Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...