Homeಅಂಕಣಗಳುಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

ಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

- Advertisement -
- Advertisement -
ರಾಜಕುಮಾರನಾಗಿದ್ದ ಸಿದ್ಧಾರ್ಥ, ಬುದ್ಧನಾದ. ಬುದ್ಧನಾದ ಮೇಲೆ ಭಾರತದ ಎಲ್ಲ ಕಡೆ ಪ್ರವಾಸಕ್ಕೆ ಹೊರಟ. ಹಾಗೆ ಹೊರಟವನು ಒಮ್ಮೆ ತನ್ನ ಊರಾದ ಕಪಿಲವಸ್ತುವಿಗೂ ಭೇಟಿ ನೀಡಿದ. ಕಪಿಲವಸ್ತುವಿನಲ್ಲಿ ಮೊಕ್ಕಾಂ ಹೂಡಿದಾಗ, ಬುದ್ಧನ ಸೇವೆಯಲ್ಲಿದ್ದ ಸಿದ್ದಾರ್ಥನ ಸೋದರಳಿಯ ಆನಂದ ಬುದ್ಧನ ಪೂರ್ವಾಶ್ರಮದ ಮಡದಿ ಯಶೋಧರಾ ಅವರನ್ನು ಕಾಣಲು ಅವಳ ಅರಮನೆಗೆ ಬಂದ. ಆಕೆ ಪೂರ್ವಾಶ್ರಮದ ಗಂಡ ಸಿದ್ಧಾರ್ಥನ ಯೋಗಕ್ಷೆÃಮ ವಿಚಾರಿಸಿದಳು. ಬುದ್ಧನ ಕೀರ್ತಿ ಭಾರತದಲ್ಲಿ ಪಸರಿಸುತ್ತಿರುವುದನ್ನು ಕೇಳಿ ತಿಳಿದು ಸಂಪ್ರಿÃತಳಾದಳು. ಪೂರ್ವಾಶ್ರಮದ ಮಡದಿಯಾದ ಯಶೋಧರೆ ತನ್ನ ಮನೆಗೆ ಆತಿಥ್ಯ ಸ್ವಿÃಕರಿಸಲು ಬುದ್ಧನನ್ನು ಆನಂದನ ಮೂಲಕ ಆಹ್ವಾನಿಸಿದಳು. ಹಿಂತಿರುಗಿ ಬಂದ ಆನಂದ ಯಶೋಧರೆಯ ಆಹ್ವಾನದ ಬಗೆಗೆ ಬುದ್ದನಿಗೆ ತಿಳಿಸಿದ. ಮನೆ ತೊರೆದು ಸನ್ಯಾಸ ಸ್ವಿÃಕರಿಸಿದವರು ತನ್ನ ಪೂರ್ವಾಶ್ರಮದ ಮಡದಿ-ಮಕ್ಕಳನ್ನು ನೋಡಲು ಹೋಗುವುದು ಆ ದಿನಗಳಲ್ಲಿ ನಿಷೇಧಿಸಲ್ಪಟ್ಟಿತ್ತು. ಬುದ್ದ ಈ ನಿಯಮವನ್ನು ಮೀರಲು ತೀರ್ಮಾನಿಸಿದ. ಯಶೋಧರೆಯ ಕೋರಿಕೆಯನ್ನು ಮನ್ನಿಸಿ ಆಕೆಯ ಅರಮನೆಗೆ ಹೊರಟ.
ಯಶೋಧರೆ ಬುದ್ದನನ್ನು ಸಡಗರದಿಂದ, ಭಕ್ತಿಯಿಂದ ಸ್ವಾಗತಿಸಿದಳು. ತನಗೂ ದೀಕ್ಷೆ ನೀಡಬೇಕೆಂದು ವಿನಂತಿಸಿಕೊಂಡಳು. ಹೆಂಗಸರಿಗೆ ದೀಕ್ಷೆ ನೀಡಿದರೆ ನನ್ನ ಧರ್ಮಕ್ಕೆ ಅರ್ಧಾಯಸ್ಸು; ಆದ್ದರಿಂದ ದೀಕ್ಷೆ ಕೊಡಲೊಲ್ಲೆ ಎಂದರು ಬುದ್ದ. ಯಶೋಧರೆ ಕೆರಳಿದ ಸಿಂಹಿಣಿಯಂತಾದಳು. ಬುದ್ಧನಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದಳು. ಪುರುಷರಿಗೆ ಮಾತ್ರ ಮನ್ನಣೆ ನೀಡುವ ಈ ನಿಮ್ಮ ಧರ್ಮದಲ್ಲಿ ಪರಿಪೂರ್ಣತೆಯಿಲ್ಲ; ಅದು ಮುಕ್ಕಾದ ಧರ್ಮ. ಈ ನಿಮ್ಮ ನಿಲುವನ್ನು ಒಪ್ಪಲಾಗುವುದಿಲ್ಲ’ ಎಂದಳು. ಬುದ್ಧ ಜಿಜ್ಞಾಸೆಗೆ ತೊಡಗಿದ. ಈ ಚರ್ಚೆಯ ಪರಿಣಾಮವಾಗಿ, ಯಶೋಧರೆಯ ಅಪೇಕ್ಷೆಯಂತೆ ಬುದ್ಧ ಆಕೆಗೆ ಧರ್ಮ ದೀಕ್ಷೆ ನೀಡಿದ.

