Homeಅಂಕಣಗಳುಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು.

- Advertisement -
- Advertisement -

ರೈತರ ಸಾಲಮನ್ನಾ ಪ್ರಹಸನಕ್ಕೆ ಇತಿಶ್ರೀ ಹಾಡಿ ಅವರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಗೊತ್ತು ಮಾಡಿ ಎಂದು ಸರ್ಕಾರಕ್ಕೆ ಆಗ್ರಹ ಪೂರ್ವಕವಾಗಿ ಹೇಳುತ್ತಿದ್ದೇನೆ.

ರೈತರ ಸಾಲಮನ್ನಾ ಶ್ರೀಮಂತ ರೈತರಿಗೆ ಒಂದು ವರದಾನ. ಪ್ರತಿವರ್ಷ ಈ ಶ್ರೀಮಂತ ರೈತರು ಒಂದು ಲಕ್ಷ, ಎರಡು ಲಕ್ಷ ಬ್ಯಾಂಕಿನಿಂದ ಸಾಲ ಪಡೆಯುವುದು ವರ್ಷದ ಕೊನೆಯಲ್ಲಿ ಆ ಸಾಲಮನ್ನಾ ಮಾಡಿಸುವುದು. ಹತ್ತಾರು ವರ್ಷಗಳಿಂದ ನಡೆದೇ ಇದೆ. ಶ್ರೀಮಂತ ರೈತರು ಸೈಟು ಕೊಳ್ಳುವುದು, ಕಂಪೆನಿ ಷೇರುಕೊಳ್ಳುವುದಕ್ಕೆ, ವ್ಯವಸಾಯದ ಜೊತೆಗೆ ಅಕ್ಕಿ ಗಿರಣಿ, ಕಿರಾಣಿ ವ್ಯಾಪಾರ ಮಳಿಗೆ ತೆರೆಯಲು ಈ ಸಾಲಮನ್ನಾ ಹಣ ಬಳಕೆಯಾಗುತ್ತಿದೆ.

ಎರಡು ನಾಲ್ಕು ಎಕರೆ ಜಮೀನು ಹೊಂದಿದವರು ರೈತಾಪಿಗಳಲ್ಲವೇ? ಇಂತಹವರು ಶೇ.60ರಷ್ಟು ಜನ ಇದ್ದಾರೆ. ಇವರಿಗೆ ಸಿಗುವ ಸಾಲ ಬಹಳ ಕಡಿಮೆ. ಇವರಿಗೆ ಸಾಲದ ಬದಲು ಪವರ್ ಟಿಲ್ಲರ್‍ನಲ್ಲಿ ಇವರ ಭೂಮಿಯನ್ನ ಉಚಿತವಾಗಿ ಉತ್ತಿ ಕೊಡಬೇಕು, ಕಟಾವು ಮಾಡುವ ಸಾಧನೆ ಡ್ರೈಯರ್ ಹಾರ್ವೆಸ್ಟರ್‍ಗಳನ್ನು ಸಕಾಲದಲ್ಲಿ ಉಚಿತವಾಗಿ ಒದಗಿಸಬೇಕು.

ಕಾರ್ಖಾನೆಯಲ್ಲಿ ತಯಾರಾದ ಪದಾರ್ಥಕ್ಕೆ ಬೆಲೆ ನಿರ್ಧರಿಸುವಾಗ ಅಲ್ಲಿ ಅನುಸರಿಸುವ ಎಲ್ಲ ನಿಯಮಗಳನ್ನೂ ವೈಜ್ಞಾನಿಕವಾಗಿ ರೈತನಿಗೂ ಅನುಸರಿಸಬೇಕು. ವೈಜ್ಞಾನಿಕವಾಗಿ ಬೆಳೆದ ಬೆಳೆಗೆ ಬೆಲೆ ನಿರ್ಧರಿಸಲು ಒಂದು ವ್ಯವಸ್ಥೆ ಮಾಡಲಾಗಿತ್ತು. ಆ ಸಮಿತಿ ತನ್ನ ಅಂತಿಮ ವರದಿ ನೀಡಿದೆ. ಅದನ್ನು ಸರ್ಕಾರ ಕೂಡಲೇ ಅಂಗೀಕರಿಸಿ ಚಾಲ್ತಿಗೆ ಕೊಡಬೇಕು. ಸಾಲಮನ್ನಾ ಹುನ್ನಾರವನ್ನು ಕೊನೆಗಾಣಿಸಬೇಕು.

