Homeಅಂಕಣಗಳುಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

ಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

- Advertisement -
- Advertisement -
ರಾಜಕುಮಾರನಾಗಿದ್ದ ಸಿದ್ಧಾರ್ಥ, ಬುದ್ಧನಾದ. ಬುದ್ಧನಾದ ಮೇಲೆ ಭಾರತದ ಎಲ್ಲ ಕಡೆ ಪ್ರವಾಸಕ್ಕೆ ಹೊರಟ. ಹಾಗೆ ಹೊರಟವನು ಒಮ್ಮೆ ತನ್ನ ಊರಾದ ಕಪಿಲವಸ್ತುವಿಗೂ ಭೇಟಿ ನೀಡಿದ. ಕಪಿಲವಸ್ತುವಿನಲ್ಲಿ ಮೊಕ್ಕಾಂ ಹೂಡಿದಾಗ, ಬುದ್ಧನ ಸೇವೆಯಲ್ಲಿದ್ದ ಸಿದ್ದಾರ್ಥನ ಸೋದರಳಿಯ ಆನಂದ ಬುದ್ಧನ ಪೂರ್ವಾಶ್ರಮದ ಮಡದಿ ಯಶೋಧರಾ ಅವರನ್ನು ಕಾಣಲು ಅವಳ ಅರಮನೆಗೆ ಬಂದ. ಆಕೆ ಪೂರ್ವಾಶ್ರಮದ ಗಂಡ ಸಿದ್ಧಾರ್ಥನ ಯೋಗಕ್ಷೆÃಮ ವಿಚಾರಿಸಿದಳು. ಬುದ್ಧನ ಕೀರ್ತಿ ಭಾರತದಲ್ಲಿ ಪಸರಿಸುತ್ತಿರುವುದನ್ನು ಕೇಳಿ ತಿಳಿದು ಸಂಪ್ರಿÃತಳಾದಳು. ಪೂರ್ವಾಶ್ರಮದ ಮಡದಿಯಾದ ಯಶೋಧರೆ ತನ್ನ ಮನೆಗೆ ಆತಿಥ್ಯ ಸ್ವಿÃಕರಿಸಲು ಬುದ್ಧನನ್ನು ಆನಂದನ ಮೂಲಕ ಆಹ್ವಾನಿಸಿದಳು. ಹಿಂತಿರುಗಿ ಬಂದ ಆನಂದ ಯಶೋಧರೆಯ ಆಹ್ವಾನದ ಬಗೆಗೆ ಬುದ್ದನಿಗೆ ತಿಳಿಸಿದ. ಮನೆ ತೊರೆದು ಸನ್ಯಾಸ ಸ್ವಿÃಕರಿಸಿದವರು ತನ್ನ ಪೂರ್ವಾಶ್ರಮದ ಮಡದಿ-ಮಕ್ಕಳನ್ನು ನೋಡಲು ಹೋಗುವುದು ಆ ದಿನಗಳಲ್ಲಿ ನಿಷೇಧಿಸಲ್ಪಟ್ಟಿತ್ತು. ಬುದ್ದ ಈ ನಿಯಮವನ್ನು ಮೀರಲು ತೀರ್ಮಾನಿಸಿದ. ಯಶೋಧರೆಯ ಕೋರಿಕೆಯನ್ನು ಮನ್ನಿಸಿ ಆಕೆಯ ಅರಮನೆಗೆ ಹೊರಟ.
ಯಶೋಧರೆ ಬುದ್ದನನ್ನು ಸಡಗರದಿಂದ, ಭಕ್ತಿಯಿಂದ ಸ್ವಾಗತಿಸಿದಳು. ತನಗೂ ದೀಕ್ಷೆ ನೀಡಬೇಕೆಂದು ವಿನಂತಿಸಿಕೊಂಡಳು. ಹೆಂಗಸರಿಗೆ ದೀಕ್ಷೆ ನೀಡಿದರೆ ನನ್ನ ಧರ್ಮಕ್ಕೆ ಅರ್ಧಾಯಸ್ಸು; ಆದ್ದರಿಂದ ದೀಕ್ಷೆ ಕೊಡಲೊಲ್ಲೆ ಎಂದರು ಬುದ್ದ. ಯಶೋಧರೆ ಕೆರಳಿದ ಸಿಂಹಿಣಿಯಂತಾದಳು. ಬುದ್ಧನಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದಳು. ಪುರುಷರಿಗೆ ಮಾತ್ರ ಮನ್ನಣೆ ನೀಡುವ ಈ ನಿಮ್ಮ ಧರ್ಮದಲ್ಲಿ ಪರಿಪೂರ್ಣತೆಯಿಲ್ಲ; ಅದು ಮುಕ್ಕಾದ ಧರ್ಮ. ಈ ನಿಮ್ಮ ನಿಲುವನ್ನು ಒಪ್ಪಲಾಗುವುದಿಲ್ಲ’ ಎಂದಳು. ಬುದ್ಧ ಜಿಜ್ಞಾಸೆಗೆ ತೊಡಗಿದ. ಈ ಚರ್ಚೆಯ ಪರಿಣಾಮವಾಗಿ, ಯಶೋಧರೆಯ ಅಪೇಕ್ಷೆಯಂತೆ ಬುದ್ಧ ಆಕೆಗೆ ಧರ್ಮ ದೀಕ್ಷೆ ನೀಡಿದ.