ಬುದ್ದ ಹೆಂಗಸರಿಗೂ ಧರ್ಮ ದೀಕ್ಷೆ ನೀಡಿದ್ದರಿಂದ ಬೌದ್ಧ ಧರ್ಮಕ್ಕೆ ಅರ್ಧಾಯಸ್ಸು ಆದಂತೆ ಕಾಣುತ್ತಿಲ್ಲ. ಹಲವು ದೇಶಗಳಿಗೆ ವಿಸ್ತರಿಸಿ ಗಟ್ಟಿಯಾಗೇ ಬೇರುಬಿಟ್ಟಂತೆ ಕಾಣುತ್ತಿದೆ. ಹಾಗೆಯೇ ಮಹಿಳೆಯರಿಗೂ ಧರ್ಮ ದೀಕ್ಷೆ ಕೊಡುವ ಬುದ್ಧನ ನೀತಿ ವ್ಯಾಪಕ ಪರಿಣಾಮ ಬೀರಿದ್ದಂತೂ ನಿಜ. ಕಾಲದಿಂದ ಕಾಲಕ್ಕೆ ಈ ಸಾಮಾಜಿಕ ಜಾಗೃತಿ ವಿಸ್ತರಿಸುತ್ತಾ ಸಾಗಿದೆ. ಈಗಿನ ಕಾಲದಲ್ಲಿ ಸಿನಿಮಾ, ನಾಟಕ ಕಂಪನಿಗಳಲ್ಲಿ, ಸರ್ಕಾರದಲ್ಲಿ, ಖಾಸಗಿ ಕಂಪನಿಗಳಲ್ಲಿ, ಮಿಲ್ಲುಗಳಲ್ಲಿ, ಐಟಿ ಬಿಟಿಗಳಲ್ಲಿ, ಖಾಸಗಿ ಮತ್ತು ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪುರುಷರು ಮತ್ತು ಸ್ತಿçÃಯರು ಒಟ್ಟಿಗೆ ಕೆಲಸ ಮಾಡುವ ಅವಕಾಶಗಳು ಹೆಚ್ಚುತ್ತಾ ಸಾಗಿವೆ. ಈ ಅವಕಾಶಗಳು ಹೆಚ್ಚಿದಂತೆಲ್ಲಾ ಸ್ತಿçÃಯರ ಮೇಲಿನ ದೌರ್ಜನ್ಯ, ಲಂಪಟತನ ಮಿತಿಮೀರಿ ಬೆಳೆದಿರುವುದಂತೂ ನಿಜ. ಇದಕ್ಕೆ ಮೊದಲು ನಮ್ಮ ದೇಶದಲ್ಲಿ ಇದೆಲ್ಲ ಇರಲಿಲ್ಲವೇ? ಇತ್ತು, ಸೀಮಿತವಾಗಿತ್ತು.

ನಮ್ಮ ಹೆಣ್ಣು ಮಕ್ಕಳು ಕಳೆದ 50 ವರ್ಷಗಳಿಂದ ಈ ಬಗೆಯ ದೌರ್ಜನ್ಯವನ್ನು ಮೌನವಾಗಿ ಅನುಭವಿಸಿಕೊಂಡು ಬಂದಿದ್ದಾರೆ. ಮುಚ್ಚುಮರೆಯಲ್ಲಿ ನಡೆಯುತ್ತಿದ್ದ ಈ ಬಗೆಯ ದೌರ್ಜನ್ಯ ಈಗ ಮಿತಿಮೀರಿದೆಯಾಗಿ, ಹೆಣ್ಣು ಮಕ್ಕಳು ಒಬ್ಬೊಬ್ಬರೇ ತಮಗಾದ ಅಪಮಾನವನ್ನು ಬಾಯ್ತೆರೆದು ಹೇಳಿಕೊಳ್ಳುತ್ತಿದ್ದಾರೆ. ಹೇಳಿಕೊಂಡರೆ ತಮ್ಮ ಭವಿಷ್ಯ ಹಾಳಾಗುವುದೆಂದು ಭಾವಿಸಿ ಬಾಯಿಯನ್ನು ಬಿಗಿಯಾಗಿ ಹಿಡಿದುಕೊಂಡು ಮೂಕವೇದನೆ ಅನುಭವಿಸುತ್ತಿರುವ ಸಹಸ್ರಾರು ಹೆಣ್ಣು ಮಕ್ಕಳು ನಮ್ಮ ನಡುವೆಯೇ ಇದ್ದಾರೆ. ಬಹಳ ಕಾಲದಿಂದ ನಡೆದು ಬಂದಿರುವ ಕಿರುಕುಳ ತಾಳಲಾದರೆ, ಆಕ್ರೊÃಶಗೊಂಡು ಕೆಂಡಾಮಂಡಲರಾದ ಅಸಹಾಯಕ ಸ್ತಿçÃಯರು ಈಗ ಒಬ್ಬೊಬ್ಬರಾಗಿ ಭುಗಿಲೆದ್ದು ತಮ್ಮ ಆಕ್ರೊÃಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಪ್ರತಿಕ್ರಿಯೆ ಸಹಜವಾದುದು. ನೊಂದ ಹೆಣ್ಣುಮಕ್ಕಳ ಪರವಾಗಿ ದನಿಯೆತ್ತುವುದು ಸಮಾಜದ ಸ್ವಾಸ್ಥö್ಯ ಬಯಸುವ ಎಲ್ಲರ ಕರ್ತವ್ಯ.
