Homeಮುಖಪುಟಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್,...

ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ಇದು ಅರ್ನಾಬ್, ಪೂನಿಯಾ ಮತ್ತು ಇಮಾಮ್ ಪ್ರಕರಣದಲ್ಲಿ ಇದ್ದ ಮೂರು ಬೇರೆಬೇರೆ ನ್ಯಾಯಪೀಠಗಳ ಸಮಸ್ಯೆಯಲ್ಲ. ಇದು ಇಡೀ ಸುಪ್ರೀಂಕೋರ್ಟ್ ಎದುರಿಸುತ್ತಿರುವ ರಾಚನಿಕ ಸಮಸ್ಯೆ.

- Advertisement -
- Advertisement -

ಇತ್ತೀಚಿನ ಮೂರು ಪ್ರಕರಣಗಳು ತೋರಿಸಿಕೊಟ್ಟಿರುವುದು ಏನೆಂದರೆ, ಕಾನೂನಿನ ಅನ್ವಯವು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದಾದರೂ, ನ್ಯಾಯಾಧೀಶರಿಂದ ನ್ಯಾಯಾಧೀಶರಿಗೆ ತೀರ್ಪುಗಳು ಬದಲಾಗುವಾಗ ಈ ಪ್ರಶ್ನೆಯನ್ನು ಗಂಭೀರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು.

ಸರೀಂ ನವೇದ್

ಸಾರಾನುವಾದ: ನಿಖಿಲ್ ಕೋಲ್ಪೆ

ಕಳೆದ ಮೇ 19ರಂದು ಸುಪ್ರೀಂಕೋರ್ಟ್ ಅರ್ನಾಬ್ ಗೋಸ್ವಾಮಿ ಪ್ರಕರಣದಲ್ಲಿ ಒಂದು ತೀರ್ಪು ನೀಡಿತು ಮತ್ತು ಒಂದು ಅಪರಾಧಕ್ಕಾಗಿ ಒಂದಕ್ಕಿಂತ ಹೆಚ್ಚು ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸುವಂತಿಲ್ಲ ಎಂಬುದನ್ನು ಎತ್ತಿಹಿಡಿಯಿತು. ಹಾಗಾಗಿ ಸಾರ್ವಜನಿಕ ಕ್ಷೋಭೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಎಫ್‌ಐಆರ್‌ಗಳಲ್ಲಿ ಆರೋಪಿಸಲಾಗಿರುವಂತಹ ಒಂದು ಪ್ರಕರಣದಲ್ಲಿ ಮೊದಲ ಎಫ್‌ಐಆರ್ ದಾಖಲಾದ ಸಂಬಂಧ ವಿಚಾರಣೆಯನ್ನು ಹೊರತುಪಡಿಸಿ, ಉಳಿದ ನ್ಯಾಯಾಲಯಗಳಲ್ಲಿ ವಿಚಾರಣೆಯಿಂದ ಆತ ಪಾರಾಗುವಂತಾಯಿತು.

Arnab Goswami, Maharashtra government, Supreme Court ,ರಿಪಬ್ಲಿಕ್ ಟಿವಿ, ಅರ್ನಾಬ್ ಗೋಸ್ವಾಮಿ
ಅರ್ನಾಬ್‌ ಗೋಸ್ವಾಮಿ

ಕೇವಲ ಹತ್ತು ದಿನಗಳ ನಂತರ, ಅಂದರೆ ಮೇ 29ರಂದು ಸುಪ್ರೀಂಕೋರ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಪಂಕಜ್ ಪೂನಿಯಾ ದಾಖಲಿಸಿದಂತಹಾ ಇಂತದ್ದೇ ಅರ್ಜಿಯು ಮುಂದೆ ಬಂತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾಡಿದ ಹೇಳಿಕೆಯ ಆರೋಪದಲ್ಲಿ ಅವರ ಮೇಲೆ ಹಲವಾರು ಕಡೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ, ಸುಪ್ರೀಂಕೋರ್ಟ್ ಈ ವಿಷಯದ ಕುರಿತು ವಿಚಾರಣೆ ನಡೆಸಲು ನಿರಾಕರಿಸಿ, ಪರಿಹಾರಕ್ಕಾಗಿ ಸಂಬಂಧಿತ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸುವಂತೆ ಪೂನಿಯಾ ಅವರಿಗೆ ಸೂಚಿಸಿತು.

