Homeಮುಖಪುಟಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

- Advertisement -
- Advertisement -

ಅಡ್ಮಿರಲ್ ಲಕ್ಷ್ಮೀನಾರಾಯಣ ರಾಮದಾಸ್, ಪಿವಿಎಸ್‌ಎಂ, ಎವಿಎಸ್‌ಎಂ, ವೀರಚಕ್ರ, ವಿಎಸ್‌ಎಂ, ಎಡಿಸಿ ಅವರು ಭಾರತೀಯ ನೌಕಾಸೇನೆಯ ಮಾಜಿ ಮಹಾದಂಡನಾಯಕರಾಗಿದ್ದು, ಮೊದಲ ಪ್ರಧಾನಿ ನೆಹರೂ ಅವರು ಲಾಠಿ ಹಿಡಿದು ಹಿಂಸಾನಿರತ ಗುಂಪನ್ನು ಚದರಿಸಿದ ಘಟನೆಯನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

***

1947ರಲ್ಲಿ ನಾನು ಹದಿನಾಲ್ಕು ವರ್ಷದ ಹುಡುಗನಾಗಿದ್ದು, ದಿಲ್ಲಿಯಲ್ಲಿ ವಾಸಿಸುತ್ತಿದ್ದೆ. ದೇಶ ವಿಭಜನೆಯ ಯಾತನೆ ಮತ್ತು ಉದ್ವೇಗ ಹಾಗೂ ಸ್ವಾತಂತ್ರ್ಯದ ಭರವಸೆಯಲ್ಲಿ ನಾನಿದ್ದೆ. ನಾನು ನೌಕಾಪಡೆಗೆ ಸೇರಿದ್ದಕ್ಕೆ ಪ್ರೇರಣೆಯೇ ಅದು ದೇಶಸೇವೆಗೆ ಅವಕಾಶ ಒದಗಿಸಿ, ದೇಶ ಕಟ್ಟುವ ಕೆಲಸದಲ್ಲಿ ನೆರವಾಗಬಹುದೆಂಬ ನಿರೀಕ್ಷೆ. ನಾನು ಭಾರತದ ಕೊನೆಯ ವೈಸರಾಯ್ ಮತ್ತು ಮೊದಲ ಗವರ್ನರ್ ಜನರಲ್ ಆಗಿದ್ದ ಬರ್ಮಾದ ಲಾರ್ಡ್ ಲೂಯಿ ಮೌಂಟ್‌ಬ್ಯಾಟನ್ ಅವರ ಸ್ವಚ್ಛ, ಬಿಳಿ ಸಮವಸ್ತ್ರದಿಂದ ಸಂಪೂರ್ಣ ಮಂತ್ರಮುಗ್ಧನಾಗಿದ್ದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನೆಹರೂ ಅವರನ್ನು ಅವರ ನಿಷ್ಕಳಂಕ ಚೂಡಿದಾರ್- ಕುರ್ತಾ ಮತ್ತು ವಿಶಿಷ್ಟ “ನೆಹರೂ” ಜ್ಯಾಕೆಟ್‌ನಲ್ಲಿ ನೋಡದಿರುವುದು ಸಾಧ್ಯವಿರಲಿಲ್ಲ- ಅದಕ್ಕೆ ಈ ದಿನಗಳಲ್ಲಿ ಬೇರೆಯೇ ಹೆಸರಿದೆ.

ನೆನಪಿನಲ್ಲಿ ಎದ್ದು ಕಾಣುವ ಆ ತಲೆಮಾರಿನ ನಾಯಕರ ಗುಣಗಳ ಕುರಿತು ಹಿಂತಿರುಗಿ ನೋಡಿದಾಗ ಒಂದು ಚಿತ್ರವನ್ನು ಅದೂ ತೀರಾ ಹತ್ತಿರದಿಂದ ನೋಡಿದ ಒಂದು ಚಿತ್ರವನ್ನು ನಾನೆಂದಿಗೂ ಮರೆಯಲಾರೆ. ಅದೆಂದರೆ “ಕಾರ್ಯಾಚರಣೆಯಲ್ಲಿ ನೆಹರೂ”.