ಈ ಸಂದರ್ಭದಲ್ಲಿ ಸರ್ಕಾರಗಳು, ನ್ಯಾಯಾಲಯಗಳು ಕಾನೂನಿನ ಮಿತಿಯಲ್ಲಿ ತಾನೇನು ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ತೆಗೆದುಕೊಂಡಿವೆ ಎಂಬುದು ನಿಜ. ಆದರೆ ಈ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ಇದಿಷ್ಟೆÃ ಸಾಕೆ? ಖಂಡಿತ ಸಾಲದು.
ಈ ಸಾಮಾಜಿಕ ಪಿಡುಗಿಗೆ ನಮ್ಮ ಸಮಾಜದ ಚಾರಿತ್ರö್ಯದ ಕೊರತೆ ಪ್ರಮುಖ ಕಾರಣ. ಚಾರಿತ್ರö್ಯವಿಲ್ಲದ ಜನ ಮತ್ತು ಚಾರಿತ್ರö್ಯವಿಲ್ಲದ ದೇಶಕ್ಕೆ ಭವಿಷ್ಯವಿಲ್ಲ. ಆದ್ದರಿಂದ ವಿದ್ಯೆ ಕಲಿಸುವಾಗ ಚಾರಿತ್ರö್ಯ ವೃದ್ಧಿಯ ಶಿಕ್ಷಣವನ್ನು ಜೊತೆಜೊತೆಗೆ ನೀಡಬೇಕು. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವ ಶಿಕ್ಷಣವನ್ನು ನಾವು ಕೊಡುತ್ತಿಲ್ಲ. ಹೀಗಾಗಿ ಅನೈತಿಕತೆ, ದ್ವೆÃಷ ಭಾವನೆ, ಕಾಮಾತುರತೆ, ದುರಾಸೆ, ಅಹಂಕಾರ, ಸೇಡಿನ ಮನೋಭಾವ ಇವೆಲ್ಲವೂ ಏಕಕಾಲದಲ್ಲಿ ನಮ್ಮ ಸಮಾಜವನ್ನು ಕಾಡುತ್ತಿವೆ.
* ಪ್ರಾಥಮಿಕ ಶಾಲೆಗಳಲ್ಲಿ ಕೋ-ಎಜುಕೇಷನ್ ಇರಬೇಕು, ಇಲ್ಲಿ ಶಿಕ್ಷಕರು ಎಲ್ಲರೂ ಮಹಿಳೆಯರೇ ಇದ್ದರೆ ಚೆನ್ನ. ಹಾಗೆ ಅಲ್ಲಿಂದ ಮುಂದಕ್ಕೆ ತಕ್ಷಣದ ಕ್ರಮವಾಗಿ, ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೆÃಕ ಶಾಲೆಗಳನ್ನು ಮಾಡುವುದು ಒಳ್ಳೆಯದು. ಹೆಣ್ಣುಮಕ್ಕಳ ಶಾಲೆಗಳಲ್ಲಿ ಪೂರ್ತಿ ಮಹಿಳಾ ಶಿಕ್ಷಕಿಯರೇ ಇರುವಂತೆಯೂ ಹಾಗೂ ಗಂಡುಮಕ್ಕಳ ಶಾಲೆಗಳಲ್ಲಿ ಪುರುಷ ಶಿಕ್ಷಕರು ಇರುವಂತೆಯೂ ವ್ಯವಸ್ಥೆ ಮಾಡಬೇಕು. ಇದು ಶಾಶ್ವತ ಪರಿಹಾರವಲ್ಲವಾದರೂ ಬಿಗಡಾಯಿಸಿರುವ ಇಂದಿನ ಪರಿಸ್ಥಿತಿಗೆ ಒಂದು ತಾತ್ಕಾಲಿಕ ಉಪಕ್ರಮ ಆಗಬಹುದು.
