Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...