Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...