Homeಮುಖಪುಟ120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ಎಸ್‌ಪಿಬಿಯವರ ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ ಎನ್ನುತ್ತಾರೆ ಸಂಗೀತ ಸಂಯೋಜಕ ಕೆ.ಕಲ್ಯಾಣ್‌

- Advertisement -
- Advertisement -

ಭಾರತದ ಹೆಮ್ಮೆಯ ಹಿನ್ನೆಲೆಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿವಿಧ ಭಾಷೆಗಳ ನೂರಿಪ್ಪತ್ತಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ. ಇಂದು (ಜೂನ್ 4) ಅವರ ಜನ್ಮದಿನ. ತಾವು ರಚಿಸಿದ, ಸಂಗೀತ ಸಂಯೋಜಿಸಿದ ಅತಿ ಹೆಚ್ಚು ಹಾಡುಗಳನ್ನು ಎಸ್‌ಪಿಬಿಯವರೇ ಹಾಡಿರೋದು ಎನ್ನುತ್ತಾರೆ ಸಂಗೀತ ಸಂಯೋಜಕ ಕಲ್ಯಾಣ್. ಹುಟ್ಟುಹಬ್ಬದಂದು ಕಲ್ಯಾಣ್ ತಮ್ಮ ನೆಚ್ಚಿನ ಗಾಯಕನನ್ನು ನೆನಪು ಮಾಡಿಕೊಂಡಿದ್ದಾರೆ.

***

ಎಪ್ಪತ್ಮೂರು ವರ್ಷ ಪೂರೈಸಿ, ಎಪ್ಪತ್ನಾಲ್ಕಕ್ಕೆ ಕಾಲಿಡುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಬಗ್ಗೆ ಮಾತನಾಡಲು ಖುಷಿಯಾಗುತ್ತದೆ. ನಾನು ಕಂಡಂತೆ ಅವರೊಬ್ಬ ಒಳ್ಳೆಯ ಹ್ಯೂಮನ್ ಬೀಯಿಂಗ್. ಅತ್ಯಂತ ಮಾನವೀಯತೆ ಇರುವಂತಹ ವ್ಯಕ್ತಿ. ಅವರ ದನಿಯನ್ನಷ್ಟೇ ಕೇಳುತ್ತಾ ಬಂದಿರುವ ಜನರಿಗೆ ಎಸ್‌ಪಿಬಿ ಅವರ ಮನಸು ಕರಗುವಂತಹ ಗುಣ ಗೊತ್ತಿರಲಿಕ್ಕಿಲ್ಲ. ಸಾಮಾನ್ಯವಾಗಿ ಹೊಸ ಹಾಡೊಂದನ್ನು ಅವರಿಂದ ಹಾಡಿಸುವ ಮುನ್ನ ಸಂಗೀತ ಗಾಯಕರು ಮೊದಲು ಟ್ರ್ಯಾಕ್ ಸಿಂಗರ್‌ಗಳಿಂದ ಹಾಡಿಸುತ್ತಾರೆ. ಅದನ್ನು ಆಲಿಸಿದ ನಂತರವಷ್ಟೇ ಎಸ್‌ಪಿಬಿ ಹಾಡೋದು. ಒಂದೊಮ್ಮೆ ಟ್ರ್ಯಾಕ್ ಸಿಂಗರ್ ಸೊಗಸಾಗಿ ಹಾಡಿದ್ದರೆ, ಅದೇ ದನಿಯನ್ನು ಉಳಿಸಿಕೊಳ್ಳುವಂತೆ ಅವರು ಸಂಗೀತ ನಿರ್ದೇಶಕರಿಗೆ ಸೂಚಿಸುತ್ತಾರೆ. ಹೀಗೆ, ಅವರ ಪ್ರೋತ್ಸಾಹ, ಹಾರೈಕೆಯಿಂದ ಹಲವು ಯುವ ಗಾಯಕರು ಬೆಳೆದಿದ್ದಾರೆ.

