Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...