Homeಮುಖಪುಟಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಇಷ್ಟು ದಿನ ಬ್ಯಾಂಕುಗಳ ವಿಲೀನದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಾಡಲು ಮುಂದಾಗಿದೆ. ಈ ಕುರಿತು ನೀತಿ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದು, ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಸಿದ್ದವಾಗುತ್ತಿದೆ ಎನ್ನಲಾಗುತ್ತಿದೆ.

2017 ರಿಂದಲೂ ಕೇಂದ್ರ ಸರ್ಕಾರ ಈ ಬಗ್ಗೆ ಯೋಚಿಸುತ್ತಿದೆ. ಆದರೆ ಬ್ಯಾಂಕ್‌ ನೌಕರರ ವ್ಯಾಪಕ ವಿರೋಧದಿಂದಾಗಿ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ಪ್ರಸ್ತುತ ಇರುವ ಕೊರೊನಾ ಲಾಕ್‌ಡೌನ್‌ನ ಲಾಭ ಪಡೆದು ಖಾಸಗೀಕರಣಗೊಳಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ ಪಂಜಾಬ್ ಸಿಂಧ್‌ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎನ್ನಲಾಗಿದೆ.

ಇಷ್ಟು ದಿನ ಸರ್ಕಾರವು ಹಲವು ಬ್ಯಾಂಕುಗಳ ವಿಲೀನಗೊಳಿಸುವ ಕೆಲಸದಲ್ಲಿ ಮಗ್ನವಾಗಿತ್ತು. ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದೊಂದಿಗೆ ಹಾಗೆಯೇ ವಿಜಯ ಬ್ಯಾಂಕು  ಮತ್ತು ಬ್ಯಾಂಕ್‌ ಆಫ್‌ ಬರೋಡವು ದೇನಾ ಬ್ಯಾಂಕ್‌ ಜೊತೆಗೆ ವಿಲೀನವಾಗಿದೆ. ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ 10 ಬ್ಯಾಂಕುಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸಿದ್ದನ್ನು ಅದರ ಮುಂದುವರಿದ ಭಾಗವಾಗಿ ಈಗ ಬ್ಯಾಂಕುಗಳನ್ನೇ ಖಾಸಗೀಯವರಿಗೆ ಧಾರೆಯೆರೆದುಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ನೀತಿ ಆಯೋಗವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗಿಯವರು ದೀರ್ಘಕಾಲದ ಬಂಡವಾಳ ಹೂಡಲು ಅವಕಾಶ ಮಾಡಿಕೊಡುವಂತೆ ಹಾಗೂ ಆಯ್ದ ಕೆಲ ಕೈಗಾರಿಕಾ ಸಂಸ್ಥೆಗಳ ಸಮೂಹಗಳಿಗೆ ಸಾಲ ಕೊಡದಂತೆ ತಾಕೀತು ಮಾಡಿ ಖಾಸಗೀಕರಗೊಳಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಈ ನಡುವೆ ಭಾರತೀಯ ಮಜ್ದೂರ್‌ ಸಂಘ (ಬಿಎಂಸಿ) ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ಜೂನ್‌ 10 ರಾಷ್ಟ್ರವ್ಯಾಪಿ ಧರಣಿಗೆ ಕರೆ ಕೊಟ್ಟಿದೆ. “ಸೇವ್‌ ಪಬ್ಲಿಕ್‌ ಸೆಕ್ಟರ್‌, ಸೇವ್‌ ಇಂಡಿಯಾ” ಎಂಬ ಅಭಿಯಾನವನ್ನು ಆರಂಭಿಸಿದೆ.


ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಕ್ ಇನ್ ಇಂಡಿಯಾ ಬುಲೆಟ್ ಟ್ರೈನ್ ಮತ್ತು ಸ್ಮಾರ್ಟ್ ಸಿಟಿ ಮಾಡಲಿಕ್ಕೆ ಹಣಕಾಸು ಬೇಕಾಗಿರಬಹುದು ಸರ್ಕಾರಿ ಬ್ಯಾಂಕುಗಳನ್ನು ಖಾಸಗಿಯಾಗಿ ಪರಿವರ್ತಿಸಬೇಕೆಂಬ ನರೇಂದ್ರ ಮೋದಿ ರವರ ಹುಚ್ಚುತನದ ಆಟಕ್ಕೆ
    ದೇಶದ ನಾಗರೀಕರು ಏನನ್ನಬೇಕು ಎನ್ನುವುದು ತಿಳಿಯದಾಗಿದೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...