Homeಅಂಕಣಗಳುರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು...

ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಆಸ್ಥಾನ ಪಂಡಿತರು ತಮ್ಮ ಬ್ಯಾಳೆ ಬೇಯಿಸಿಕೊಳ್ಳಲಿಕ್ಕೆ ಆಳುವವರನ್ನ ಇಂದ್ರ - ಚಂದ್ರ ಅಂತ ಕರೀತಿರಬಹುದು. ಇದು ಗೊತ್ತಾಗದೇ ಹೋದರ ಸರಕಾರ ಜನರ ಮನಸ್ಸಿನಿಂದ ದೂರ ಹೋಗಬೇಕಾಗತದ. ಉನ್ನತ ಸ್ಥಾನದಲ್ಲಿ ಇರೋ ನಮ್ಮ ಪಂಥ ಪ್ರಧಾನ ಸೇವಕರು ಇಂಥವರಿಂದ ದೂರ ಇರಬೇಕು.

- Advertisement -
- Advertisement -

ಹಿರಿಯ ಲೇಖಕಿ ಗೀತಾ ನಾಗಭೂಷಣ ಅವರ ಹಸಿ ಮಾಂಸ ಮತ್ತು ಹದ್ದುಗಳು ಎನ್ನುವುದು ಕನ್ನಡದ ಜನಪ್ರಿಯ ಕಾದಂಬರಿಗಳಲ್ಲಿ ಒಂದು. ಜಮೀನುದಾರಿ ವ್ಯವಸ್ಥೆಯ ಶೋಷಣೆ, ಜಾತಿಯತೆ, ಹೆಣ್ಣಿನ ದುರವಸ್ಥೆ ಮುಂತಾದ ವಿಷಯಗಳ ಸುತ್ತ ಹೆಣೆದದ್ದು.

ಗುಲಬರ್ಗಾದ ಈ ಲೇಖಕರಿಗೆ ರಾಷ್ಟ್ರೀಯ ಮನ್ನಣೆ ತಂದು ಕೊಟ್ಟ ಈ ಕಾದಂಬರಿಯ ಹೆಸರು ಓದುಗರನ್ನು ಸೆಳೆಯುವಂಥದ್ದು. ಅದು ಈ ಕಾಲದಾಗ ಯಾಕ ನೆನಪು ಮಾಡಿಕೊಟ್ಟವರು ಯಾರಪಾ ಅಂದರ ನಮ್ಮ ತುಷಾರ ಮೆಹತಾ ಸಾಹೇಬರು.

ಅವರು ಯಾರಂತೀರಿ? ಅವರು ನಮ್ಮ ಕೇಂದ್ರ ಸರಕಾರದ ವಕೀಲರು. ಅವರು ಸುಪ್ರೀಂ ಕೋರ್ಟಿನಾಗ ಕೇಂದ್ರ ಸರಕಾರವು ಎಷ್ಟು ಚನ್ನಾಗಿ ವಲಸೆ ಕಾರ್ಮಿಕರ ಕಾಳಜಿ ಮಾಡಿದೆ ಅಂತ ಹೇಳೋ ಭರಾಟೆಯೊಳಗ ಪತ್ರಕರ್ತರು ರಣಹದ್ದುಗಳು ಅಂತ ಅಪ್ಪಣೆ ಕೊಡಿಸಿದರು.
ಅವರಿಗೆ ಸರಕಾರದ ಒಳ್ಳೆ ಕೆಲಸಗಳು ಕಾಣಲ್ಲ. ಅವರಿಗೆ ಬರೀ ಕೆಟ್ಟದ್ದೇ ಕಾಣುತ್ತದೆ. ಹದ್ದುಗಳಿಗೆ ಬರೀ ಹೆಣ ಕಾಣತದೆ, ಅಂತೆಲ್ಲಾ ಹೇಳಿ ಕೆವಿನ್ ಕಾರ್ಟರ್ ಅನ್ನೋ ಹೆಸರಿನ ದಕ್ಷಿಣ ಆಫ್ರಿಕದ ಛಾಯಾ ಚಿತ್ರ ವರದಿಗಾರರ ಬಗ್ಗೆ ಒಂದು ಖೊಟ್ಟಿ ಸುದ್ದಿ (ಫೇಕು ನ್ಯೂಸು) ಹೇಳಿದರು.