ಮದರಾಸಿನ ರೇವತಿ ಸ್ಟುಡಿಯೋದಲ್ಲಿ “ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣದ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಎಸ್ಪಿಬಿ. ಫೋಟೋ ಸೆರೆಹಿಡಿದವರು: ಪ್ರಗತಿ ಅಶ್ವತ್ಥ ನಾರಾಯಣ

ಕನ್ನಡದಲ್ಲಿ ಅವರು ಮೊದಲು ಹಾಡಿದ್ದು “ನಕ್ಕರೆ ಅದೇ ಸ್ವರ್ಗ’ (1967) ಚಿತ್ರಕ್ಕೆ. ಇದು ಅವರ ವೃತ್ತಿ ಬದುಕಿನ ಎರಡನೇ ಹಾಡು ಎನ್ನುವುದು ವಿಶೇಷ. ಆನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಕನ್ನಡದ ಎಲ್ಲಾ ಪ್ರಮುಖ ನಾಯಕನಟರಿಗೆ ಅವರು ದನಿಯಾಗಿದ್ದಾರೆ. ಹಿಂದಿ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳ 120ಕ್ಕೂ ಹೆಚ್ಚು ಮುಂಚೂಣಿ ನಾಯಕನಟರಿಗೆ ಅವರು ಹಾಡಿದ್ದಾರೆ ಎನ್ನುವುದೊಂದು ಅಪರೂಪದ ದಾಖಲೆಯೇ ಸರಿ. ನನ್ನ ರಚನೆ ಮತ್ತು ಸಂಗೀತ ಸಂಯೋಜನೆಯ ಶೇ.80ರಷ್ಟು ಹಾಡುಗಳನ್ನು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿದ್ದೇನೆ. “ಮುದ್ದಿನ ಮಾವ’ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಿದ್ದರು. ಈ ಸಿನಿಮಾದಲ್ಲಿ ಅವರು ಅಭಿನಯಿಸಿದ “ದೀಪಾವಳಿ ದೀಪಾವಳಿ…’ ಗೀತೆಯನ್ನು ಡಾ.ರಾಜಕುಮಾರ್ ಹಾಡಿದ್ದರು. ಇದೊಂದು ಅಪರೂಪದ ಸನ್ನಿವೇಶವಾಗಿ ದಾಖಲಾಗಿದೆ.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಲ್ಲೊಂದು ವಿಶೇಷ ಶಕ್ತಿಯಿದೆ. ಅವರು ಯಾವುದೇ ಒಂದು ಸನ್ನಿವೇಶವನ್ನು ಒಂದೇ ನೋಟದಲ್ಲಿ ಗ್ರಹಿಸಬಲ್ಲರು. ಇನ್ನು ಅವರ ಸ್ಮರಣಶಕ್ತಿಯೂ ಅದ್ಭುತ. ಯಾವುದೇ ಒಂದು ಘಟನೆ, ವ್ಯಕ್ತಿ ಒಂದು ಬಾರಿ ತಮ್ಮ ಮನಸ್ಸಿನ ಸ್ಮೃತಿಪಟಲಕ್ಕೆ ಸೇರ್ಪಡೆಯಾದರೆ ಅವರು ಯಾವತ್ತಿಗೂ ಮರೆಯೋದಿಲ್ಲ. ನೊಂದವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಅವಕಾಶವನ್ನು ಅವರೆಂದೂ ಕಳೆದುಕೊಳ್ಳುವುದಿಲ್ಲ. ಸೋಷಿಯಲ್ ಕಾಸ್‍ಗೋಸ್ಕರ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಿಗೆ ಅವರು ಸಂಭಾವನೆ ಪಡೆಯದೆ ಹಾಡುತ್ತಾರೆ. ಮತ್ತೊಬ್ಬರಿಗೆ ಗೊತ್ತಾಗದಂತೆ, ಪ್ರಚಾರ ಬಯಸದೆ ಹಲವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇನ್ನು ಅವರ ಸರಳತೆ, ವಿನಮ್ರತೆ ಅನುಕರಣೀಯ. ದೊಡ್ಡ ಸಂಗೀತ ನಿರ್ದೇಶಕನಿಗೆ ತೋರುವ ವಿನಮ್ರತೆಯನ್ನೇ ಹದಿನೈದಿಪ್ಪತ್ತು ವರ್ಷದ ಸಂಗೀತ ನಿರ್ದೇಶಕನಿಗೂ ತೋರುತ್ತಾರೆ.

