Homeಚಳವಳಿಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ ಉಮರ್‌ ಖಾಲಿದ್ "ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ" ಎಂದು ಹೇಳಿದ್ದಾರೆ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ಗಳಲ್ಲಿ, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಉಮರ್ ಖಾಲಿದ್ ದೆಹಲಿಯಲ್ಲಿ ಪ್ರತಿಭಟನೆ ಮತ್ತು ಗಲಭೆಗಳನ್ನು ಆಯೋಜಿಸಿದ ಗುಂಪಿನ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಉಮರ್‌ ಖಾಲಿದ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. “ಇದರಲ್ಲಿ ಒಂದಿಷ್ಟು ಕೂಡಾ ಸತ್ಯವಿಲ್ಲ” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ದ ನಡೆದ ಪ್ರತಿಭಟನೆಗಳ ನಂತರ, ಈಶಾನ್ಯ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕಾರ್ಕಾರ್ಡೂಮಾ ನ್ಯಾಯಾಲಯಗಳಲ್ಲಿ ದಾಖಲಾದ ಚಾರ್ಜ್‌ಶೀಟ್‌ಗಳಲ್ಲಿ ಗಲಭೆಯ ಸಮಯದಲ್ಲಿ “ಪ್ರಮುಖ ಪಾತ್ರ” ವಹಿಸಿದ್ದಾರೆಂದು ಕೇಸು ದಾಖಲಿಸಲ್ಪಟ್ಟ ಆಮ್ ಆದ್ಮಿ ಪಾರ್ಟಿ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರ ಮೇಲೆ ಹಾಕಲಾಗಿದ್ದ ಚಾರ್ಜ್‌ಶೀಟ್‌ಗಳಲ್ಲಿ ಉಮರ್‌ ಖಾಲೀದ್ ಅವರ ಹೆಸರು ಸಹ ಕಾಣಿಸಿಕೊಂಡಿದೆ.

ತಾಹಿರ್‌ ಹುಸೇನ್ ವಿರುದ್ಧ ಪ್ರಕರಣ

‍ಗಲಭೆ, ಕ್ರಿಮಿನಲ್ ಪಿತೂರಿ, ದೌರ್ಜನ್ಯ, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ತಾಹಿರ್‌ ಹುಸೇನ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಸ್ಪೋಟಕಗಳನ್ನು ಮತ್ತು ತನ್ನ ಚಾಂದ್‌ಬಾಗ್ ಮನೆಯಿಂದ ಹಿಂಸಾಚಾರವನ್ನು ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅವರ ನಿವಾಸದ ಬಳಿಯೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಫೆಬ್ರವರಿ 24 ರಂದು ಕೊಲೆ ಮಾಡಲಾಗಿತ್ತು.

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತಾಹಿರ್‌ ಹುಸೇನ್ ಮತ್ತು ಅವರ ಕಿರಿಯ ಸಹೋದರ ಶಾ ಆಲಂ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22 ರಂದು ತಾಹಿರ್‌ ಹುಸೇನ್ ತನ್ನ ಪರವಾನಿಗೆ ಪಡೆದ ಪಿಸ್ತೂಲನ್ನು ಪೊಲೀಸ್ ಠಾಣೆಯಿಂದ ವಾಪಾಸು ಪಡೆದಿದ್ದಾರೆ ಹಾಗೂ ಪರವಾನಿಗೆಯ ಆಧಾರದ ಮೇಲೆ 100 ಕಾರ್ಟ್ರಿಜ್‌ಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅವರಿಂದ ಕೇವಲ 64 ಲೈವ್ ಕಾರ್ಟ್ರಿಜ್‌ಗಳು ಮತ್ತು 22 ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು,  ಮದ್ದುಗುಂಡುಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಹಿರ್‌ ಹುಸೇನ್ ಜನವರಿ ತಿಂಗಳಲ್ಲಿ ಉಮರ್‌ ಸೈಫಿ ಅವರಿಂದ ಸುಮಾರು 1.10 ಕೋಟಿ ರೂ.ಗಳನ್ನು ಪಡೆದು ಕೆಲವು ನಕಲಿ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನಾಕಾರರು, ಅವರ ಬೆಂಬಲಿಗರು ಮತ್ತು ಅವರ ಪ್ರದೇಶದ ಇತರ ವ್ಯಕ್ತಿಗಳಿಗೆ ಈ ಹಣವನ್ನು ತಾಹಿರ್‌ ಹುಸೇನ್ ವಿತರಿಸಿದ್ದಾರೆ ಎಂಬುದು ಪೊಲೀಸ್ ಆರೋಪ.