ಕಾರ್ಟರ್ ಅವರು ತೆಗೆದ ಒಂದು ಚಿತ್ರ ವಿಶ್ವಖ್ಯಾತಿ ಗಳಿಸಿತ್ತು. ಅದೇನಪಾ ಅಂದರ ಸುಡಾನ್ ದೇಶದಲ್ಲಿ ಕ್ಷಾಮ ಆದಾಗ ಒಂದು ಹಸಿದ ಹುಡುಗ (ಮೆಹತಾ ಸಾಬ್ ಅವರು ತಿಳಕೊಂಡಂಗ ಹುಡುಗಿ ಅಲ್ಲ) ಗಂಜಿ ಕೇಂದ್ರದ ಕಡೆ ತೆವಳಿಕೊಂಡು ಹೋಗುತ್ತಾ ಇರೋ ಚಿತ್ರ. ಅದರ ಹಿಂದೆ ಒಂದು ಹದ್ದು ಆ ಮಗುವನ್ನು ಹಿಂಬಾಲಿಸಿಕೊಂಡು ಬರೋ ಚಿತ್ರ ನೋಡಿದವರ ಕಣ್ಣಾಗ ನೀರು ತರಿಸಿತು. `ಆ ಹದ್ದು ಆ ಕೂಸು ಸಾಯೋದನ್ನ ಕಾಯ್ದುಕೊಂಡು ಕೂತಂಗ, ಅದು ಸತ್ತರ ತಾನು ತಿಂದು ಮೇಜವಾನಿ ಮಾಡಲಿಕ್ಕೆ ತಯಾರಿ ಮಾಡಿಕೋತದೇನೋ’ ಅಂತ ಜನರಿಗೆ ಅನ್ನಿಸಿತು.

ಪ್ರತಿ ಚಿತ್ರದ ಹಿಂದೆ ಐಟಿ ಸೆಲ್ಲಿನ ಕಾಣದ ಕೈಗಳು ಕೆಲಸಾ ಮಾಡೋಹಂಗ, ಇದರ ಹಿಂದನೂ ಕೆಲಸ ಮಾಡಿದವು. ಆ ಚಿತ್ರ ತೆಗೆದ ಛಾಯಾಗ್ರಾಹಕ ಆತ್ಮಹತ್ಯೆ ಮಾಡಿಕೊಂಡ ಅನ್ನೋದು ಎಲ್ಲಾರಿಗೂ ಗೊತ್ತಿತ್ತು. ಆದರ ಕಾರಣ ಗೊತ್ತಿರಲಿಲ್ಲ. ಈ ಐಟಿಕೋರರು ಅದಕ್ಕ ಒಂದು ಕತಿ ಕಟ್ಟಿ ಸುಳ್ಳ- ಸುಳ್ಳ ಕಾರಣ ಕೊಟ್ಟರು. ಆ ಫೋಟೋ ತೆಗದ ಕೆಲವೇ ಕ್ಷಣದೊಳಗ ಆ ಹುಡುಗಿ ಹಸಿವಿನಿಂದ ಸತ್ತು ಹೋತು, ಅದನ್ನ ತಗದ ದುಃಖ ತಾಳಲಾರದ ಫೋಟೋಗ್ರಾಫರ ಕೆಲವೇ ತಿಂಗಳಿಗೆ ಸತ್ತು ಹೋದ ಅಂತ.

