Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...