ಸಣ್ಣ ರೈತರು ತಾವೇ ಹೊಲದಲ್ಲಿ ದುಡಿದು ವ್ಯವಸಾಯ ಮಾಡುತ್ತಾರೆ. 20 ಎಕರೆ ಮೇಲೆ ಜಮೀನುಳ್ಳವರು ಸಂಪೂರ್ಣವಾಗಿ ಕೂಲಿಕಾರ್ಮಿಕರನ್ನೇ ಅವಲಂಬಿಸಿದ್ದಾರೆ. ಈ ವ್ಯವಸಾಯ ಕೂಲಿ ದರ ದಿನಕ್ಕೆ 500ರೂ.ಗಳು. ಕೇರಳದಲ್ಲಿ 800ರೂ ಎಂದು ಕೇಳಲ್ಪಟ್ಟಿದ್ದೇನೆ. ಇಷ್ಟೊಂದು ಕೂಲಿ ಕೊಟ್ಟು ತಮ್ಮ ಎಲ್ಲ ಜಮೀನಿನಲ್ಲೂ ಆಹಾರ ಧಾನ್ಯ ಬೆಳೆಯಲು ಆಗುವುದಿಲ್ಲ. ಬೆಳೆದ ಬೆಳೆಯನ್ನೆಲ್ಲಾ ಮಾರಾಟ ಮಾಡಿದರೂ ಬೆಳೆದವನಿಗೆ ಶೇ.30ರಷ್ಟು ಲಾಭ ದೊರೆಯುವುದಿಲ್ಲ. ಆದ್ದರಿಂದ ಈ ದೊಡ್ಡ ಹಿಡುವಳಿದಾರರು ಸ್ವಲ್ಪ ಜಮೀನಿನಲ್ಲಿ ಆಹಾರ ಧಾನ್ಯ ಬೆಳೆದು ಉಳಿದ ಜಮೀನಿನಲ್ಲಿ ವ್ಯಾಪಾರಕ್ಕೆ ಅನುಕೂಲವಾಗುವ ಶುಂಠಿ, ಕೊತ್ತಂಬರಿ, ತರ್ಕಾರಿ, ಹೂವು ಬೆಳೆಯುತ್ತಾರೆ. ಇನ್ನೂ ಹೆಚ್ಚು ಜಮೀನುಳ್ಳವರು ತೇಗ ಮೊದಲಾದ ಲಾಭ ತರುವ ಮರಗಳನ್ನು ಬೆಳೆಯುತ್ತಾರೆ. ಇದರಿಂದಾಗಿ ಭಾರತದಲ್ಲಿ ಆಹಾರ ಧಾನ್ಯಗಳ ಕೊರತೆ ಕಾಣಿಸಿಕೊಂಡಿದೆ. ಸಿ.ಸುಬ್ರಮಣ್ಯಂ ಅವರು ವ್ಯವಸಾಯ ಸಚಿವರಾಗಿದ್ದಾಗ ಆಹಾರ ಕ್ರಾಂತಿ ಒಂದನ್ನು ಮಾಡಿದ್ದರು. ಎಂದು ಇದನ್ನು ಕರೆದರು. ಭಾರತದಲ್ಲಿ ಆಹಾರ ಧಾನ್ಯಕ್ಕೆ ಕೊರತೆ ಉಂಟಾಗದಂತೆ ಅವರು ನೋಡಿಕೊಂಡರು. ಭಾರತ ವ್ಯವಸಾಯ ಪ್ರಧಾನ ದೇಶ ಭಾರತೀಯರು ಭಿಕ್ಷೆ ಪಾತ್ರೆ ಹಿಡಿದು ಅನ್ಯ ದೇಶಗಳ ಬಳಿ ಹೋಗಬಾರದು ಅದು ಅಪಮಾನಕರ ಎಂದು ಸಿ.ಸುಬ್ರಮಣ್ಯಂ ಅವರ ಧ್ಯೇಯವಾಗಿತ್ತು. ಅದಕ್ಕಾಗಿ ಅವರ ಕಾಲದಲ್ಲಿ ಅನೇಕ ದೊಡ್ಡ ನದಿಗಳಿಗೆ ಅಡ್ಡಗಟ್ಟಿ ಹಾಕಿ ದೊಡ್ಡ ಅಣೆಕಟ್ಟುಗಳನ್ನು ಕಟ್ಟಿಸಿದರು. ಹೊಲಗದ್ದೆಗಳ ಬದುವಿಗೆ ಗೊಬ್ಬರದ ಗಿಡಗಳನ್ನು ಬೆಳೆಸಲಾಯಿತು. ಒಡ್ಡುಗಳನ್ನು ಹಾಕಲಾಯಿತು. ಆಗ ವ್ಯವಸಾಯದ ಕೂಲಿ ಇಷ್ಟೊಂದು ಇರಲಿಲ್ಲ. ಹೀಗಾಗಿ ಭಾರತವು ಆಹಾರದ ವಿಷಯದಲ್ಲಿ ಸ್ವಪರಿಪೂರ್ಣವಾಯಿತು. ಈಗ ನಾವು ಸಕ್ಕರೆ, ಗೋಧಿ, ಅಕ್ಕಿ ಮುಂತಾದುದನ್ನು ಆಮದು ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದೇವೆ.