ಇನ್ನೂ ಏನಪಾ ಅಂದರ ಒಬ್ಬ ಅಮೇರಿಕಾದ ವರದಿಗಾರ ಆ ಛಾಯಾಗ್ರಾಹಕನನ್ನ ಕೇಳಿದನಂತ – `ನೀ ಬರೇ ಫೋಟೋ ತೆಗೆದ್ಯೋ ಅಥವಾ ಆ ಮಗುವಿಗೆ ಏನಾದರೂ ಸಹಾಯ ಮಾಡಿದ್ಯೋ’ ಅಂತ. `ಇಲ್ಲಾ ನಾ ಬರೇ ಫೋಟೋ ತೆಗೆದೆ’ ಅಂತ ಇವಾ ಅಂದನಂತ. ಅದಕ್ಕ ಅವಾ- ಆ ಕಾಲ್ಪನಿಕ ವರದಿಗಾರ ಇವನಿಗೆ ಬೈದನಂತ. `ಹೌದಪಾ, ದೊಡ ಮನಿಷಾ, ನೀ ಯಾಕ ಸಹಾಯ ಮಾಡತೀದಿ? ನೀ ಬರೇ ನಿನ್ನ ಲಾಭ ಅಷ್ಟ ನೋಡಿಕೊಂಡಿ. ಯಾಕಂದರ ಅಲ್ಲೆ ಎರಡು ರಣಹದ್ದು ಇದ್ದವು. ಒಂದು ಆ ಮಗುವಿನ ಹಿಂದ ಹೊಂಟಿತ್ತು, ಇನ್ನೊಂದು ಕೈಯಾಗ ಕ್ಯಾಮೆರಾ ಹಿಡಕೊಂಡಿತ್ತು’.

ತುಷಾರ ಮೆಹತಾ ಅಂದರ ಚಳಿಗಾಲದ ನಾಯಕ ಅಂತ ಅರ್ಥ. ಇಂತಾ ತಣ್ಣನೆ ಹೃದಯದ ಪುಣ್ಯಾತ್ಮ ತುಷಾರ ಮೆಹತಾ ಅವರು ಈ ಹಸೀ ಸುಳ್ಳನ್ನ ಮೇ ತಿಂಗಳ ಸುಡು ಬಿಸಲಿನ್ಯಾಗ ಕೇಂದ್ರ ಸರಕಾರದ ಪರ ವಾದ ಮಾಡುವಾಗ ನ್ಯಾಯಮೂರ್ತಿಗಳ ಎದುರಿಗೆ ಹೇಳಿದರು. ಒಂದು ಚೂರೂ ಬಿಡದೇ. ಅವರಿಗೆ ಒಂದು ಸಲೆನೂ ಇದು ಸುಳ್ಳು ಇರಬಹುದು ಅಂತ ಸಂದೇಹ ಕಾಡಲಿಲ್ಲ. ಅವರಿಗೆ ಸಂದೇಹ ಬಂದಿರಲಿಕ್ಕಿಲ್ಲ ಅಥವಾ ಸುಳ್ಳು ಅಂತ ಗೊತ್ತಿದ್ದರೂ ಇಡೀ ದೇಶವನ್ನು ನಂಬಿಸಲಿಕ್ಕೆ ಹೇಳಿರಬಹುದು.

ಇದರಾಗ ಸುಳ್ಳು ಏನಪಾ ಅಂದರ, ಅದು ಹುಡುಗಿ ಅಲ್ಲ- ಹುಡುಗ. ಆ ಹುಡುಗ ಕೆಲವೇ ಕ್ಷಣದೊಳಗ ಹಸಿವಿನಿಂದ ಸಾಯಲಿಲ್ಲ. ಆ ಹುಡುಗ 12 ವರ್ಷಗಳ ನಂತರ ಮಲೇರಿಯಾದಿಂದ ಸತ್ತು ಹೋದ. ಇನ್ನ ಕಾರ್ಟರ್ ಆ ಫೋಟೋ ತೆಗೆಯೋವಾಗ ಬರೀ ದೂರದಿಂದ ಆ ಕೆಟ್ಟ ದೃಶ್ಯವನ್ನ ನೋಡಿ ಆನಂದ ಪಡಲಿಲ್ಲ. ಅದರಿಂದ ಅವನಿಗೆ ಸಂಕಟ ಆತು. ಆತ ಆ ಹದ್ದನ್ನು ಓಡಿಸಿ ಆ ಹುಡುಗನ ಜೀವ ಉಳಿಸಿದ. ಆ ನಂತರ ತನ್ನ ಕುಟುಂಬದ ಸಮಸ್ಯೆ, ಸಾಲ, ಮಾದಕ ಪದಾರ್ಥದ ಚಟ ಇತ್ಯಾದಿ ಕಾರಣಗಳಿಂದ ಹಾಗೂ ಸ್ವಲ್ಪ ಮಟ್ಟಿನ ದುಃಖದಿಂದ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡ.

