Homeಮುಖಪುಟಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು?

- Advertisement -
- Advertisement -

ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಹಾಖಿಕೊಂಡಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ನಿನ್ನೆ ಕಾರ್ಮಿಕ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅಪೂರ್ಣ ವಾಗಿದ್ದು ಸಾಕಷ್ಟು ಅನುಮಾನಗಳಿಗೆ ಆಸ್ಪದ ನಿಡಿದ್ದು, ಈ ಕುರಿತು ದೂರು ನೀಡಿಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮುಂದಾಗಿರುವ ಘಟನೆ ನಡೆದಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ 26 ಲಕ್ಷ ವಲಸೆ ಕಾರ್ಮಿಕರು ಮಾತ್ರ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಣ ದೂರು ನೀಡಲು ಮುಂದಾಗಿರುವ ವೆಂಕಟೇಶ್ ನಾಯಕ್ ಎಂಬುವವರನ್ನು ಹಫ್‌ಪೋಸ್ಟ್‌ ಮಾತನಾಡಿಸಿ ಸಂಪೂರ್ಣ ವರದಿ ನೀಡಿದೆ. ಅದರ ಸಾರಂಶ ಕೆಳಗಿನಂತಿದೆ.

ಭಾರತದಾದ್ಯಂತ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರೆಷ್ಟು ಎಂಬ ಪ್ರಶ್ನೆಯಡಿ ಹಲವರು ಕಾರ್ಮಿಕ ಇಲಾಖೆಗೆ ಆರ್‌ಟಿಐ ಅರ್ಜಿ ದಾಖಲಿಸಿದ್ದಾರೆ. ಈ ಕುರಿತು ಇಲಾಕೆಯು ಜೂನ್ 2 ರಂದು ಹಲವು ದತ್ತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದತ್ತಾಂಶವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮೇಲ್ನೋಟಕ್ಕೆ ಅಲ್ಲಿರುವ ಸಂಖ್ಯೆಗಳನ್ನು ಕೆಳ ಅಂದಾಜು ಮಾಡಲಾಗಿದೆ, ಅಪೂರ್ಣ ವಾಗಿದೆ ಮತ್ತು ಸೂಕ್ತ ಸ್ವರೂಪದಲ್ಲಿ ಒದಗಿಸಲಾಗಿಲ್ಲ ಮತ್ತು ಆ ಮೂಲಕ ವಿವರಗಳನ್ನು ಮರೆಮಾಡುತ್ತದೆ ಎಂದು ಆರ್‌ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರ್‌ಟಿಐ ನಲ್ಲಿ ಬಂದ ಉತ್ತರಗಳಿಗೂ, ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಇದರ ವಿರುದ್ಧ ದೂರು ನೀಡುತ್ತೇನೆ. ತಳಮಟ್ಟದಲ್ಲಿ ಪಡೆದ ಪಡೆದ ಮಾಹಿತಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಲು ನಾನು ಕೇಳಲು ಯೋಜಿಸುತ್ತಿದ್ದೇನೆ. ಏಕೆಂದರೆ ಈಗಿರುವ ಈ ಡೇಟಾವು ವಲಸೆ ಕಾರ್ಮಿಕರಿಗೆ ನಾಗರಿಕ ಸಮಾಜದ ಆಸಕ್ತ ಸದಸ್ಯರಿಂದ ಯಾವುದೇ ಸಹಾಯ ಮಾಡುವುದಿಲ್ಲ ಎಂದು ವೆಂಕಟೇಶ್‌ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ಮೇ ಮಧ್ಯಭಾಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತದಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ಸಂಖ್ಯೆ 8 ಕೋಟಿ ಎಂದು ಹೇಳಿದ್ದರು. ನಂತರ ಮೇ 1 ಮತ್ತು 27 ರ ನಡುವೆ ಕೇಂದ್ರ ಸರ್ಕಾರವು 97 ಲಕ್ಷ ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸಿದೆ ಎಂದು ಮೋದಿ ಸರ್ಕಾರದ ವಕೀಲರು ಮೇ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. 50 ಲಕ್ಷ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಮನೆಗೆ ಕಳುಹಿಸಲಾಗಿದ್ದರೆ, ಉಳಿದ 41 ಲಕ್ಷ ಕಾರ್ಮಿಕರನ್ನು ರಸ್ತೆ ಸಾರಿಗೆಯ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದರು.

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು? ಅವರೆಲ್ಲರೂ ತಮ್ಮ ರಾಜ್ಯಗಳಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ನಾವು ಭಾವಿಸಬೇಕೆ?