ಬಡವರನೇಕರ ಕೈಯಲ್ಲಿ ಭೂಮಿ ಇಲ್ಲ; ದುಡಿದು ತಿನ್ನುತ್ತೇವೆಂದರೆ ತಮ್ಮದಾಗಿ ನೆಲ ಇಲ್ಲ. ಈ ಭೂಮಿಹೀನರೂ ಭಾರತೀಯರೆ ಅಲ್ಲವೇ? ಅವರಿಗೆ ಓಟು ಕೊಟ್ಟಿದ್ದೇವೆ, ಊಟ ಕೊಟ್ಟಿಲ್ಲ, ಉದ್ಯೋಗ ಕೊಟ್ಟಿಲ್ಲ. ಸರ್ಕಾರ ಭೂಮಿಯ ಮರು ಹಂಚಿಕೆ ಮಾಡಬೇಕು. ಆದಾಗಬೇಕಾದರೆ ಸೀಲಿಂಗ್‍ಅನ್ನು ಇಳಿಸಬೇಕು. ಭೂಮಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ದುಡಿಯಲು ತಯಾರಿರುವ ಭೂಹೀನರಿಗೆ ತಲಾ 5 ಎಕರೆ ಖುಷ್ಕಿ ಅಥವಾ 3 ಎಕರೆ ತರಿ ಅಥವಾ ಒಂದು ಎಕರೆ ತೋಟದ ಜಮೀನನ್ನು ನೀಡಬೇಕು. ಹೀಗೆ ನೀಡಿದ ಜಮೀನನ್ನು ಖಾಸಗಿಯವರಿಗೆ ಮಾರಾಟ, ಭೋಗ್ಯ ಆಧಾರ ಮಾಡುವಂತಿಲ್ಲ ಎಂಬ ಕರಾರು ಹಾಕಿ ಭೂಮಿ ಹಂಚಬೇಕು. ಎರಡು ವರ್ಷ ಕಾಲ ಹೀಗೆ ನೀಡಿದ ಜಮೀನನ್ನು ಎರಡು ವರ್ಷ ಕಾಲ ಉಳುಮೆ ಮಾಡದಿದ್ದರೆ, ಆ ಜಮೀನನ್ನು ಅವರ ವಶದಿಂದ ಹಿಂಪಡೆದು ದುಡಿಮೆ ಮಾಡುವ ಬೇರೊಬ್ಬರಿಗೆ ಕೊಡಬೇಕು.

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು. ಮೋದಿ ಸರ್ಕಾರ ಭೂಮಿ ನೀಡಿ ರೈತರನ್ನ ಕಾಲ ಮೇಲೆ ನಿಲ್ಲುವ ಹಾಗೆ ಮಾಡಬೇಕೇ ಹೊರತು, ಸರ್ಕಾರದಿಂದ ಭಿಕ್ಷೆಗೆ ಕಾಯುವಂತೆ ಮಾಡುವುದು ಭಾರತೀಯರನ್ನು ಅಪಮಾನಗೊಳಿಸಿದಂತೆ ಎಂದು ತಿಳಿಯಬೇಕು.


ಇದನ್ನು ಓದಿ: ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...