Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...