ನಾಯಕ್, ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಲಿಂಗ, ಉದ್ಯೋಗ ಮತ್ತು ಕ್ಷೇತ್ರಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಕೋರಿದ್ದಾರೆ. ಈ ಎಲ್ಲ ಅವಶ್ಯಕತೆಗಳನ್ನು ನಿರ್ಲಕ್ಷಿಸಿ, ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ ವಲಸೆ ಕಾರ್ಮಿಕರ ಸಂಖ್ಯೆಯನ್ನು ಮತ್ತು ಅವರು ಸಿಕ್ಕಿಹಾಕಿಕೊಂಡಿರುವ ರಾಜ್ಯಗಳನ್ನು ಸರಳವಾಗಿ ಹಂಚಿಕೊಂಡಿದೆ. ಆದರೆ ಈ ಡೇಟಾವನ್ನು ಯಾವಾಗ ಸಂಗ್ರಹಿಸಲಾಗಿದೆ? ಮತ್ತು ಅದು ಸಮಂಜಸವಾಗಿ ಪೂರ್ಣಗೊಂಡಿದೆಯೆ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಅಪೂರ್ಣ ಅಂಕಿ ಅಂಶಗಳು

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ದತ್ತಾಂಶ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಸಿಕ್ಕಿಕೊಂಡ 88,852 ವಲಸೆ ಕಾರ್ಮಿಕರಿದ್ದಾರೆ ಎಂದು ಕಾರ್ಮಿಕ ಕಚೇರಿ ಹೇಳಿಕೊಂಡಿದೆ. ಆದಾಗ್ಯೂ, ರಾಜ್ಯ ಸರ್ಕಾರದೊಂದಿಗೆ ಲಭ್ಯವಿರುವ ಅಧಿಕೃತ ಮಾಹಿತಿಯು ಕರ್ನಾಟಕ ಹೈಕೋರ್ಟ್‌ಗೆ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸಿಕ್ಕಿಬಿದ್ದ 11.6 ಲಕ್ಷ ಜನರಲ್ಲಿ 9.1 ಲಕ್ಷ ಜನರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ತೋರಿಸುತ್ತದೆ. ಇವೆರಡರಲ್ಲಿ ನಾವು ಯಾವುದನ್ನು ನಂಬಬೇಕು ಎಂದು ವೆಂಕಟೇಶ್‌ ನಾಯಕ್ ಪ್ರಶ್ನಿಸುತ್ತಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವಲಸೆ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಮೊದಲ ಮೂರು ರಾಜ್ಯಗಳು ಚತ್ತೀಸ್‌ಗಡ (10,85,828), ಕೇರಳ (2,86,846) ಮತ್ತು ತೆಲಂಗಾಣ (1,84,006) ಆಗಿದೆ. ಸಿಕ್ಕಿಕೊಂಡ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ 26,17,218 ಮತ್ತು ಅವರಲ್ಲಿ ಹೆಚ್ಚಿನವರು (46%) ಅವರು ಸಾಮಾನ್ಯವಾಗಿ ತಾವು ವಾಸಿಸುವ ಸ್ಥಳಗಳಲ್ಲಿದ್ದಾರೆ. 43% ಜನರು ತಮ್ಮ ಕೆಲಸದ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕೇವಲ 10% ರಷ್ಟು ಕಡಿಮೆ ಜನರು ನಿಜವಾದ ಪರಿಹಾರ ಶಿಬಿರಗಳಲ್ಲಿ ಅಥವಾ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿಯು ಪ್ರಸ್ತುತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ಸಂಖ್ಯೆಯೋ ಅಥವಾ ಏಪ್ರಿಲ್‌ನಲ್ಲಿ ಸಿಕ್ಕಿಕೊಂಡಿದ್ದವರ ಬಗ್ಗೆ ಸಂಬಂಧಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಖ್ಯ ಮಾಹಿತಿ ಆಯುಕ್ತರ ವೆಬ್‌ಸೈಟ್‌ನಲ್ಲಿ ನಿಯತಕಾಲಿಕವಾಗಿ ಇತ್ತೀಚಿನ ಅಪೂರ್ಣ ವಾಗಿರುವ ಡೇಟಾವನ್ನು ಪೂರ್ಣ ಅಪ್‌ಲೋಡ್ ಮಾಡಲು ಮತ್ತು ನವೀಕರಿಸಲು ಕೇಂದ್ರ ಮಾಹಿತಿ ಆಯೋಗ ಕೇಳಿದೆ.

ಒಟ್ಟಾರೆಯಾಗಿ ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟರೆ ಮಾತ್ರ ವಾಸ್ತವ ಸನ್ನಿವೇಶ ಅರಿತುಕೊಳ್ಳಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...