Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...