Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...