ಇಡೀ ಪ್ರಕರಣದಲ್ಲಿ ಉಮರ್ ಖಾಲಿದ್‌‌ನನ್ನು ಎಳೆದು ತಂದಿದ್ದು ಹೇಗೆ:

ದೆಹಲಿ ಗಲಭೆಗೆ ಒಂದು ತಿಂಗಳು ಮೊದಲು ಜನವರಿ 8 ರಂದು ತಾಹಿರ್‌ ಹುಸೇನ್ ಅವರು ಶಹೀನ್ ಬಾಗ್‌‌ನ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಯುನೈಟೆಡ್ ಎಗೇನ್ಸ್ಟ್ ಹೇಟ್‌‌ನ ಉಮರ್ ಖಾಲಿದ್ ಮತ್ತು ಖಲೀದ್ ಸೈಫಿಯನ್ನು ಭೇಟಿಯಾದರು ಎಂದು ಮಾಧ್ಯಮಗಳು ಹೇಳಿವೆ. “ಟ್ರಂಪ್ ಭೇಟಿಯ ಸಮಯದಲ್ಲಿ ಏನಾದರೂ ದೊಡ್ಡ / ಗಲಭೆಗಳಿಗೆ ಸಿದ್ಧರಾಗಿ” ಎಂದು ಉಮರ್ ಅವರನ್ನು ಕೇಳಿಕೊಂಡಿದ್ದಾರೆ ಮತ್ತು “ಅವರು ಮತ್ತು ಇತರರು ಆರ್ಥಿಕವಾಗಿ ತಾಹಿರ್‌ ಹುಸೇನ್ ಅವರಿಗೆ ಸಹಾಯ ಮಾಡಿದ್ದಾರೆ” ಎಂದು ಈ ವರದಿಗಳು ಆರೋಪಿಸಿವೆ.

ಈ ವರದಿಗಳು ತಾಹಿರ್‌ ಹುಸೇನ್ ಅವರ ಮೇಲಿನ ಚಾರ್ಜ್‌ಶೀಟ್, ಪೊಲೀಸರ ಪ್ರಶ್ನೆ, ಅವರ ಕರೆ ವಿವರದ ದಾಖಲೆಯನ್ನು ಆಧರಿಸಿ ತಯಾರಾಗಿದೆ. ತಾಹಿರ್‌ ಹುಸೇನ್ ಅವರಿಗೆ ಸೈಫಿ ಅವರು ಗಲಭೆ ನಡೆಸಲು ದುಡ್ಡು ನೀಡಿದ್ದು, ತಾಹಿರ್‌ ಅವರು ಈ ದುಡ್ಡನ್ನು ಸಿಎಎ ವಿರೋಧಿ ಪ್ರತಿಭಟನಾಕಾರರರಿಗೆ ಹಂಚಿ, ಸಿಎಎ ಪರ ಇರುವವರಿಗೆ ಪಾಠ ಕಲಿಸುವಂತೆ ಹೇಳಲಾಯೆತು ಎಂದು ಈ ವರದಿಗಳು ಹೇಳುತ್ತವೆ.‌

ಆರೋಪದಲ್ಲಿ ಒಂದಿಷ್ಟೂ ನಿಜವಿಲ್ಲ

ಇವುಗಳಿಗೆ ಪ್ರತಿಕ್ರಿಯಿಸಿರುವ ಉಮರ್‌ ಖಾಲಿದ್ “ನಾನು ಚಾರ್ಜ್‌ಶೀಟ್ ಓದಿಲ್ಲ. ಆದರೆ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಅದರಲ್ಲಿನ ಒಂದಿಷ್ಟೂ ನಿಜವಿಲ್ಲ” ಎಂದು ಹೇಳಿದ್ದಾರೆ.

