Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...