Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...