Homeಮುಖಪುಟಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು?

- Advertisement -
- Advertisement -

ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಹಾಖಿಕೊಂಡಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ನಿನ್ನೆ ಕಾರ್ಮಿಕ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅಪೂರ್ಣ ವಾಗಿದ್ದು ಸಾಕಷ್ಟು ಅನುಮಾನಗಳಿಗೆ ಆಸ್ಪದ ನಿಡಿದ್ದು, ಈ ಕುರಿತು ದೂರು ನೀಡಿಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮುಂದಾಗಿರುವ ಘಟನೆ ನಡೆದಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ 26 ಲಕ್ಷ ವಲಸೆ ಕಾರ್ಮಿಕರು ಮಾತ್ರ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಣ ದೂರು ನೀಡಲು ಮುಂದಾಗಿರುವ ವೆಂಕಟೇಶ್ ನಾಯಕ್ ಎಂಬುವವರನ್ನು ಹಫ್‌ಪೋಸ್ಟ್‌ ಮಾತನಾಡಿಸಿ ಸಂಪೂರ್ಣ ವರದಿ ನೀಡಿದೆ. ಅದರ ಸಾರಂಶ ಕೆಳಗಿನಂತಿದೆ.

ಭಾರತದಾದ್ಯಂತ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರೆಷ್ಟು ಎಂಬ ಪ್ರಶ್ನೆಯಡಿ ಹಲವರು ಕಾರ್ಮಿಕ ಇಲಾಖೆಗೆ ಆರ್‌ಟಿಐ ಅರ್ಜಿ ದಾಖಲಿಸಿದ್ದಾರೆ. ಈ ಕುರಿತು ಇಲಾಕೆಯು ಜೂನ್ 2 ರಂದು ಹಲವು ದತ್ತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದತ್ತಾಂಶವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮೇಲ್ನೋಟಕ್ಕೆ ಅಲ್ಲಿರುವ ಸಂಖ್ಯೆಗಳನ್ನು ಕೆಳ ಅಂದಾಜು ಮಾಡಲಾಗಿದೆ, ಅಪೂರ್ಣ ವಾಗಿದೆ ಮತ್ತು ಸೂಕ್ತ ಸ್ವರೂಪದಲ್ಲಿ ಒದಗಿಸಲಾಗಿಲ್ಲ ಮತ್ತು ಆ ಮೂಲಕ ವಿವರಗಳನ್ನು ಮರೆಮಾಡುತ್ತದೆ ಎಂದು ಆರ್‌ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರ್‌ಟಿಐ ನಲ್ಲಿ ಬಂದ ಉತ್ತರಗಳಿಗೂ, ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಇದರ ವಿರುದ್ಧ ದೂರು ನೀಡುತ್ತೇನೆ. ತಳಮಟ್ಟದಲ್ಲಿ ಪಡೆದ ಪಡೆದ ಮಾಹಿತಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಲು ನಾನು ಕೇಳಲು ಯೋಜಿಸುತ್ತಿದ್ದೇನೆ. ಏಕೆಂದರೆ ಈಗಿರುವ ಈ ಡೇಟಾವು ವಲಸೆ ಕಾರ್ಮಿಕರಿಗೆ ನಾಗರಿಕ ಸಮಾಜದ ಆಸಕ್ತ ಸದಸ್ಯರಿಂದ ಯಾವುದೇ ಸಹಾಯ ಮಾಡುವುದಿಲ್ಲ ಎಂದು ವೆಂಕಟೇಶ್‌ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ಮೇ ಮಧ್ಯಭಾಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತದಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ಸಂಖ್ಯೆ 8 ಕೋಟಿ ಎಂದು ಹೇಳಿದ್ದರು. ನಂತರ ಮೇ 1 ಮತ್ತು 27 ರ ನಡುವೆ ಕೇಂದ್ರ ಸರ್ಕಾರವು 97 ಲಕ್ಷ ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸಿದೆ ಎಂದು ಮೋದಿ ಸರ್ಕಾರದ ವಕೀಲರು ಮೇ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. 50 ಲಕ್ಷ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಮನೆಗೆ ಕಳುಹಿಸಲಾಗಿದ್ದರೆ, ಉಳಿದ 41 ಲಕ್ಷ ಕಾರ್ಮಿಕರನ್ನು ರಸ್ತೆ ಸಾರಿಗೆಯ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದರು.

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು? ಅವರೆಲ್ಲರೂ ತಮ್ಮ ರಾಜ್ಯಗಳಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ನಾವು ಭಾವಿಸಬೇಕೆ?