ಬುದ್ದ ಹೆಂಗಸರಿಗೂ ಧರ್ಮ ದೀಕ್ಷೆ ನೀಡಿದ್ದರಿಂದ ಬೌದ್ಧ ಧರ್ಮಕ್ಕೆ ಅರ್ಧಾಯಸ್ಸು ಆದಂತೆ ಕಾಣುತ್ತಿಲ್ಲ. ಹಲವು ದೇಶಗಳಿಗೆ ವಿಸ್ತರಿಸಿ ಗಟ್ಟಿಯಾಗೇ ಬೇರುಬಿಟ್ಟಂತೆ ಕಾಣುತ್ತಿದೆ. ಹಾಗೆಯೇ ಮಹಿಳೆಯರಿಗೂ ಧರ್ಮ ದೀಕ್ಷೆ ಕೊಡುವ ಬುದ್ಧನ ನೀತಿ ವ್ಯಾಪಕ ಪರಿಣಾಮ ಬೀರಿದ್ದಂತೂ ನಿಜ. ಕಾಲದಿಂದ ಕಾಲಕ್ಕೆ ಈ ಸಾಮಾಜಿಕ ಜಾಗೃತಿ ವಿಸ್ತರಿಸುತ್ತಾ ಸಾಗಿದೆ. ಈಗಿನ ಕಾಲದಲ್ಲಿ ಸಿನಿಮಾ, ನಾಟಕ ಕಂಪನಿಗಳಲ್ಲಿ, ಸರ್ಕಾರದಲ್ಲಿ, ಖಾಸಗಿ ಕಂಪನಿಗಳಲ್ಲಿ, ಮಿಲ್ಲುಗಳಲ್ಲಿ, ಐಟಿ ಬಿಟಿಗಳಲ್ಲಿ, ಖಾಸಗಿ ಮತ್ತು ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪುರುಷರು ಮತ್ತು ಸ್ತಿçÃಯರು ಒಟ್ಟಿಗೆ ಕೆಲಸ ಮಾಡುವ ಅವಕಾಶಗಳು ಹೆಚ್ಚುತ್ತಾ ಸಾಗಿವೆ. ಈ ಅವಕಾಶಗಳು ಹೆಚ್ಚಿದಂತೆಲ್ಲಾ ಸ್ತಿçÃಯರ ಮೇಲಿನ ದೌರ್ಜನ್ಯ, ಲಂಪಟತನ ಮಿತಿಮೀರಿ ಬೆಳೆದಿರುವುದಂತೂ ನಿಜ. ಇದಕ್ಕೆ ಮೊದಲು ನಮ್ಮ ದೇಶದಲ್ಲಿ ಇದೆಲ್ಲ ಇರಲಿಲ್ಲವೇ? ಇತ್ತು, ಸೀಮಿತವಾಗಿತ್ತು.

ನಮ್ಮ ಹೆಣ್ಣು ಮಕ್ಕಳು ಕಳೆದ 50 ವರ್ಷಗಳಿಂದ ಈ ಬಗೆಯ ದೌರ್ಜನ್ಯವನ್ನು ಮೌನವಾಗಿ ಅನುಭವಿಸಿಕೊಂಡು ಬಂದಿದ್ದಾರೆ. ಮುಚ್ಚುಮರೆಯಲ್ಲಿ ನಡೆಯುತ್ತಿದ್ದ ಈ ಬಗೆಯ ದೌರ್ಜನ್ಯ ಈಗ ಮಿತಿಮೀರಿದೆಯಾಗಿ, ಹೆಣ್ಣು ಮಕ್ಕಳು ಒಬ್ಬೊಬ್ಬರೇ ತಮಗಾದ ಅಪಮಾನವನ್ನು ಬಾಯ್ತೆರೆದು ಹೇಳಿಕೊಳ್ಳುತ್ತಿದ್ದಾರೆ. ಹೇಳಿಕೊಂಡರೆ ತಮ್ಮ ಭವಿಷ್ಯ ಹಾಳಾಗುವುದೆಂದು ಭಾವಿಸಿ ಬಾಯಿಯನ್ನು ಬಿಗಿಯಾಗಿ ಹಿಡಿದುಕೊಂಡು ಮೂಕವೇದನೆ ಅನುಭವಿಸುತ್ತಿರುವ ಸಹಸ್ರಾರು ಹೆಣ್ಣು ಮಕ್ಕಳು ನಮ್ಮ ನಡುವೆಯೇ ಇದ್ದಾರೆ. ಬಹಳ ಕಾಲದಿಂದ ನಡೆದು ಬಂದಿರುವ ಕಿರುಕುಳ ತಾಳಲಾದರೆ, ಆಕ್ರೊÃಶಗೊಂಡು ಕೆಂಡಾಮಂಡಲರಾದ ಅಸಹಾಯಕ ಸ್ತಿçÃಯರು ಈಗ ಒಬ್ಬೊಬ್ಬರಾಗಿ ಭುಗಿಲೆದ್ದು ತಮ್ಮ ಆಕ್ರೊÃಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಪ್ರತಿಕ್ರಿಯೆ ಸಹಜವಾದುದು. ನೊಂದ ಹೆಣ್ಣುಮಕ್ಕಳ ಪರವಾಗಿ ದನಿಯೆತ್ತುವುದು ಸಮಾಜದ ಸ್ವಾಸ್ಥö್ಯ ಬಯಸುವ ಎಲ್ಲರ ಕರ್ತವ್ಯ.