ಆದರ ಸಮಸ್ಯೆ ಇದಲ್ಲ. ಸಮಸ್ಯೆ ಪತ್ರಕರ್ತರನ್ನ ರಣ ಹದ್ದುಗಳು ಅಂತ ನೋಡೊ ಮನಸ್ಥಿತಿಯದ್ದು. ಸರಕಾರ ಮಾಡಿದ್ದೇ ಸರಿ, ಆಳುವ ಪಕ್ಷ ಆಡಿದ್ದೇ ಆಟ ಅಂತ ಹೇಳಿ ಚಪ್ಪಾಳೆ ತಟ್ಟುವವರು ಮಾತ್ರ ವರದಿಗಾರರು, ಬೇರೆಯವರು ರಣಹದ್ದುಗಳು ಅಂತ ತೀರ್ಮಾನಕ್ಕೆ ಬರೋದು. ಪ್ರಜಾಪ್ರಭುತ್ವಕ್ಕ ಇದು ಬಹಳ ಅಪಾಯಕಾರಿ.

ಸರಕಾರ ನಡೆಸುವವರು ಮೈ ಎಲ್ಲಾ ಕಣ್ಣಾಗಿ- ಕಿವಿಯಾಗಿ ಇರಬೇಕು. ತಮ್ಮ ಸರಿ- ತಪ್ಪುಗಳನ್ನು ಎತ್ತಿ ತೋರಿಸುವವರನ್ನು ಗೌರವದಿಂದ ನೋಡಬೇಕು. ಅವರ ಮಾತು ಕೇಳಿಸಕೋಬೇಕು. ಇಲ್ಲದಿದ್ದರೆ ತಮ್ಮ ಆಸ್ಥಾನ ಪಂಡಿತರು ಹೇಳಿದ್ದನ್ನೇ ಕೇಳಿಸಿಕೊಂಡು ಚಕ್ಕಡಿಗೆ ಕಟ್ಟಿದ ಎತ್ತಿನ ಹಂಗ ಕಣ್ಣು ಕಟಿಗೊಂಡು ಮುಂದ ಹೋಗಬೇಕಾಗತದ.

ಆಸ್ಥಾನ ಪಂಡಿತರು ತಮ್ಮ ಬ್ಯಾಳೆ ಬೇಯಿಸಿಕೊಳ್ಳಲಿಕ್ಕೆ ಆಳುವವರನ್ನ ಇಂದ್ರ – ಚಂದ್ರ ಅಂತ ಕರೀತಿರಬಹುದು. ಇದು ಗೊತ್ತಾಗದೇ ಹೋದರ ಸರಕಾರ ಜನರ ಮನಸ್ಸಿನಿಂದ ದೂರ ಹೋಗಬೇಕಾಗತದ. ಉರ್ದು ಕವಿ ಹಬೀಬ್ ಜಾಲಿಬ್ ಅವರು ಇಂಥಾ ಆಸ್ಥಾನ ಪಂಡಿತರ ಬಗ್ಗೆ “ನಾನು ಅವರಿಗೆ ಹಿಂಗಂದೆ” (`ಮೈನೆ ಉಸ್ಸೆ ಎ ಕಹಾ’) ಅಂತ ಒಂದು ಹಾಡು ಬರದಾರ.
ಅದರಾಗ ಈ ಸಾಲು ಬರತಾವು-

ಮೆಹರಬಾನ್ ಸಾಹೇಬರೇ,
ನಿಮ್ಮ ಸರಕಾರ ಎಷ್ಟು ಒಳ್ಳೆಯದು
ಅಂದರ, ಜನ ನಿಮ್ಮ ಕಾಲದಾಗ
ತಮ್ಮ ಖರ್ಚಿನ್ಯಾಗ ಜೈಲು ಸೇರಾಕ ಹತ್ಯಾರು

