Homeಮುಖಪುಟಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

ಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

- Advertisement -
- Advertisement -

ಕಳೆದ ಒಂದು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಪ್ರದರ್ಶಿಸಲು ಸಿದ್ಧಪಡಿಸಿದ ಟಿಪ್ಪಣಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಉಲ್ಲೇಖಿಸದಿರುವುದರಿಂದ ಗೃಹ ಸಚಿವಾಲಯದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಲಾಗಿದೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಈಗಿರುವ ತಂಡವನ್ನು ವರ್ಗಾವಣೆ ಮಾಡಿ ಹೊಸ ತಂಡಕ್ಕೆ ಮಾಧ್ಯಮ ನಿರ್ವಹನೆ ಜವಾಬ್ದಾರಿ ನೀಡಲಾಗಿದೆ. ಇದೀಗ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ನ ವಕ್ತಾರರಾಗಿದ್ದ ನಿತಿನ್ ವಕಾಂಕರ್‌ರವರು ಡೈರೆಕ್ಟರ್ ಜನರಲ್-ಬ್ಯೂರೋ ಆಫ್ ಔಟ್‌ರೀಚ್ ಮತ್ತು ಕಮ್ಯುನಿಕೇಷನ್ಸ್‌ನ ನೇತೃತ್ವ ವಹಿಸಲಿದ್ದಾರೆ.

ಮೂಲಗಳ ಪ್ರಕಾರ ಸರ್ಕಾರವು ಮಾಧ್ಯಮ ವಿಭಾಗದ ಸರಣಿ ದೋಷಗಳಿಂದಾಗಿ ಅದರ ಬಗ್ಗೆ ತೀವ್ರ ಅತೃಪ್ತಿ ಹೊಂದಿತ್ತು. ಇದೀಗ ಅದಕ್ಕೆ ತೆರೆ ಎಳೆದಿದ್ದು ಹೊಸ ತಂಡವನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮೇ 28 ರಂದು ಗೃಹ ಸಚಿವಾಲಯದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಆಕಸ್ಮಿಕವಾಗಿ ವಿಸ್ಕಿ ತುಂಬಿದ ಎರಡು ರಾಯಲ್ ಸ್ಟಾಗ್ ಮದ್ಯದ ಬಾಟಲಿಗಳು, ಕನ್ನಡಕ ಮತ್ತು ಕೆಲವು ತಿಂಡಿಗಳನ್ನು ಹೊಂದಿರುವ ಟೇಬಲ್‌ನ ಫೋಟೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ್ದ ಅಂಫಾನ್ ಚಂಡಮಾರುತದ ನಂತರ ಸರ್ಕಾರದ ಪುನರ್ವಸತಿ ಪ್ರಯತ್ನಗಳನ್ನು ತೋರಿಸುವ ಪೋಸ್ಟ್‌ನಲ್ಲಿ ಈ ಫೋಟೊ ಸಹ ಸೇರಿಕೊಂಡಿತ್ತು.

ಆಕಸ್ಮಿಕವಾಗಿ ಈ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಕಿರಿಯ ಉದ್ಯೋಗಿಗೆ ಇದಕ್ಕಾಗಿ ಲಿಖಿತ ವಿವರಣೆಯನ್ನು ನೀಡುವಂತೆ ಕೇಳಲಾಗಿದ್ದರೂ, ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಮೇಲ್ವಿಚಾರಣೆ ಮಾಡದಿದ್ದಕ್ಕಾಗಿ ಸರ್ಕಾರವು ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ತತ್‌ಕ್ಷಣದ ಕಾರಣವಾಗಿ ಸರ್ಕಾರದ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಬಿಟ್ಟು ಹೋಗಿರುವುದು ಸರ್ಕಾರವನ್ನು ಕೆರಳಿಸಿದ್ದು, ಮಾಧ್ಯಮ ವಿಭಾಗದ ಬದಲಾವಣೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಮೊದಲೇ ಕೆಲವು ಆಂತರಿಕ ಸಮಸ್ಯೆಗಳು ಇದ್ದವು, ಆದರೆ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಅನ್ನು ಉಲ್ಲೇಖಿಸದಿರುವುದು ಒಂದು ಪ್ರಮುಖ ಅಂಶವಾಗಿರಬಹುದು ಎಂದು ಮೂಲವೊಂದು ತಿಳಿಸಿದೆ.


ಇದನ್ನೂ ಓದಿ: ಮದ್ಯ ಬಾಟಲಿಗಳ ಚಿತ್ರ ಪೋಸ್ಟ್‌ ಮಾಡಿದ ಗೃಹ ಸಚಿವಾಲಯ: ಟ್ವಿಟ್ಟರ್‌ನಲ್ಲಿ ಟ್ರೋಲ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢರ ಆಸ್ಥಾನದಲ್ಲಿ ಪುಂಗಿದಾಸರಿಗೆ ಮಾತ್ರ ಸ್ತಾನ. ಇದು ಇಂದಿನ ನೀತಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...