ಈ ಸಂದರ್ಭದಲ್ಲಿ ಸರ್ಕಾರಗಳು, ನ್ಯಾಯಾಲಯಗಳು ಕಾನೂನಿನ ಮಿತಿಯಲ್ಲಿ ತಾನೇನು ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ತೆಗೆದುಕೊಂಡಿವೆ ಎಂಬುದು ನಿಜ. ಆದರೆ ಈ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ಇದಿಷ್ಟೆÃ ಸಾಕೆ? ಖಂಡಿತ ಸಾಲದು.
ಈ ಸಾಮಾಜಿಕ ಪಿಡುಗಿಗೆ ನಮ್ಮ ಸಮಾಜದ ಚಾರಿತ್ರö್ಯದ ಕೊರತೆ ಪ್ರಮುಖ ಕಾರಣ. ಚಾರಿತ್ರö್ಯವಿಲ್ಲದ ಜನ ಮತ್ತು ಚಾರಿತ್ರö್ಯವಿಲ್ಲದ ದೇಶಕ್ಕೆ ಭವಿಷ್ಯವಿಲ್ಲ. ಆದ್ದರಿಂದ ವಿದ್ಯೆ ಕಲಿಸುವಾಗ ಚಾರಿತ್ರö್ಯ ವೃದ್ಧಿಯ ಶಿಕ್ಷಣವನ್ನು ಜೊತೆಜೊತೆಗೆ ನೀಡಬೇಕು. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವ ಶಿಕ್ಷಣವನ್ನು ನಾವು ಕೊಡುತ್ತಿಲ್ಲ. ಹೀಗಾಗಿ ಅನೈತಿಕತೆ, ದ್ವೆÃಷ ಭಾವನೆ, ಕಾಮಾತುರತೆ, ದುರಾಸೆ, ಅಹಂಕಾರ, ಸೇಡಿನ ಮನೋಭಾವ ಇವೆಲ್ಲವೂ ಏಕಕಾಲದಲ್ಲಿ ನಮ್ಮ ಸಮಾಜವನ್ನು ಕಾಡುತ್ತಿವೆ.
* ಪ್ರಾಥಮಿಕ ಶಾಲೆಗಳಲ್ಲಿ ಕೋ-ಎಜುಕೇಷನ್ ಇರಬೇಕು, ಇಲ್ಲಿ ಶಿಕ್ಷಕರು ಎಲ್ಲರೂ ಮಹಿಳೆಯರೇ ಇದ್ದರೆ ಚೆನ್ನ. ಹಾಗೆ ಅಲ್ಲಿಂದ ಮುಂದಕ್ಕೆ ತಕ್ಷಣದ ಕ್ರಮವಾಗಿ, ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೆÃಕ ಶಾಲೆಗಳನ್ನು ಮಾಡುವುದು ಒಳ್ಳೆಯದು. ಹೆಣ್ಣುಮಕ್ಕಳ ಶಾಲೆಗಳಲ್ಲಿ ಪೂರ್ತಿ ಮಹಿಳಾ ಶಿಕ್ಷಕಿಯರೇ ಇರುವಂತೆಯೂ ಹಾಗೂ ಗಂಡುಮಕ್ಕಳ ಶಾಲೆಗಳಲ್ಲಿ ಪುರುಷ ಶಿಕ್ಷಕರು ಇರುವಂತೆಯೂ ವ್ಯವಸ್ಥೆ ಮಾಡಬೇಕು. ಇದು ಶಾಶ್ವತ ಪರಿಹಾರವಲ್ಲವಾದರೂ ಬಿಗಡಾಯಿಸಿರುವ ಇಂದಿನ ಪರಿಸ್ಥಿತಿಗೆ ಒಂದು ತಾತ್ಕಾಲಿಕ ಉಪಕ್ರಮ ಆಗಬಹುದು.