* ಹೆಂಗಸರು ಗಂಡಸರು ಕೂಡಿ ಕೆಲಸ ಮಾಡುವ ಎಲ್ಲೆಡೆಯೂ ಹೆಣ್ಣು ಮಕ್ಕಳ ವಿಜಿಲೆನ್ಸ್ ಕಮಿಟಿ ರಚಿಸಬೇಕು. ಈ ಸಲಹಾ ಸಮಿತಿ ನೀಡುವ ವರದಿಯನ್ನು ಪರಿಶೀಲಿಸಿ ನ್ಯಾಯಯುತ ತೀರ್ಮಾನ ತೆಗೆದುಕೊಳ್ಳಲು, ಜೊತೆಜೊತೆಗೇ ಒಂದು ನಿಷ್ಪಕ್ಷವಾದ ಉನ್ನತ ಸಮಿತಿಯನ್ನು ರಚಿಸಬೇಕು. ತಪ್ಪಿತಸ್ಥರು ದೊಡ್ಡ ಅಧಿಕಾರಿಯಾಗಿರಲಿ, ಸಾಮಾನ್ಯ ನೌಕರರಾಗಿರಲಿ ಎಲ್ಲರಿಗೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಅಪರಾಧ ಎಸಗಿದವರನ್ನು ಕೆಲಸದಿಂದ ಕಿತ್ತೆಸೆಯಬೇಕು. ಹೀಗೆ ಮಾಡುವುದರಿಂದ ಬಹುಮಟ್ಟಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಇಳಿಮುಖವಾಗುವುದೆಂದು ನಾನು ಭಾವಿಸುತ್ತೆÃನೆ.
* ಮುಂದಿನ ಪೀಳಿಗೆಯಲ್ಲಾದರೂ ಈ ಪಿಡುಗು ಸಮಾಜದಿಂದ ದೂರವಾಗಲಿ ಎಂಬ ಧ್ಯೆÃಯ ನಮ್ಮದಾದರೆ, ಶಾಲೆಯ ಮಕ್ಕಳಿಗೆ ಅರಿಷಡ್ವರ್ಗಗಳನ್ನು ದೂರ ಮಾಡುವ ಶಿಕ್ಷಣ ನೀಡಬೇಕು. ಕಾಮ, ಕ್ರೊÃಧ, ಮೋಹ, ಲೋಭ, ಮದ, ಮತ್ಸರಗಳು ಅರಿಷಡ್ವರ್ಗಗಳು. ಇವು ನಮ್ಮ ಅರಿಗಳು, ಶತ್ರುಗಳು. ಈ ಅರಿಷಡ್ವರ್ಗಗಳನ್ನು ಗೆದ್ದರೆ ಮನುಷ್ಯ ಸ್ವಚ್ಛಮನಸ್ಸಿನವನಾಗುತ್ತಾನೆ.
ಈ ಅರಿಷಡ್ವರ್ಗಗಳಲ್ಲಿ ಈಗ ನಮ್ಮ ಸಮಾಜವನ್ನು ಕಾಡುತ್ತಿರುವ ಅತಿ ದೊಡ್ಡ ಶತ್ರುವೆಂದರೆ ಕಾಮ. ಕಾಮವನ್ನು ಗೆಲ್ಲಬೇಕಾದರೆ ಮನಸ್ಸಿನ ಮೇಲೆ ಹತೋಟಿ ಇಟ್ಟುಕೊಳ್ಳುವುದನ್ನು ಕಲಿಸಬೇಕು. ಕಾಮ ಎನ್ನುವ ಶತ್ರು ಕಾಡುತ್ತಾ ಬಂದಾಗ ನಮ್ಮ ಮನಸ್ಸನ್ನು ನಿಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಆಮೆ ತನ್ನ ಶತ್ರುವನ್ನು ಕಂಡೊಡನೆ ಹೇಗೆ ತನ್ನ ಶರೀರವನ್ನು ತನ್ನ ಚಿಪ್ಪಿನೊಳಕ್ಕೆ ಎಳೆದುಕೊಳ್ಳುತ್ತದೆಯೋ ಹಾಗೆ ಕೆಟ್ಟ ವಿಷಯಗಳು ಮನಸ್ಸನ್ನು ಆಕ್ರಮಿಸಿದಾಗ ನಾವು ನಮ್ಮ ಮನಸ್ಸನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು, ಆ ಕೆಟ್ಟ ವಿಚಾರಗಳು ನಮ್ಮನ್ನು ಅಧೋಗತಿಗಿಳಿಸುವುದನ್ನು ತಡೆಗಟ್ಟಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...