Homeಮುಖಪುಟಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

ಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

- Advertisement -
- Advertisement -

ಬಹುಕೋಟಿ ಬ್ಯಾಂಕ್‌ ವಂಚನೆ ಆರೋಪದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ ಉದ್ಯಮಿ ವಿಜಯ್‌ ಮಲ್ಯ ರನ್ನು ಇಂದು ಭಾರತಕ್ಕೆ ಕರೆತರುವ ಸಾಧ್ಯತೆಯಿದ್ದು ಅವರನ್ನು ಮುಂಬೈನ ಆರ್ಥರ್‌ ಜೈಲಿನಲ್ಲಿಡಲಾಗುತ್ತದೆ ಎನ್ನಲಾಗಿದೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಭಾರತವನ್ನು ತೊರೆದು ಮಾರ್ಚ್ 2, 2016 ರಂದು ಬ್ರಿಟನ್‌ಗೆ ಪಲಾಯನ ಮಾಡಿದ ವಿಜಯ್‌ ಮಲ್ಯ ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಲಂಡನ್ ಸರ್ಕಾರ ಭಾರತಕ್ಕೆ ಇಂದು ರಾತ್ರಿ ಹಸ್ತಾಂತರಿಸಲಿದೆ ಎಂದು ಐಎಎನ್ಎಸ್‌ ವರದಿ ಮಾಡಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ ಎನ್ನಲಾಗಿದೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018 ರ ಆಗಸ್ಟ್‌ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು. ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರೋಡ್ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು. ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದರು.
ಆರ್ಥರ್ ರೋಡ್‌ನ ಎರಡು ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್‌ಗಳಲ್ಲಿ ಇರಿಸಲಾಗುವುದು ಎಂದು ಯುಕೆ ನ್ಯಾಯಾಲಯಕ್ಕೆ ತಿಳಿಸಿದ್ದವು.

ಕೆಲದಿನಗಳ ಹಿಂದೆಯಷ್ಟೇ ವಿಜಯ್‌ ಮಲ್ಯ ಬ್ಯಾಂಕುಗಳ ಸಾಲ ತೀರಿಸಲು ಬದ್ಧನಿದ್ದೇನೆ. ದಯವಿಟ್ಟು ನನ್ನ ಸಾಲ ಮರುಪಾವತಿಯನ್ನು ಒಪ್ಪಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು.

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...