ಬಂಧಿತ 12 ಜೆಸಿಸಿ ಸದಸ್ಯರ ವಿರುದ್ಧ ಪ್ರತ್ಯೇಕ ಚಾರ್ಜ್‌ಶೀಟ್

ಈ ಮಧ್ಯೆ ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಮಹಿಳಾ ಗುಂಪಿನ ಇಬ್ಬರು ಕಾರ್ಯಕರ್ತರು ಸೇರಿದಂತೆ 12 ಜನರ ವಿರುದ್ಧ ಪೊಲೀಸರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬಂಧನಕ್ಕೊಳಗಾದ 12 ಜನರಲ್ಲಿ ಯಾರೊಬ್ಬರೂ ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಲ್ಲ. ಆದರೆ ಇಬ್ಬರು ಪಿಂಜ್ರಾ ತೋಡ್‌ ಕಾರ್ಯಕರ್ತರು ಜಾಫ್ರಾಬಾದ್ ಪ್ರತಿಭಟನೆಯ ಸಮಿತಿ ರಚಿಸಿದ ಉಪ-ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ತನಿಖೆಗೆ ಸಂಬಂಧಿಸಿದ ಅಪರಾಧ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ 12 ಮಂದಿಯಲ್ಲಿ ಯಾರಿಗೂ ಜಾಮೀನು ಸಿಕ್ಕಿಲ್ಲ.

ಬಂಧನಕ್ಕೊಳಗಾದ ಈ 12 ಮಂದಿಯ ಮೇಲೆ ಕೊಲೆ, ಕೊಲೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ. ಅವರು ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣವನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ನಿರ್ವಹಿಸುತ್ತಿದೆ. ಎಲ್ಲಾ ಆರೋಪಿಗಳು ಜಾಮಿಯಾ ಸಮನ್ವಯ ಸಮಿತಿಯ ನೋಂದಾಯಿತ ಸದಸ್ಯರಾಗಿದ್ದರೆ, ಅವರಲ್ಲಿ ಇಬ್ಬರು ಪಿಂಜ್ರಾ ತೋಡ್ ಕಾರ್ಯಕರ್ತರು ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರತಿಭಟನಾ ಸ್ಥಳಕ್ಕಾಗಿ ಜೆಸಿಸಿ ರಚಿಸಿದ ಉಪ ಗುಂಪಿನ ಉಸ್ತುವಾರಿ ವಹಿಸಿದ್ದಾರೆ ಎಂದು ಅದು ಹೇಳಿದೆ.

ಈ ಪ್ರಕರಣವು ಫೆಬ್ರವರಿ 25 ರಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದೆ. ಸ್ಥಳದಲ್ಲಿ ಸ್ಪೋಟಿಸಿದ 35 ಕಾರ್ಟ್ರಿಜ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆಗೂ ಪಿಂಜ್ರಾ ತೋಡ್‌‌ಗೂ ಏನೂ ಸಂಬಂಧವಿಲ್ಲ ಎಂದು ಪಿಂಜ್ರಾ ತೋಡ್ ಆರೋಪವನ್ನು ನಿರಾಕರಿಸಿದ್ದು, ಪೊಲೀಸರ ಈ ಕ್ರಮವನ್ನು ವಿಚ್‌ ಹಂಟ್ (Witch-Hunt) ಎಂದು ಕರೆದಿದೆ.


ಓದಿ: ಪಿಂಜ್ರಾ ಟೋಡ್ ಸಂಘಟನೆಯ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳನ್ನು ವಿರೋಧಿಸುವವರನ್ನು ಜೈಲಿಗೆ ಹಾಕಬೇಕೆಂಬ ಪಿತೂರಿ ಕಾರ್ಯರೂಪಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...