* ಹೆಂಗಸರು ಗಂಡಸರು ಕೂಡಿ ಕೆಲಸ ಮಾಡುವ ಎಲ್ಲೆಡೆಯೂ ಹೆಣ್ಣು ಮಕ್ಕಳ ವಿಜಿಲೆನ್ಸ್ ಕಮಿಟಿ ರಚಿಸಬೇಕು. ಈ ಸಲಹಾ ಸಮಿತಿ ನೀಡುವ ವರದಿಯನ್ನು ಪರಿಶೀಲಿಸಿ ನ್ಯಾಯಯುತ ತೀರ್ಮಾನ ತೆಗೆದುಕೊಳ್ಳಲು, ಜೊತೆಜೊತೆಗೇ ಒಂದು ನಿಷ್ಪಕ್ಷವಾದ ಉನ್ನತ ಸಮಿತಿಯನ್ನು ರಚಿಸಬೇಕು. ತಪ್ಪಿತಸ್ಥರು ದೊಡ್ಡ ಅಧಿಕಾರಿಯಾಗಿರಲಿ, ಸಾಮಾನ್ಯ ನೌಕರರಾಗಿರಲಿ ಎಲ್ಲರಿಗೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಅಪರಾಧ ಎಸಗಿದವರನ್ನು ಕೆಲಸದಿಂದ ಕಿತ್ತೆಸೆಯಬೇಕು. ಹೀಗೆ ಮಾಡುವುದರಿಂದ ಬಹುಮಟ್ಟಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಇಳಿಮುಖವಾಗುವುದೆಂದು ನಾನು ಭಾವಿಸುತ್ತೆÃನೆ.
* ಮುಂದಿನ ಪೀಳಿಗೆಯಲ್ಲಾದರೂ ಈ ಪಿಡುಗು ಸಮಾಜದಿಂದ ದೂರವಾಗಲಿ ಎಂಬ ಧ್ಯೆÃಯ ನಮ್ಮದಾದರೆ, ಶಾಲೆಯ ಮಕ್ಕಳಿಗೆ ಅರಿಷಡ್ವರ್ಗಗಳನ್ನು ದೂರ ಮಾಡುವ ಶಿಕ್ಷಣ ನೀಡಬೇಕು. ಕಾಮ, ಕ್ರೊÃಧ, ಮೋಹ, ಲೋಭ, ಮದ, ಮತ್ಸರಗಳು ಅರಿಷಡ್ವರ್ಗಗಳು. ಇವು ನಮ್ಮ ಅರಿಗಳು, ಶತ್ರುಗಳು. ಈ ಅರಿಷಡ್ವರ್ಗಗಳನ್ನು ಗೆದ್ದರೆ ಮನುಷ್ಯ ಸ್ವಚ್ಛಮನಸ್ಸಿನವನಾಗುತ್ತಾನೆ.
ಈ ಅರಿಷಡ್ವರ್ಗಗಳಲ್ಲಿ ಈಗ ನಮ್ಮ ಸಮಾಜವನ್ನು ಕಾಡುತ್ತಿರುವ ಅತಿ ದೊಡ್ಡ ಶತ್ರುವೆಂದರೆ ಕಾಮ. ಕಾಮವನ್ನು ಗೆಲ್ಲಬೇಕಾದರೆ ಮನಸ್ಸಿನ ಮೇಲೆ ಹತೋಟಿ ಇಟ್ಟುಕೊಳ್ಳುವುದನ್ನು ಕಲಿಸಬೇಕು. ಕಾಮ ಎನ್ನುವ ಶತ್ರು ಕಾಡುತ್ತಾ ಬಂದಾಗ ನಮ್ಮ ಮನಸ್ಸನ್ನು ನಿಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಆಮೆ ತನ್ನ ಶತ್ರುವನ್ನು ಕಂಡೊಡನೆ ಹೇಗೆ ತನ್ನ ಶರೀರವನ್ನು ತನ್ನ ಚಿಪ್ಪಿನೊಳಕ್ಕೆ ಎಳೆದುಕೊಳ್ಳುತ್ತದೆಯೋ ಹಾಗೆ ಕೆಟ್ಟ ವಿಷಯಗಳು ಮನಸ್ಸನ್ನು ಆಕ್ರಮಿಸಿದಾಗ ನಾವು ನಮ್ಮ ಮನಸ್ಸನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು, ಆ ಕೆಟ್ಟ ವಿಚಾರಗಳು ನಮ್ಮನ್ನು ಅಧೋಗತಿಗಿಳಿಸುವುದನ್ನು ತಡೆಗಟ್ಟಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...