ಉನ್ನತ ಸ್ಥಾನದಲ್ಲಿ ಇರೋ ನಮ್ಮ ಪಂಥ ಪ್ರಧಾನ ಸೇವಕರು ಇಂಥವರಿಂದ ದೂರ ಇರಬೇಕು. ತಮ್ಮ ಮುಖಕ್ಕೆ ಕನ್ನಡಿ ಹಿಡಿಯೋವಂಥವರನ್ನ ಇಟ್ಟು ಕೊಳ್ಳಬೇಕು, ತಮ್ಮ ಫೋಟೋ ತಗದು ಫೋಟೋ ಶಾಪು ಮಾಡೋರನ್ನಲ್ಲ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನ ಇಡೀ ದೇಶದ ಮೇಲೆ ಹೇರಿದರು. ಇದರಿಂದ ಪೊಲಿಸರು ಹಾಗೂ ಇತರ ಸರಕಾರಿ ಅಧಿಕಾರಿಗಳು ಜನ ಸಾಮಾನ್ಯರ ಮ್ಯಾಲೆ ಘೋರ ದಬ್ಬಾಳಿಕೆ ನಡೆಸಿದರು. ಇಲ್ಲದವರು ಅತೀವ ಹಿಂಸೆ ಅನುಭವಿಸಿದರು. ಇದು ಆಧುನಿಕ ಭಾರತೀಯ ಇತಿಹಾಸದಲ್ಲಿನ ಅತ್ಯಂತ ಕಹಿ ಘಟನೆಗಳಲ್ಲಿ ಒಂದು. ಅದು ಸುಮಾರು 18 ತಿಂಗಳು ಎಗ್ಗಿಲ್ಲದೇ ಮುನ್ನಡೆಯಿತು. ಅದೆಲ್ಲಾ ಮುಗದು ಹೋಗಿ ಐದಾರು ವರ್ಷ ಆದ ಮ್ಯಾಲೆ ಅವರು ಖುಷವಂತಸಿಂಗ್ ಅವರಿಗೆ ಹೇಳಿದರಂತೆ- “ ತುರ್ತು ಪರಿಸ್ಥಿತಿಯ ಸಮಯದಲ್ಲಿ ನಮಗೆ ಫೀಡಬ್ಯಾಕು (ಮರುಮಾಹಿತಿ, ಟೀಕೆ ಟಿಪ್ಪಣಿ) ಸಿಗಲೇ ಇಲ್ಲ. ಸಿಕ್ಕಿದ್ದರೆ, ಜನರ ಕಷ್ಟ ನಮಗೆ ಅರ್ಥ ವಾಗುತ್ತಿತ್ತು. ಅದನ್ನು ಇನ್ನಷ್ಟು ಬೇಗ ಹಿಂತೆಗೆಯಬಹುದಾಗಿತ್ತು. ಜನ ಸುಮ್ಮನೇ ಇದ್ದದ್ದು ನೋಡಿ ನಾವು ಅವರು ಖುಷಿಯಾಗಿದ್ದಾರೆ ಅಂದುಕೊಂಡೆವು” ಅಂತ. ನಮ್ಮೂರ ಕಡೆ ಇದಕ್ಕ ‘ರೊಟ್ಟಿ ಸುಟ್ಟ ಮ್ಯಾಲೆ ಒಲಿ ಆರಿಸಿದ್ದರಂತ’ ಅಂತ ಅಂತಾರ. ಇಂದಿರಾಗಾಂಧಿ ಅವರು ತಮ್ಮನ್ನು ಟೀಕೆ ಮಾಡಿದ ಏಳು ಸಾವಿರಕ್ಕೂ ಹೆಚ್ಚು ಜನ ಪತ್ರಕರ್ತರನ್ನ ಜೈಲಿಗೆ ಹಾಕಿದ್ದರು. ಬಿಬಿಸಿ ಯಂಥಾ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಮೇಲೆ ಒತ್ತಡ ಹೇರಿದ್ದರು. ಜನರ ದನಿಯಾದ ಮಾಧ್ಯಮವನ್ನು ಕಟ್ಟಿ ಹಾಕಿ ನಮಗೆ ಅವರ ದನಿ ಕೇಳಲಿಲ್ಲ ಅಂದರ ಹೆಂಗ?

ಈಗ ನಮ್ಮನ್ನು ಆಳುವವರಿಗೂ ಈ ಸುಬುದ್ಧಿ ಸಕಾಲದಲ್ಲಿ ಬರಲಿ, ಅಲ್ಲವೇ ಮನೋಲ್ಲಾಸಿನಿ?


ಇದನ್ನು ಓದಿ: ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...