ನಾಯಕ್, ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಲಿಂಗ, ಉದ್ಯೋಗ ಮತ್ತು ಕ್ಷೇತ್ರಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಕೋರಿದ್ದಾರೆ. ಈ ಎಲ್ಲ ಅವಶ್ಯಕತೆಗಳನ್ನು ನಿರ್ಲಕ್ಷಿಸಿ, ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ ವಲಸೆ ಕಾರ್ಮಿಕರ ಸಂಖ್ಯೆಯನ್ನು ಮತ್ತು ಅವರು ಸಿಕ್ಕಿಹಾಕಿಕೊಂಡಿರುವ ರಾಜ್ಯಗಳನ್ನು ಸರಳವಾಗಿ ಹಂಚಿಕೊಂಡಿದೆ. ಆದರೆ ಈ ಡೇಟಾವನ್ನು ಯಾವಾಗ ಸಂಗ್ರಹಿಸಲಾಗಿದೆ? ಮತ್ತು ಅದು ಸಮಂಜಸವಾಗಿ ಪೂರ್ಣಗೊಂಡಿದೆಯೆ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಅಪೂರ್ಣ ಅಂಕಿ ಅಂಶಗಳು

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ದತ್ತಾಂಶ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಸಿಕ್ಕಿಕೊಂಡ 88,852 ವಲಸೆ ಕಾರ್ಮಿಕರಿದ್ದಾರೆ ಎಂದು ಕಾರ್ಮಿಕ ಕಚೇರಿ ಹೇಳಿಕೊಂಡಿದೆ. ಆದಾಗ್ಯೂ, ರಾಜ್ಯ ಸರ್ಕಾರದೊಂದಿಗೆ ಲಭ್ಯವಿರುವ ಅಧಿಕೃತ ಮಾಹಿತಿಯು ಕರ್ನಾಟಕ ಹೈಕೋರ್ಟ್‌ಗೆ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸಿಕ್ಕಿಬಿದ್ದ 11.6 ಲಕ್ಷ ಜನರಲ್ಲಿ 9.1 ಲಕ್ಷ ಜನರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ತೋರಿಸುತ್ತದೆ. ಇವೆರಡರಲ್ಲಿ ನಾವು ಯಾವುದನ್ನು ನಂಬಬೇಕು ಎಂದು ವೆಂಕಟೇಶ್‌ ನಾಯಕ್ ಪ್ರಶ್ನಿಸುತ್ತಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವಲಸೆ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಮೊದಲ ಮೂರು ರಾಜ್ಯಗಳು ಚತ್ತೀಸ್‌ಗಡ (10,85,828), ಕೇರಳ (2,86,846) ಮತ್ತು ತೆಲಂಗಾಣ (1,84,006) ಆಗಿದೆ. ಸಿಕ್ಕಿಕೊಂಡ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ 26,17,218 ಮತ್ತು ಅವರಲ್ಲಿ ಹೆಚ್ಚಿನವರು (46%) ಅವರು ಸಾಮಾನ್ಯವಾಗಿ ತಾವು ವಾಸಿಸುವ ಸ್ಥಳಗಳಲ್ಲಿದ್ದಾರೆ. 43% ಜನರು ತಮ್ಮ ಕೆಲಸದ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕೇವಲ 10% ರಷ್ಟು ಕಡಿಮೆ ಜನರು ನಿಜವಾದ ಪರಿಹಾರ ಶಿಬಿರಗಳಲ್ಲಿ ಅಥವಾ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿಯು ಪ್ರಸ್ತುತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ಸಂಖ್ಯೆಯೋ ಅಥವಾ ಏಪ್ರಿಲ್‌ನಲ್ಲಿ ಸಿಕ್ಕಿಕೊಂಡಿದ್ದವರ ಬಗ್ಗೆ ಸಂಬಂಧಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಖ್ಯ ಮಾಹಿತಿ ಆಯುಕ್ತರ ವೆಬ್‌ಸೈಟ್‌ನಲ್ಲಿ ನಿಯತಕಾಲಿಕವಾಗಿ ಇತ್ತೀಚಿನ ಅಪೂರ್ಣ ವಾಗಿರುವ ಡೇಟಾವನ್ನು ಪೂರ್ಣ ಅಪ್‌ಲೋಡ್ ಮಾಡಲು ಮತ್ತು ನವೀಕರಿಸಲು ಕೇಂದ್ರ ಮಾಹಿತಿ ಆಯೋಗ ಕೇಳಿದೆ.

ಒಟ್ಟಾರೆಯಾಗಿ ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟರೆ ಮಾತ್ರ ವಾಸ್ತವ ಸನ್ನಿವೇಶ ಅರಿತುಕೊಳ್ಳಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...