ಆ ಭಯಾನಕ ದಿನಗಳ ಮೂರು ಚಿತ್ರಗಳು ನನ್ನ ಮನದಲ್ಲಿ ಅಚ್ಚೊತ್ತಿ ಉಳಿದಿವೆ-

– ನನ್ನ ಕಣ್ಣೆದುರೇ ಅಸಹಾಯಕ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಚೂರಿ ಇರಿತದ ಕ್ರೂರ ಘಟನೆ.

-ನಮ್ಮ ಬಂಗಾಳಿ ಮಾರ್ಕೆಟ್ ಮನೆಯ ಹೊರಗೆ ಉದ್ರಿಕ್ತ ಗುಂಪೊಂದು ನಮ್ಮ ಮನೆಯಲ್ಲಿ ಆಶ್ರಯ ಪಡೆದಿದ್ದ ನನ್ನ ತಂದೆಯವರ ಮಿತ್ರ ಹಾಗೂ ಸಹೋದ್ಯೋಗಿ ಗುಲಾಂ ಮೊಹಮ್ಮದ್ ಅವರನ್ನು ಹೊರಗೆ ಕಳುಹಿಸದಿದ್ದರೆ ತಂದೆಯವರಿಗೆ ಹಿಂಸಾಚಾರದ ಬೆದರಿಕೆ ಒಡ್ಡಿದ್ದು.

– ತನ್ನ ಸ್ವಂತ ಜೀವದ ಬೆದರಿಕೆಯನ್ನೂ ಲೆಕ್ಕಿಸದೆ ಪಂಡಿತ್ ನೆಹರೂ ಅವರು ಹಿಂಸಾನಿರತ ಉದ್ರಿಕ್ತ ಜನರ ಗುಂಪನ್ನು ಚದರಿಸಲು ಲಾಠಿ ಹಿಡಿದು ಧುಮುಕಿದ್ದು.

ಈ ಕೊನೆಯ ಘಟನೆಯನ್ನು ನೆನಪಿಸಿಕೊಳ್ಳಲು ನಾನು ಕೆಲವು ಸೆಕೆಂಡುಗಳನ್ನು ಕಳೆಯುತ್ತೇನೆ.

ನಾನು ಕನ್ನಾಟ್ ಸರ್ಕಸ್‌ನ ಅಗ್ನಿಶಾಮಕ ಠಾಣೆಯ ಎದುರಿದ್ದ ಕಟ್ಟಡವೊಂದರ ಮೊದಲ ಮಹಡಿಯಲ್ಲಿದ್ದ ನ್ಯೂ ಕ್ಯಾಂಬ್ರಿಡ್ಜ್ ಸ್ಕೂಲ್‌ನಿಂದ ಮನೆಗೆ ಮರಳುವ ಹಾದಿಯಲ್ಲಿದ್ದೆ. ಆಗ ಅಲ್ಲಲ್ಲಿ ಉದ್ರಿಕ್ತ ಮತ್ತು ಹಿಂಸಾಚಾರ ನಿರತ ಗುಂಪುಗಳಿರುತ್ತಿದ್ದವು. ಅಂತಹಾ ಒಂದು ಗುಂಪು ದಿಲ್ಲಿಯ ಹಲವಾರು ಜನರಿಗೆ ಪ್ರಿಯ ತಾಣವಾಗಿದ್ದ ಪ್ರಸಿದ್ಧ ಪುಸ್ತಕದಂಗಡಿಯಾಗಿದ್ದ ಎಸ್. ರಿಯಾಜುದ್ದೀನ್ ಎಂಡ್ ಸನ್ಸ್‌ನತ್ತ ಸಾಗುತ್ತಿತ್ತು.

ಏಕಾಏಕಿಯಾಗಿ ಒಂದು ಕೆನೆಬಣ್ಣದ ಅಂಬಾಸಿಡರ್ ಕಾರು ಬಂದು ನಿಂತಿತು, ಅದರ ಬಾಗಿಲು ತೆರೆಯಿತು ಮತ್ತು ನನ್ನನ್ನು ದಂಗುಬಡಿಸುವಂತಹ ಅಚ್ಚರಿಯಲ್ಲಿ ಕೆಡಹುವಂತೆ ಕೆಳಗಿಳಿದ ಜವಾಹರಲಾಲ್ ನೆಹರೂ ಅವರು ತನ್ನ ಕೈಯಲ್ಲಿದ್ದ ಲಾಠಿಯನ್ನು ಝಳಪಿಸುತ್ತಾ, ಹಿಂಸಾಚಾರ ನಿಲ್ಲಿಸುವಂತೆ ಕೂಗುತ್ತಾ ಗುಂಪಿನತ್ತ ಓಡಿದರು. ನಮ್ಮ ಪ್ರಧಾನಿಯವರೇ ಸ್ವಂತ ಭದ್ರತೆಯನ್ನು ಲೆಕ್ಕಿಸದೇ, ಯಾವುದೇ ಭದ್ರತೆ ಇಲ್ಲದೇ ಕಾರ್ಯಾಚರಣೆಗೆ ಧುಮುಕಿದ್ದನ್ನು ನೋಡಿ ದಂಗಾಗಿಹೋದೆ.