ಇದು ಮೂವರು ಸದಸ್ಯರ ಪೀಠದ ತೀರ್ಮಾನವಾಗಿದ್ದು, ಅದಕ್ಕೆ ಇಬ್ಬರು ಸದಸ್ಯರ ಪೀಠದ ಅರ್ನಾಬ್ ಗೋಸ್ವಾಮಿ ಪ್ರಕರಣದ ತೀರ್ಮಾನವನ್ನು ಬದಿಗೆ ಸರಿಸುವ ಅಧಿಕಾರವಿತ್ತು ಎಂಬುದು ನಿಜ. ಆದರೆ, ಈ ಪೀಠವು ಸಾರಾಸಗಟಾಗಿ ಪೂನಿಯಾ ಅವರ ಅರ್ಜಿಯನ್ನು ಮೇಲ್ನೋಟಕ್ಕೇ ತಿರಸ್ಕರಿಸಿತು. ಅದು ಏನು ಹೇಳಿತು:

ಪೂನಿಯಾ

“ಸಂವಿಧಾನದ ವಿಧಿ 32ರ ಅನ್ವಯ ಸಲ್ಲಿಸಲಾದ ಈ ಅರ್ಜಿಯ ವಿಚಾರಣೆ ನಡೆಸಲು ನಮಗೆ ಮನಸ್ಸಿಲ್ಲ. ಅದಕ್ಕನುಗುಣವಾಗಿ ಈ ರಿಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಆದರೆ ಅರ್ಜಿದಾರರಿಗೆ ಸಂಬಂಧಿತ ಹೈಕೋರ್ಟ್‌ಗಳು/ ವೇದಿಕೆಗಳಿಗೆ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವಿದೆ”.

ಮೇ 1ರಂದು ಸುಪ್ರೀಂಕೋರ್ಟ್ ಅದೇ ರೀತಿಯ ಭಾಷಣಗಳನ್ನು ಮಾಡಿದ್ದಕ್ಕಾಗಿ ಬೇರೆಬೇರೆ ಕಡೆ ಹೂಡಲಾದ ದಾವೆಗಳನ್ನು ಒಂದೆಡೆ ಸೇರಿಸಲು ಶಾರ್ಜೀಲ್ ಇಮಾಮ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತ್ತು. ಇಮಾಮ್ ಪ್ರಕರಣದಲ್ಲಿ ಇರುವ ವ್ಯತ್ಯಾಸವೆಂದರೆ, ತಕ್ಷಣದ ಪರಿಹಾರ ಇರಲಿಲ್ಲ. ಅದೆಂದರೆ, ಗೋಸ್ವಾಮಿಗೆ ಮಾಡಿದಂತೆ ಮೊದಲ ಎಫ್‌ಐಆರ್ ಪ್ರಕರಣ ಹೊರತುಪಡಿಸಿ ಬೇರೆ ಎಫ್‌ಐಆರ್‌ಗಳಲ್ಲಿ ತನಿಖೆಗೆ ತಡೆ ಇರಲಿಲ್ಲ.

ಶಾರ್ಜೀಲ್ ಇಮಾಮ್

ಈ ಮೂರೂ ಪ್ರಕರಣಗಳನ್ನು ಮೂರು ಬೇರೆಬೇರೆ ಪೀಠಗಳು ವಿಚಾರಣೆ ನಡೆಸಿದ್ದವು. ಪ್ರಕರಣದಿಂದ ಪ್ರಕರಣಕ್ಕೆ ಕಾನೂನಿನ ಅನ್ವಯವು ಬದಲಾಗುತ್ತದೆ ಎಂಬುದು ಕಾನೂನು ರೂಢಿಯಲ್ಲಿ ಅರ್ಥವಾಗುವ ವಿಷಯ. ಆದರೆ, ಪ್ರತಿಯೊಂದು ಪ್ರಕರಣದ ವಿಶಿಷ್ಟತೆಗಳನ್ನು ಪರಿಗಣಿಸದೆಯೇ ಯಾಂತ್ರಿಕವಾಗಿ ಕಾನೂನನ್ನು ಅನ್ವಯಿಸುವ ಪರಿಸ್ಥಿತಿಯು ಅಪೇಕ್ಷಿತವಲ್ಲ ಮತ್ತು ಇದು ಸಾಕಷ್ಟು ಅನ್ಯಾಯದಲ್ಲಿ ಕೊನೆಗೊಳ್ಳುತ್ತದೆ.

