Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...