Homeಮುಖಪುಟಏನಾಯಿತು ಗರೀಬ್ ಕಲ್ಯಾಣ? 14.4 ಕೋಟಿ ಜನರಿಗೆ ಮೇ ತಿಂಗಳಲ್ಲಿ ಸಿಗಲಿಲ್ಲ ಆಹಾರ ಧಾನ್ಯ..

ಏನಾಯಿತು ಗರೀಬ್ ಕಲ್ಯಾಣ? 14.4 ಕೋಟಿ ಜನರಿಗೆ ಮೇ ತಿಂಗಳಲ್ಲಿ ಸಿಗಲಿಲ್ಲ ಆಹಾರ ಧಾನ್ಯ..

- Advertisement -
- Advertisement -

ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಧಾನ್ಯ ಪಡೆಯಲು ಅರ್ಹರಾಗಿರುವ ಸುಮಾರು 14.45 ಕೋಟಿ ಜನರಿಗೆ ಮೇ ತಿಂಗಳಿಗೆ ಧಾನ್ಯ ದೊರೆತಿಲ್ಲ ಎಂದು ಕೇಂದ್ರ ಸರ್ಕಾರವು ಜೂನ್ 3 ರಂದು ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ತಿಳಿಸಿದೆ. 6.44 ಕೋಟಿ ಪಡಿತರ ಚೀಟಿ ಹೊಂದಿರುವವರು ಇನ್ನೂ ಏಪ್ರಿಲ್‌ನಲ್ಲಿ ಸಿಗಬೇಕಾದ ಧಾನ್ಯಗಳನ್ನು ಸ್ವೀಕರಿಸಿಲ್ಲ ಎಂದು ಅಂಕಿ ಅಂಶಗಳು ತೋರಿಸುತ್ತಿವೆ.

ಪಡಿತರ ಚೀಟಿಗಳನ್ನು ಹೊಂದಿರುವ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ 20 ಕೋಟಿ ಫಲಾನುಭವಿಗಳು ಏಪ್ರಿಲ್‌ನಲ್ಲಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಪಡೆಯಲು ಅರ್ಹವಾದ ಹೆಚ್ಚುವರಿ 5 ಕಿಲೋಗ್ರಾಂಗಳಷ್ಟು ಧಾನ್ಯವನ್ನು ಸ್ವೀಕರಿಸಲಿಲ್ಲ ಎಂದು ಕಳೆದ ತಿಂಗಳು ದಿ ವೈರ್ ವರದಿ ಮಾಡಿತ್ತು.

ಮಾರ್ಚ್ 26 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅನ್ನು ಘೋಷಿಸಿದಾಗ 80 ಕೋಟಿ ಫಲಾನುಭವಿಗಳಿಗೆ 5 ಕಿಲೋಗ್ರಾಂಗಳಷ್ಟು ಧಾನ್ಯವನ್ನು (ಗೋಧಿ ಅಥವಾ ಅಕ್ಕಿ) ಹೆಚ್ಚುವರಿಯಗಿ ನೀಡಲಾಗುವುದು ಎಂದು ಅವರು ಹೇಳಿದ್ದರು. ಇದನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿಗೆ ಉಚಿತವಾಗಿ ನೀಡಬೇಕಿತ್ತು. ಪಡಿತರ ಚೀಟಿ ಹೊಂದಿರುವ ಮನೆಗಳಿಗೆ ತಿಂಗಳಿಗೆ 1 ಕಿಲೋಗ್ರಾಂಗಳಷ್ಟು ದ್ವಿದಳ ಧಾನ್ಯಗಳನ್ನು ಮೂರು ತಿಂಗಳವರೆಗೆ ಉಚಿತವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದರು.

ಏಪ್ರಿಲ್ ನಲ್ಲಿ, ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಹೆಚ್ಚುವರಿ 5 ಕಿಲೋಗ್ರಾಂಗಳಷ್ಟು ಧಾನ್ಯವು 73.86 ಕೋಟಿ ಫಲಾನುಭವಿಗಳನ್ನು ತಲುಪಿದೆ, ಆದರೆ 6.44 ಕೋಟಿ ಜನರು ಜೂನ್ 3 ರ ಹೊತ್ತಿಗೆ ಇನ್ನೂ ಇದರ ಪ್ರಯೋಜನವನ್ನು ಪಡೆಯಲಿಲ್ಲ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಮೇ ತಿಂಗಳಲ್ಲಿ, ಹೆಚ್ಚುವರಿ ಧಾನ್ಯವು 65.85 ಕೋಟಿ ಜನರನ್ನು ತಲುಪಿದ್ದು, ಇದಕ್ಕೆ ಇನ್ನೂ 14.45 ಕೋಟಿ ಜನರು ಅರ್ಹರಾಗಿದ್ದರೂ ಸಹ ಅದರ ಪ್ರಯೋಜನವನ್ನು ಪಡೆಯಲಿಲ್ಲ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಪತ್ರಿಕಾ ಪ್ರಕಟಣೆಯಲ್ಲಿ ದ್ವಿದಳ ಧಾನ್ಯಗಳ ದಾಸ್ತಾನು ಹೊಂದಿರುವ ಸಂಸ್ಥೆ – ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (ನಾಫೆಡ್), “ಮೇ ತಿಂಗಳೊಳಗೆ ಎಲ್ಲಾ ಮೂರು ತಿಂಗಳವರೆಗಿನ ವಿತರಣೆಯನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿತ್ತು.

ಆದಾಗ್ಯೂ, ಮೂರು ತಿಂಗಳ ಅವಧಿಯಲ್ಲಿ ವಿತರಿಸಬೇಕಾದ ದ್ವಿದಳ ಧಾನ್ಯಗಳಲ್ಲಿ ಜೂನ್ 3 ರವರೆಗೆ ಕೇವಲ 26% ಮಾತ್ರ ಪಡಿತರ ಚೀಟಿ ಹೊಂದಿರುವವರಿಗೆ ಒದಗಿಸಲಾಗಿದೆ.


ಓದಿ: ಲಾಕ್‌ಡೌನ್ ಸಮಯದಲ್ಲಿ ಪಡಿತರ ವ್ಯವಸ್ಥೆಯ ವಿಸ್ತರಣೆ ಮತ್ತು ಸಾರ್ವತ್ರೀಕರಣವೊಂದೇ ದಾರಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...