ನ್ಯಾಯಾಧೀಶರು ಮತ್ತು ಕಾನೂನಿನ ಅನ್ವಯ

ಆದರೆ, ನ್ಯಾಯಾಧೀಶರಿಂದ ನ್ಯಾಯಾಧೀಶರಿಗೆ ತೀರ್ಪುಗಳು ಬದಲಾದಾಗ ಕಾನೂನಿನ ಅನ್ವಯದ ವಿಷಯವನ್ನು ಗಂಭೀರವಾಗಿ ಪರಿಶೀಲಿಸಬೇಕು. ಬೇರೆಬೇರೆ ನ್ಯಾಯಾಧೀಶರು ಕಾನೂನಿನ ಬಗ್ಗೆ ಬೇರೆಬೇರೆ ದೃಷ್ಟಿಕೋನ ಹೊಂದಿರುತ್ತಾರೆ ಎಂಬುದು ನಿಜ. ಅವರು ಬೇರೆ ವ್ಯಾಖ್ಯಾನಗಳನ್ನೂ ಹೊಂದಿರುತ್ತಾರೆ.

ಮೇಲಿನ ಮೂರೂ ಪ್ರಕರಣಗಳು ಸಂವಿಧಾನದ ವಿಧಿ 32ರ ಪ್ರಕಾರ ಸಲ್ಲಿಸಲಾದ ರಿಟ್ ಅರ್ಜಿಗಳಾಗಿವೆ. ಅದು ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾದಾಗ ನೇರವಾಗಿ ಸುಪ್ರೀಂಕೋರ್ಟಿನ ಬಾಗಿಲು ತಟ್ಟುವ ಅವಕಾಶ ನೀಡುತ್ತದೆ. ಇದರ ವಿಚಾರಣೆ ನಡೆಸಬೇಕೋ ಬೇಡವೋ ಎಂಬುದು ನ್ಯಾಯಾಲಯದ ವಿವೇಚನೆಗೆ ಬಿಟ್ಟ ವಿಷಯ ಎಂಬುದು ಸರ್ವವಿಧಿತ. ಆದರೆ, ಈ ಕುರಿತು ಏಕರೂಪದ ನಿಲುಮೆ ಇರಬೇಕೆಂಬುದನ್ನು ನಿರಾಕರಿಸಲು ಸಾಧ್ಯವಿಲ್ಲ.

ಒಂದು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಲವು ಎಫ್‌ಐಆರ್‌ಗಳಲ್ಲಿ ಮೊದಲ ಎಫ್‌ಐಆರ್ ಹೊರತುಪಡಿಸಿ ಉಳಿದವುಗಳಲ್ಲಿ ತಡೆ ನೀಡುವುದಾದಲ್ಲಿ (ಗೋಸ್ವಾಮಿ ಪ್ರಕರಣ), ಇಂತದ್ದೇ ಪ್ರಕರಣಗಳಲ್ಲಿ ಇತರ ವ್ಯಕ್ತಿಗಳಿಗೆ ಅಂತದ್ದೇ ಪರಿಹಾರ ನೀಡಬೇಕು- ಒಂದು ವೇಳೆ ಪರಿಸ್ಥಿತಿಯು ಬೇರೆಯಾಗಿದೆ ಎಂದು ನ್ಯಾಯಾಲಯವು ಭಾವಿಸಿದ ಸಂದರ್ಭವನ್ನು ಹೊರತುಪಡಿಸಿ. ಈ ನಿರ್ಧಾರವನ್ನು ತೀರ್ಪಿನಲ್ಲೇ ದಾಖಲಿಸಬೇಕು. ಇಲ್ಲವಾದಲ್ಲಿ ಕಾನೂನಿನ ಅನ್ವಯವು ಮನಸೋಇಚ್ಛೆ ನಡೆಯುತ್ತಿದೆ ಎಂಬಂತೆ ಕಾಣುತ್ತದೆ.

ಸಂವಿಧಾನದ ವಿಧಿ 141 ಹಿಂದಿನ ತೀರ್ಪುಗಳಿಂದ ಬೇರೆಯಾದ ತೀರ್ಪುಗಳನ್ನು ನೀಡಲು ಸುಪ್ರೀಂಕೋರ್ಟಿಗೆ ಅವಕಾಶ ನೀಡುತ್ತದೆ ಎಂಬುದು ನಿಜ. ಆದರೆ, ಚಿಕ್ಕ ಅವಧಿಯಲ್ಲಿ ಬೇರೆ ಬೇರೆ ನ್ಯಾಯಾಧೀಶರುಗಳು ಪೀಠದಲ್ಲಿ ಇದ್ದರು ಎಂಬ ಕಾರಣಕ್ಕಾಗಿ ಬೇರೆಬೇರೆ ತೀರ್ಪುಗಳು ಬರುವುದು ಅಪೇಕ್ಷಣೀಯವಲ್ಲ.

