Homeಅಂತರಾಷ್ಟ್ರೀಯಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

ಉದ್ಯಮಿ ’ವಿಜಯ ಮಲ್ಯ’ ಭಾರತ ಹಸ್ತಾಂತರಕ್ಕೆ ತೊಡಕು, ಮತ್ತಷ್ಟು ವಿಳಂಬ.

- Advertisement -
- Advertisement -

ಮದ್ಯದ ದೊರೆ ಉದ್ಯಮಿ ವಿಜಯ ಮಲ್ಯ ಅವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೊಸ ಕಾನೂನು ತೊಡಕು ಎದುರಾಗಿದ್ದು, “ಮುಂದಿನ ಕಾನೂನು ಸಮಸ್ಯೆ ಬಗೆಹರಿಸದ ಹೊರತು ಮಲ್ಯ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುವುದಿಲ್ಲ” ಎಂದು ಎಂದು ಬ್ರಿಟಿಷ್ ಹೈಕಮಿಷನ್ ಇಂದು ಸ್ಪಷ್ಟಪಡಿಸಿದೆ.

ಭಾರತಕ್ಕೆ ತನ್ನನ್ನು ಹಸ್ತಾಂತರಿಸುವುದನ್ನು ವಿರೋಧಿಸಿ ವಿಜಯ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಕಳೆದ ಮೇ 14ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಲ್ಯ ಅವರನ್ನು ಶೀಘ್ರದಲ್ಲಿ ಭಾರತಕ್ಕೆ ಕರೆತರಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಇದರ ಕುರಿತು ಇಂದು ಬ್ರಿಟೀಷ್ ಹೈಕಮಿಷನ್ ನೀಡಿರುವ ಹೇಳಿಕೆಯೂ ವಿಜಯ್ ಮಲ್ಯನನ್ನು ಭಾರತಕ್ಕೆ ಕರೆತರುವುದು ಮತ್ತಷ್ಟು ವಿಳಂಬವಾಗುವಂತಾಗಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಬ್ರಿಟೀಷ್‌ ಹೈಕಮಿಷನ್‌ ವಕ್ತಾರರು, “ಭಾರತಕ್ಕೆ ಹಸ್ತಾಂತರ ಮಾಡುವ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಸುಪ್ರೀಂ ಕೋರ್ಟ್ಗೆ ಈಗಾಗಲೇ ನಿರಾಕರಿಸಿದೆಯಾರೂ, ಅವರನ್ನು ಹಸ್ತಾಂತರಿಸುವ ವ್ಯವಸ್ಥೆ ಮಾಡುವ ಮೊದಲು ಇನ್ನೂ ಹೆಚ್ಚಿನ ಕಾನೂನು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಯುಕೆ ಕಾನೂನಿನ ಪ್ರಕಾರ ಹಸ್ತಾಂತರಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳು ಪರಿಹಾರವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಸಾಧ್ಯವಿಲ್ಲ. ಸಮಸ್ಯೆ ಗೌಪ್ಯವಾಗಿದೆ. ಇದರ ವಿವರಗಳನ್ನು ಸದ್ಯಕ್ಕೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಈ ಸಮಸ್ಯೆಯನ್ನು ಪರಿಹರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಸಹ ನಾವು ಅಂದಾಜಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲು ಯತ್ನಿಸುತ್ತೇವೆ” ಎಂದು ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕುಸಿತ ಕಂಡ ಪರಿಣಾಮವಾಗಿ ವಿಜಯ ಮಲ್ಯ ಭಾರತದಿಂದ ಲಂಡನ್‌ಗೆ ಪರಾರಿಯಾಗಿದ್ದರು. ವಿಜಯ್ ಮಲ್ಯ ಭಾರತದಲ್ಲಿ ಸುಮಾರು 9,000 ಕೋಟಿ ವಂಚನೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ 2018 ರಲ್ಲೇ ಯುಕೆ ಹೈಕೋರ್ಟ್ ಆದೇಶಿಸಿತ್ತು. ಇದರ ವಿರುದ್ದ ಮಲ್ಯ ಯುಕೆ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈಗ ಸುಪ್ರೀಂ ಕೋರ್ಟ್ ಕೂಡಾ ಅರ್ಜಿಯನ್ನು ವಜಾ ಮಾಡಿದೆ.

ಯುಕೆ ಹಸ್ತಾಂತರ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ 28 ದಿನಗಳ ಆದೇಶದೊಂದಿಗೆ ಹಸ್ತಾಂತರಿಸಬೇಕಾಗುತ್ತದೆ. ಒಂದು ವೇಳೆ ಹೀಗೆ ಲಂಡನ್‌ಗೆ ಆಶ್ರಯ ಹರಸಿ ಬಂದಿದ್ದ ವ್ಯಕ್ತಿಯು ಆಶ್ರಯ ಹಕ್ಕು ಪಡೆದಿದ್ದರೆ, ಇದು ಯುಕೆಯಲ್ಲಿ ನಿರಾಶ್ರಿತರಾಗಿ ಉಳಿಯಬೇಕೆಂಬ ಮನವಿಯನ್ನು ಸೂಚಿಸುತ್ತದೆ. ಈ ಹಕ್ಕು ಇತ್ಯರ್ಥವಾಗದ ಹೊರತು ಆ ವ್ಯಕ್ತಿಯನ್ನು ಹಸ್ತಾಂತರಿಸಲು ಮಾಡಲು ಸಾಧ್ಯವಿಲ್ಲ.

ಆರ್ಥಿಕ ಅಪರಾಧಿ ವಿಜಯ ಮಲ್ಯ ಯುಕೆಯ ಆಶ್ರಯ ಹಕ್ಕನ್ನು ಹೊಂದಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದು ಸ್ಪಷ್ಟವಾಗುವವರೆಗೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವುದು ಸಾಧ್ಯವಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.


ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...