ಎಸ್‌ಬಿಪಿಯವರೊಂದಿಗೆ ಕೆ.ಕಲ್ಯಾಣ್

ಅವರು ಮಹಾನ್ ದೈವಭಕ್ತ. ಶಿವನ ಆರಾಧಕರು. ಚಿಕ್ಕವಯಸ್ಸಿನಲ್ಲೇ ಜೇನುತುಪ್ಪದಲ್ಲಿ ಶಿವನಿಗೆ ಅಭಿಷೇಕ ಮಾಡುತ್ತಿದ್ದರಂತೆ. ಇವರ ತಂದೆ ಹರಿಕಥಾ ವಿದ್ವಾನ್. ಹಾಗಾಗಿ ಚಿಕ್ಕಂದಿನಿಂದಲೇ ಅವರಿಗೆ ಹಾಡುಗಾರಿಕೆ ಒಲಿಯಿತು. ಇನ್ನು ಸಂಸ್ಕೃತ ಭಾಷೆಯ ಮೇಲೆ ಅವರಿಗೆ ತುಂಬಾ ಹೋಲ್ಡ್ ಇದೆ. ಮಾತೃಭಾಷೆ ತೆಲುಗು ಆದರೂ ಯಾವುದೇ ಭಾಷೆಯಲ್ಲಿ ಹಾಡಿದರೂ ಆಯಾ ಭಾಷಿಕರನ್ನು ಬೆರಗುಗೊಳಿಸುವಂತೆ ಹಾಡುತ್ತಾರೆ. ಯಾವುದೇ ಪ್ರಾದೇಶಿಕ ಭಾಷೆಗೆ ಹಾಡುವಾಗ ಆಯಾ ಪ್ರಾದೇಶಿಕತೆಯ ಸೊಗಡನ್ನು ಮನಸಲ್ಲಿಟ್ಟುಕೊಂಡು ಹಾಡುತ್ತಾರೆ ಎನ್ನುವುದು ವಿಶೇಷ.

ಎಸ್‌ಪಿಬಿ ತುಂಬಾ ಒಳ್ಳೇ ಸ್ವರಜ್ಞಾನಿ. ದೊಡ್ಡ ಸಾಧಕರಾದರೂ ಈಗಲೂ ತಾವು ಸಂಗೀತ ಕಲಿತಿಲ್ಲ ಎಂದೇ ಹೇಳಿಕೊಳ್ಳುತ್ತಾರೆ. ಅವರ ದನಿಯಲ್ಲಿನ ಮಾರ್ಪಾಡು ಇದೆಯಲ್ಲ, ಅದನ್ನು ಅವರ ಹಾಗೆ ಕೊಡಬಲ್ಲಂತಹ ಮತ್ತೊಬ್ಬ “ಕಮರ್ಷಿಯಲ್ ಗಂಧರ್ವ” ಬಹುಶಃ ಭಾರತದಲ್ಲಿ ಮತ್ತೊಬ್ಬರು ಸಿಗಲಾರರು. ಅರಂಭದಲ್ಲಿ ಅವರಿಗದ್ದಂತಹ ಪಿಚ್ ಫೋರ್ಸ್ (ಕಂಠದಿಂದ ಬರುವ ಸೌಂಡ್ ಫ್ರೀಕ್ವೆನ್ಸಿ) ಈಗಲೂ ಹಾಗೇ ಇದೆ! ಅದೇ ಧ್ವನಿ, ಡೆಪ್ತ್, ಮಾಧುರ್ಯ. ಇದನ್ನು ಕಾಪಾಡಿಕೊಂಡು ಬಂದಿರೋದು ಅವರ ದೊಡ್ಡ ತಪಸ್ಸು. ಇದಕ್ಕೆ ಸಾಧನೆಯ ಜೊತೆ ದೇವರ ಅನುಗ್ರಹವೂ ಇರಬೇಕಾಗುತ್ತದೆ. ಈ ವಿಷಯದಲ್ಲಿ ಎಸ್‌ಪಿಬಿ ಅವರಿಗೆ ಎಸ್‌ಪಿಬಿ ಅವರೇ ಸಾಟಿಯಾಗುತ್ತಾರೆ. ಅವರ ಹುಟ್ಟುಹಬ್ಬವನ್ನು ಗಂಧರ್ವ ದಿನ ಎಂದು ಕರೆದರೆ ಅತಿಶಯೋಕ್ತಿಯಾಗದು.

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ವೈರಲ್ ಆದ ಬೈ ಬೈ ಕೊರೊನಾ ಹಾಡು ಹಂಸಲೇಖರವರ ಸಂಗೀತ ಸಂಯೋಜನೆಯಲ್ಲಿ.. ಇನ್ನೂ ನೋಡದವರಿಗಾಗಿ…

Posted by Naanu Gauri on Monday, March 30, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...