮೇಲೆ ಕೋಪ ಸ್ಫೋಟಗೊಂಡು ಹಿಂಸಾಚಾರ ನಡೆಯದಂತೆ ಅವರು ಖಾತರಿಪಡಿಸಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರಸಂಗಾವಧಾನತೆ ಮತ್ತು ನಮ್ಮ ದೇಶದ ಜಾತ್ಯಾತೀತ ಸ್ವರೂಪದ ರಕ್ಷಣೆಯ ಅಗತ್ಯದ ಕುರಿತು ಆಳವಾದ ನಂಬಿಕೆಯ ಅಗತ್ಯವಿತ್ತು.

ನಾನು ವರ್ಷಗಳ ಹಿಂದೆ ಕಣ್ಣುತಿರುಗಿಸಿ ನೋಡಿದಾಗ, ಅದರಲ್ಲೂ ಮುಖ್ಯವಾಗಿ ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಗಮನಿಸಿದಾಗ ಅದನ್ನು 1947ರ ಅತ್ಯಂತ ಸ್ಫೋಟಕ ಪರಿಸ್ಥಿತಿಗೆ ಹೋಲಿಸುವುದು ಕಷ್ಟವಲ್ಲ. 2020ರಲ್ಲಿ ಯಾವುದೇ ರಾಜಕೀಯ ನಾಯಕರು ಹಿಂಸಾಚಾರವನ್ನಾಗಲೀ, ನಂತರದಲ್ಲಿ ದೇಶಕ್ಕೆ ಆಳವಾದ ಹಾನಿಯುಂಟುಮಾಡುವ ವಿಭಜನೆಯನ್ನಾಗಲೀ ದೈಹಿಕವಾಗಿ ನಿಯಂತ್ರಿಸಲು ವೈಯಕ್ತಿಕವಾಗಿ ಹಾಜರಿರಲಿಲ್ಲ.

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...