Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...