Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...