ಹೀಗೆ ನಡೆದಂತೆ, ನಾನು ಚಿಕ್ಕದೊಂದು ಭೇಟಿಗಾಗಿ ಮುಂಬಯಿಗೆ ಹೋಗಿದ್ದವನು ಮಹಮ್ಮದಾಲಿ ರಸ್ತೆಯಲ್ಲಿದ್ದಾಗ ದಿಲ್ಲಿಯ ಬಿರ್ಲಾ ಭವನದಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯಾದ ಸುದ್ದಿ ಬಂತು. ವ್ಯಾಪಾರಿಗಳು ತರಾತುರಿಯಲ್ಲಿ ಅಂಗಡಿ ಬಾಗಿಲುಗಳನ್ನು ಮುಚ್ಚುವುದನ್ನು ಮತ್ತು ಜನರು ಯದ್ವಾತದ್ವಾ ಓಡುವುದನ್ನು ಕಂಡೆ. ಗಾಂಧೀಜಿಯವರನ್ನು ಕೊಂದದ್ದು ಒಬ್ಬ ಹಿಂದೂ ಎಂದು ಆಕಾಶವಾಣಿಯಲ್ಲಿ ಮಾತನಾಡಿದ ಪ್ರಧಾನಿ ನೆಹರೂ ಮತ್ತೆ ಮತ್ತೆ ಹೇಳಿದ್ದನ್ನು ಕೇಳಿ ನಮಗೆಷ್ಟು ಸಮಾಧಾನವಾಯಿತು ಎಂಬುದನ್ನು ನೆನಪಿಸಿಕೊಳ್ಳಬಲ್ಲೆ. ಇದರಿಂದ ಅವರು ಅಲ್ಪಪಸಂಖ್ಯಾತ ಸಮುದಾಯದ ಮೇಲೆ ಕೋಪ ಸ್ಫೋಟಗೊಂಡು ಹಿಂಸಾಚಾರ ನಡೆಯದಂತೆ ಅವರು ಖಾತರಿಪಡಿಸಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರಸಂಗಾವಧಾನತೆ ಮತ್ತು ನಮ್ಮ ದೇಶದ ಜಾತ್ಯಾತೀತ ಸ್ವರೂಪದ ರಕ್ಷಣೆಯ ಅಗತ್ಯದ ಕುರಿತು ಆಳವಾದ ನಂಬಿಕೆಯ ಅಗತ್ಯವಿತ್ತು.

ನಾನು ವರ್ಷಗಳ ಹಿಂದೆ ಕಣ್ಣುತಿರುಗಿಸಿ ನೋಡಿದಾಗ, ಅದರಲ್ಲೂ ಮುಖ್ಯವಾಗಿ ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಗಮನಿಸಿದಾಗ ಅದನ್ನು 1947ರ ಅತ್ಯಂತ ಸ್ಫೋಟಕ ಪರಿಸ್ಥಿತಿಗೆ ಹೋಲಿಸುವುದು ಕಷ್ಟವಲ್ಲ. 2020ರಲ್ಲಿ ಯಾವುದೇ ರಾಜಕೀಯ ನಾಯಕರು ಹಿಂಸಾಚಾರವನ್ನಾಗಲೀ, ನಂತರದಲ್ಲಿ ದೇಶಕ್ಕೆ ಆಳವಾದ ಹಾನಿಯುಂಟುಮಾಡುವ ವಿಭಜನೆಯನ್ನಾಗಲೀ ದೈಹಿಕವಾಗಿ ನಿಯಂತ್ರಿಸಲು ವೈಯಕ್ತಿಕವಾಗಿ ಹಾಜರಿರಲಿಲ್ಲ.

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...