ಇದು ಅರ್ನಾಬ್, ಪೂನಿಯಾ ಮತ್ತು ಇಮಾಮ್ ಪ್ರಕರಣದಲ್ಲಿ ಇದ್ದ ಮೂರು ಬೇರೆಬೇರೆ ನ್ಯಾಯಪೀಠಗಳ ಸಮಸ್ಯೆಯಲ್ಲ. ಇದು ಇಡೀ ಸುಪ್ರೀಂಕೋರ್ಟ್ ಎದುರಿಸುತ್ತಿರುವ ರಾಚನಿಕ ಸಮಸ್ಯೆ. ಸುಪ್ರೀಂಕೋರ್ಟ್‌ನಲ್ಲಿ ಎಲ್ಲಾ ನ್ಯಾಯಾಧೀಶರು ಸಮನರು; ಆದುದರಿಂದ ಒಂದು ಸುಪ್ರೀಂಕೋರ್ಟ್ ತೀರ್ಮಾನಕ್ಕೆ ಮೇಲ್ಮನವಿ ಸಲ್ಲಿಸುವುದು ಆ ನಿಟ್ಟಿನಲ್ಲಿ ಸಾಧ್ಯವಿಲ್ಲ. ಯಾವ ಪೀಠದ ಮುಂದೆ ಪ್ರಕರಣ ಇದೆಯೋ, ಅದರ ತೀರ್ಪಿನಂತೆ ಪ್ರಕರಣದ ಕತೆ ಮುಗಿಯುತ್ತದೆ.

ಉದಾಹರಣೆಗೆ ಕೆಲವು ನ್ಯಾಯಾಧೀಶರು ಉಳಿದ ನ್ಯಾಯಾಧೀಶರುಗಳಿಗಿಂತ ಹೆಚ್ಚಾಗಿ ಜಾಮೀನು ನೀಡುತ್ತಾರೆ. ಕೆಲವರು ಕೆಲವು ಕಾನೂನುಗಳಲ್ಲಿ- ಉದಾಹರಣೆಗೆ ತೆರಿಗೆ ಕಾನೂನುಗಳಲ್ಲಿ ನಿಷ್ಣಾತರಾಗಿರುತ್ತಾರೆ. ಇದರ ಅರ್ಥವೆಂದರೆ, ಸುಪ್ರೀಂಕೋರ್ಟ್ ಒಂದೇ ನ್ಯಾಯಾಲಯವಲ್ಲ. ಅದು 16 ಬೇರೆಬೇರೆ ನ್ಯಾಯಾಲಯಗಳು. ಪೀಠದಲ್ಲಿರುವ ನ್ಯಾಯಾಧೀಶರುಗಳ ಸಂಖ್ಯೆಗೆ ಅನುಗುಣವಾಗಿ ಅವರವರು ಕಾನೂನನ್ನು ಮತ್ತು ಹಿಂದಿನ ತೀರ್ಪುಗಳನ್ನು ಹೇಗೆಹೇಗೆ ವ್ಯಾಖ್ಯಾನ ಮಾಡುತ್ತಾರೋ, ಅವುಗಳಿಗೆ ಅನುಗುಣವಾಗಿಯೇ ತೀರ್ಪುಗಳು ಇರುತ್ತವೆ! ಇದಕ್ಕೆ ಪರಿಹಾರವನ್ನೂ ಸುಪ್ರೀಂಕೋರ್ಟೇ ಕಂಡುಕೊಳ್ಳಬೇಕು.

(ಲೇಖಕ ಸರೀಂ ನವೇದ್ ಅವರು ದಿಲ್ಲಿಯಲ್ಲಿ ವಕೀಲರು)

ಕೃಪೆ: ದಿ ವೈರ್


ಇದನ್ನೂ ಓದಿ: ಎರಡು ವಾರಗಳಲ್ಲಿ ಪಿಎಂ ಕೇರ್ಸ್ ವಿವರ ನೀಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...