Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...