Homeಮುಖಪುಟಏನಾಯಿತು ಗರೀಬ್ ಕಲ್ಯಾಣ? 14.4 ಕೋಟಿ ಜನರಿಗೆ ಮೇ ತಿಂಗಳಲ್ಲಿ ಸಿಗಲಿಲ್ಲ ಆಹಾರ ಧಾನ್ಯ..

ಏನಾಯಿತು ಗರೀಬ್ ಕಲ್ಯಾಣ? 14.4 ಕೋಟಿ ಜನರಿಗೆ ಮೇ ತಿಂಗಳಲ್ಲಿ ಸಿಗಲಿಲ್ಲ ಆಹಾರ ಧಾನ್ಯ..

- Advertisement -
- Advertisement -

ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಧಾನ್ಯ ಪಡೆಯಲು ಅರ್ಹರಾಗಿರುವ ಸುಮಾರು 14.45 ಕೋಟಿ ಜನರಿಗೆ ಮೇ ತಿಂಗಳಿಗೆ ಧಾನ್ಯ ದೊರೆತಿಲ್ಲ ಎಂದು ಕೇಂದ್ರ ಸರ್ಕಾರವು ಜೂನ್ 3 ರಂದು ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ತಿಳಿಸಿದೆ. 6.44 ಕೋಟಿ ಪಡಿತರ ಚೀಟಿ ಹೊಂದಿರುವವರು ಇನ್ನೂ ಏಪ್ರಿಲ್‌ನಲ್ಲಿ ಸಿಗಬೇಕಾದ ಧಾನ್ಯಗಳನ್ನು ಸ್ವೀಕರಿಸಿಲ್ಲ ಎಂದು ಅಂಕಿ ಅಂಶಗಳು ತೋರಿಸುತ್ತಿವೆ.

ಪಡಿತರ ಚೀಟಿಗಳನ್ನು ಹೊಂದಿರುವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ 20 ಕೋಟಿ ಫಲಾನುಭವಿಗಳು ಏಪ್ರಿಲ್‌ನಲ್ಲಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಪಡೆಯಲು ಅರ್ಹವಾದ ಹೆಚ್ಚುವರಿ 5 ಕಿಲೋಗ್ರಾಂಗಳಷ್ಟು ಧಾನ್ಯವನ್ನು ಸ್ವೀಕರಿಸಲಿಲ್ಲ ಎಂದು ಕಳೆದ ತಿಂಗಳು ದಿ ವೈರ್ ವರದಿ ಮಾಡಿತ್ತು.

ಮಾರ್ಚ್ 26 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅನ್ನು ಘೋಷಿಸಿದಾಗ 80 ಕೋಟಿ ಫಲಾನುಭವಿಗಳಿಗೆ 5 ಕಿಲೋಗ್ರಾಂಗಳಷ್ಟು ಧಾನ್ಯವನ್ನು (ಗೋಧಿ ಅಥವಾ ಅಕ್ಕಿ) ಹೆಚ್ಚುವರಿಯಗಿ ನೀಡಲಾಗುವುದು ಎಂದು ಅವರು ಹೇಳಿದ್ದರು. ಇದನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿಗೆ ಉಚಿತವಾಗಿ ನೀಡಬೇಕಿತ್ತು. ಪಡಿತರ ಚೀಟಿ ಹೊಂದಿರುವ ಮನೆಗಳಿಗೆ ತಿಂಗಳಿಗೆ 1 ಕಿಲೋಗ್ರಾಂಗಳಷ್ಟು ದ್ವಿದಳ ಧಾನ್ಯಗಳನ್ನು ಮೂರು ತಿಂಗಳವರೆಗೆ ಉಚಿತವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದರು.

ಏಪ್ರಿಲ್ ನಲ್ಲಿ, ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಹೆಚ್ಚುವರಿ 5 ಕಿಲೋಗ್ರಾಂಗಳಷ್ಟು ಧಾನ್ಯವು 73.86 ಕೋಟಿ ಫಲಾನುಭವಿಗಳನ್ನು ತಲುಪಿದೆ, ಆದರೆ 6.44 ಕೋಟಿ ಜನರು ಜೂನ್ 3 ರ ಹೊತ್ತಿಗೆ ಇನ್ನೂ ಇದರ ಪ್ರಯೋಜನವನ್ನು ಪಡೆಯಲಿಲ್ಲ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಮೇ ತಿಂಗಳಲ್ಲಿ, ಹೆಚ್ಚುವರಿ ಧಾನ್ಯವು 65.85 ಕೋಟಿ ಜನರನ್ನು ತಲುಪಿದ್ದು, ಇದಕ್ಕೆ ಇನ್ನೂ 14.45 ಕೋಟಿ ಜನರು ಅರ್ಹರಾಗಿದ್ದರೂ ಸಹ ಅದರ ಪ್ರಯೋಜನವನ್ನು ಪಡೆಯಲಿಲ್ಲ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಪತ್ರಿಕಾ ಪ್ರಕಟಣೆಯಲ್ಲಿ ದ್ವಿದಳ ಧಾನ್ಯಗಳ ದಾಸ್ತಾನು ಹೊಂದಿರುವ ಸಂಸ್ಥೆ – ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (ನಾಫೆಡ್), “ಮೇ ತಿಂಗಳೊಳಗೆ ಎಲ್ಲಾ ಮೂರು ತಿಂಗಳವರೆಗಿನ ವಿತರಣೆಯನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿತ್ತು.

ಆದಾಗ್ಯೂ, ಮೂರು ತಿಂಗಳ ಅವಧಿಯಲ್ಲಿ ವಿತರಿಸಬೇಕಾದ ದ್ವಿದಳ ಧಾನ್ಯಗಳಲ್ಲಿ ಜೂನ್ 3 ರವರೆಗೆ ಕೇವಲ 26% ಮಾತ್ರ ಪಡಿತರ ಚೀಟಿ ಹೊಂದಿರುವವರಿಗೆ ಒದಗಿಸಲಾಗಿದೆ.


ಓದಿ: ಲಾಕ್‌ಡೌನ್ ಸಮಯದಲ್ಲಿ ಪಡಿತರ ವ್ಯವಸ್ಥೆಯ ವಿಸ್ತರಣೆ ಮತ್ತು ಸಾರ್ವತ್ರೀಕರಣವೊಂದೇ ದಾರಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...