Homeಅಂಕಣಗಳುಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

- Advertisement -
- Advertisement -

ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು ಹೆಚ್ಚಾಗಿ ಸಂಭವಿಸುತ್ತಿವೆ. ಅದರಲ್ಲೂ ಟೈಮ್ ಪಾಲ್ ಲವ್ ಎಂಬ ಹೊಸ ಟ್ರೆಂಡ್ ಬೇರೆ ಶುರುವಾಗಿದೆ. ಇಂತಹ ಟೈಮ್ ಪಾಸ್ ಲವ್‍ಗೆ ಬಲಿಯಾಗುವುದು ಯುವತಿಯರೇ ವಿನಃ ಯುವಕರಲ್ಲ. ಆದರೂ, ಸಿನಿಮಾ-ಸೀರಿಯಲ್‍ಗಳು ಹುಡುಗಿಯರೇ ಮೋಸಗಾತಿಯರು ಎಂಬಂತೆ ಬಿಂಬಿಸುತ್ತಿರುವುದು ಹೊಸತೇನಲ್ಲ.

ಮೊನ್ನೆಯಷ್ಟೇ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ ಸೆಲ್ಫಿ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ದಿನೇಶನನ್ನು ಪ್ರೀತಿಸಿ ಮೋಸ ಹೋದದ್ದು. ಅದು ಕೇವಲ ಪ್ರೀತಿಯಲ್ಲಾದ ಮೋಸವಷ್ಟೇ ಆಗಿರಲಿಲ್ಲ ಎಂಬುದು ವಾಸ್ತವ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರಿಬ್ಬರೂ ಮಾನಸಿಕವಾಗಿಯಷ್ಟೇ ಅಲ್ಲದೆ, ದೈಹಿಕವಾಗಿಯೂ ಒಂದಾಗಿದ್ದರು. ಅವರಿಬ್ಬರ ದೈಹಿಕ ಬೆಸುಗೆಗೂ ಮುನ್ನ ಸುಮಾರು ಬಾರಿ ಆತನೇ ಮದುವೆಯ ವಿಚಾರ ಪ್ರಸ್ತಾಪಿಸಿದ್ದರೂ, ಕಾಲಕ್ರಮೇಣ ಮದುವೆಗೆ ಹಿಂದೇಟು ಹಾಕಲು ಆರಂಭಿಸಿದ್ದ. ಅಲ್ಲದೆ, ಆಕೆಯ ನಡತೆಯೇ ಸರಿಯಿಲ್ಲವೆಂದು ದೂಷಿಸಿದ್ದ. ಇಷ್ಟೆಲ್ಲವೂ ಆದ ನಂತರ ಈ ಆತ್ಮಹತ್ಯೆಯನ್ನು, ಪ್ರೀತಿಯ ನಂಬಿಕೆ, ಮದುವೆ ಭರವಸೆಯೊಂದಿಗೆ ದಿನೇಶ ಆಕೆಯ ಮೇಲೆ ನಡೆಸಿದ ಅತ್ಯಾಚಾರ ಮತ್ತು ಕೊಲೆ ಎಂದರೂ ತಪ್ಪಾಗಲಾದರು.

ಐದು ವರ್ಷಗಳಿಂದ ಆತನನ್ನು ಪ್ರೀತಿಸುತ್ತಿದ್ದ ಚಂದನ, ಆತನಿಗೆ 5 ಲಕ್ಷ ಹಣವನ್ನೂ ಕೊಟ್ಟಿದ್ದಳು. ಆಕೆಯ ಎಲ್ಲಾ ನಂಬಿಕೆಗೂ ದ್ರೋಹ ಬಗೆದ ದಿನೇಶ, ಆಕೆಯನ್ನು ಸಾವಿನ ಮನೆಗೆ ದೂಡಿ ಪರಾರಿಯಾಗಿದ್ದಾನೆ. ಭವಿಷ್ಯದ ಕನಸುಗಳನ್ನು ಒಡೆದ ಮನಸು ಸಾವಿಗೆ ಶರಣಾಗಿದೆ.

ಆತ ಮಾಡಿದ ಮೋಸಕ್ಕೆ ಈಕೆಗೆ ಆತ್ಮಹತ್ಯೆ ಒಂದೇ ಪರಿಹಾರವಾಗಿರಲಿಲ್ಲ. ಇದ್ದು ಜಯಿಸಲು ಸಾಕಷ್ಟು ದಾರಿಗಳಿದ್ದವು. ಎಲ್ಲ ದಾರಿಯನ್ನು ಮರೆತ ಆ ನಟಿ ಹಿಡಿದ ದಾರಿ ಆತ್ಮಹತ್ಯೆ. ಶೀಲ, ಮಾನ ಎಂಬುದು ಹೆಣ್ಣಿಗಷ್ಟೇ ಸೀಮಿತವಲ್ಲ. ಯಾವುದಕ್ಕೂ ಹೆದರುವ-ಅಂಜಿಕೊಳ್ಳುವ ಅಗತ್ಯವಿಲ್ಲ, ಮೋಸದ ಪ್ರೀತಿಗೆ ನಿರಾಶೆಯಾಗುವುದೂ ಬೇಕಿಲ್ಲ ಎಂದು ಆಕೆಯ ಅರಿವಾಗಿದ್ದ ಆಕೆ ಇಂದು ಭವಿಷ್ಯದ ಹೊಸ ಕನಸುಗಳನ್ನು ಕಾಣಬಹುದಿತ್ತು.


ಇದನ್ನು ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...