Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...