ಕೋವಿಡ್-19 ಬಿಕ್ಕಟ್ಟಿನ ನಡುವೆ ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ರೂಗಳ ನೆರವನ್ನು ಒಂದೇ ಬಾರಿಗೆ ನೀಡುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಲಾಕ್ ಡೌನ್ ನಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಅಸಂಘಟಿತ ವಲಯದಲ್ಲಿ ಕೆಲಸದಲ್ಲಿ ತೊಡಗಿರುವವರಿಗೆ ನೆರವು ನೀಡಬೇಕೆಂದು ಅವರು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.
People have been facing economic hardship of unimaginable proportions bcz of the ongoing pandemic. I appeal to Central Govt to transfer ₹10,000 each as one-time assistance to migrant labourers including people in unorganized sector. A portion of PM-CARES could be used for this.
— Mamata Banerjee (@MamataOfficial) June 3, 2020
ಪ್ರಧಾನಮಂತ್ರಿಗಳು ನಾಗರಿಕ ಸಹಾಯಕ ಮತ್ತು ತುರ್ತುಪರಿಸ್ಥಿತಿಗಳ ನಿಧಿ (PM-CARES) ಯಲ್ಲಿನ ಪರಿಹಾರದ ಒಂದು ಭಾಗವನ್ನು ಈ ಉದ್ದೇಶಕ್ಕಾಗಿ ಬಳಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.
ಜನರು ಸಾಂಕ್ರಾಮಿಕ ರೋಗದಿಂದ ಸಹಿಸಲಾರದ ಪ್ರಮಾಣದಲ್ಲಿ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ ಹಾಗಾಗಿ ಜನರ ನೆರವಿಗೆ ಕೇಂದ್ರ ಸರ್ಕಾರ ಬರಬೇಕೆಂದು ಹೇಳಿದ್ದಾರೆ.
ಅಸಂಘಟಿತ ವಲಯದ ಜನರು ಸೇರಿದಂತೆ ವಲಸೆ ಕಾರ್ಮಿಕರಿಗೆ ಒಂದೇ ಬಾರಿ ನೆರವಿನಂತೆ ತಲಾ 10 ಸಾವಿರ ರೂಪಾಯಿಗಳನ್ನು ಕಾರ್ಮಿಕರ ಖಾತೆಗೆ ನೇರ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಕೊರೊನ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಆರ್ಥ ಮಾಡಿಕೊಂಡು ಸಂತ್ರಸ್ತರ ನೆರವಿಗೆ ಬರಬೇಕೆಂದು ಅವರು ಕೋರಿದ್ದಾರೆ.
ಇದನ್ನೂ ಓದಿ: 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