Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...