Homeಕರ್ನಾಟಕ'ಅಮೇರಿಕಾದ ರೀತಿಯಲ್ಲಿ ಪ್ರತಿಭಟನೆ ಮಾಡಬೇಕು' ಎಂದ ಲೇಖಕ ಆಕಾರ್ ಪಟೇಲ್ ವಿರುದ್ದ FIR

‘ಅಮೇರಿಕಾದ ರೀತಿಯಲ್ಲಿ ಪ್ರತಿಭಟನೆ ಮಾಡಬೇಕು’ ಎಂದ ಲೇಖಕ ಆಕಾರ್ ಪಟೇಲ್ ವಿರುದ್ದ FIR

- Advertisement -
- Advertisement -

ಅಮೆರಿಕಾದ ‘ಬ್ಲಾಕ್ ಲೈಫ್ ಮ್ಯಾಟ್ಟೆರ್ಸ್’ ಆಂದೋಲನವನ್ನು ಹೋಲುವ ರೀತಿಯಲ್ಲಿ ಭಾರತದ ದಲಿತರು, ಮುಸ್ಲಿಮರು, ಆದಿವಾಸಿಗಳು, ಬಡವರು ಹಾಗೂ ಮಹಿಳೆಯರು ಪ್ರತಿಭಟನೆ ಮಾಡಬೇಕು ಎಂದು ಹೇಳಿಕೆ ನೀಡಿದ ಕಾರಣಕ್ಕೆ ಬರಹಗಾರ-ಪತ್ರಕರ್ತ ಹಾಗೂ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಮಾಜಿ ಮುಖ್ಯಸ್ಥರಾದ ಆಕಾರ್ ಪಟೇಲ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಕಾರ್ ಅವರ ಟ್ವೀಟಿಗೆ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಜೆಸಿ ನಗರದ ಪೊಲೀಸರು, ಅಮೆರಿಕಾದಲ್ಲಿ ನಡೆದ ರೀತಿಯ ಪ್ರತಿಭಟನೆ ಮಾಡುವಂತೆ ಕರೆ ಕೊಟ್ಟಿರುವ ಅವರು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೇ 25 ರಂದು ಅಮೆರಿಕಾದ ಮಿನಿಯಾಪೊಲಿಸ್ ನಲ್ಲಿ ಕರಿಯ ಜನಾಂಗದ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಪೊಲೀಸ್ ಒಬ್ಬರು ಕತ್ತಿನ ಮೇಲೆ ಮೊಣಕಾಲಿಟ್ಟು ಕೊಂದು ಹಾಕಿದ್ದರು. ಇದನ್ನು ವಿರೋಧಿಸಿ ಅಮೆರಿಕಾದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಆಕಾರ್ ಅವರ ಟ್ವಿಟ್ಟರ್ ಪೋಸ್ಟ್ ನಲ್ಲಿ “ನಮಗೂ ಇಂತದೇ ಪ್ರತಿಭಟನೆಗಳು ಬೇಕು. ದಲಿತ, ಮುಸ್ಲಿಂ, ಆದಿವಾಸಿ, ಬಡವ ಹಾಗೂ ಮಹಿಳೆಯರ ಕಡೆಯಿಂದ, ಆಗ ವಿಶ್ವ ಗಮನಿಸುತ್ತದೆ. ಪ್ರತಿಭಟನೆ ಕೂಡಾ ಕರಕುಶಲ” ಎಂದು ಹೇಳಿದ್ದಾರೆ.

“ಎಫ್‌ಐಆರ್‌ನ ವಿಷಯಗಳು ನನಗೆ ತಿಳಿದಿಲ್ಲ. ಎಫ್‌ಐಆರ್ ದಾಖಲಿಸಲಾಗಿದೆ ಎಂದು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ನಾನು ಹೇಳಿರುವುದರಲ್ಲಿ ಯಾವುದೇ ಅಪರಾಧವಿಲ್ಲ, ಅವರು ಯಾಕೆ ಕೇಸು ದಾಖಲಿಸಿದರು ಎಂದು ನನಗೆ ತಿಳಿದಿಲ್ಲ.” ಎಂದು ಆಕಾರ್ ಪಟೇಲ್ ಹೇಳಿದ್ದಾರೆಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಆಕಾರ್ ಪಟೇಲ್ ಅವರನ್ನು ಬೆಂಬಲಿಸಿ “ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕನ್ನು ಹೇಗೆ ಅಪರಾಧೀಕಣ ಮಾಡಲಾಗುತ್ತಿದೆ ಎಂಬುದಕ್ಕೆ ಪೊಲೀಸರ ಈ ಎಫ್ಐಆರ್ ಮತ್ತೊಂದು ಉದಾಹರಣೆಯಾಗಿದೆ.” ಎಂದು ಹೇಳಿದೆ.


ಓದಿ: ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಪೊಲೀಸರ ಪ್ರಕಾರ ಪ್ರತಿಭಟನೆಯ ಅರ್ಥ “ಶಾಂತಿ ಕದಡುವ ಯತ್ನ”. ವಾಹ್! ಎಂತೆಂತಹ ಪ್ರತಿಬಾವಂತರಿದ್ದಾರೆ ನಮ್ಮ ಪೊಲೀಸ್ ಇಲಾಖೆಯಲ್ಲಿ.
    ಆಕಾರ್ ಪಟೇಲ್ ವಿರುದ್ಧ ಎಫ್.ಐ.ಆರ್. ದಾಕಲಿಸಿರುವುದು ಕಂಡನಾರ್ಹ. ಈ ಎಫ್.ಐ.ಆರ್. ಅನ್ನು ಈ ಕೂಡಲೇ ರದ್ದುಪಡಿಸಬೇಕು.
    ಮಾನವತೆಯ ಪರ ಇರುವವರ ಬಾಯಿ ಮುಚ್ಚಿಸಲು ಮಾಡುತ್ತಿರುವ ಈ ಸರ್ವಾಧಿಕಾರಿ ದೋರಣೆಗೆ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...