Homeಮುಖಪುಟಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

ಸಾಧನೆಗಳ ಪಟ್ಟಿಯಲ್ಲಿ ಸಿಎಎ ಉಲ್ಲೇಖಿಸದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದ ಗೃಹ ಸಚಿವಾಲಯ!

- Advertisement -
- Advertisement -

ಕಳೆದ ಒಂದು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಪ್ರದರ್ಶಿಸಲು ಸಿದ್ಧಪಡಿಸಿದ ಟಿಪ್ಪಣಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಉಲ್ಲೇಖಿಸದಿರುವುದರಿಂದ ಗೃಹ ಸಚಿವಾಲಯದ ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಲಾಗಿದೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಈಗಿರುವ ತಂಡವನ್ನು ವರ್ಗಾವಣೆ ಮಾಡಿ ಹೊಸ ತಂಡಕ್ಕೆ ಮಾಧ್ಯಮ ನಿರ್ವಹನೆ ಜವಾಬ್ದಾರಿ ನೀಡಲಾಗಿದೆ. ಇದೀಗ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ನ ವಕ್ತಾರರಾಗಿದ್ದ ನಿತಿನ್ ವಕಾಂಕರ್‌ರವರು ಡೈರೆಕ್ಟರ್ ಜನರಲ್-ಬ್ಯೂರೋ ಆಫ್ ಔಟ್‌ರೀಚ್ ಮತ್ತು ಕಮ್ಯುನಿಕೇಷನ್ಸ್‌ನ ನೇತೃತ್ವ ವಹಿಸಲಿದ್ದಾರೆ.

ಮೂಲಗಳ ಪ್ರಕಾರ ಸರ್ಕಾರವು ಮಾಧ್ಯಮ ವಿಭಾಗದ ಸರಣಿ ದೋಷಗಳಿಂದಾಗಿ ಅದರ ಬಗ್ಗೆ ತೀವ್ರ ಅತೃಪ್ತಿ ಹೊಂದಿತ್ತು. ಇದೀಗ ಅದಕ್ಕೆ ತೆರೆ ಎಳೆದಿದ್ದು ಹೊಸ ತಂಡವನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮೇ 28 ರಂದು ಗೃಹ ಸಚಿವಾಲಯದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಆಕಸ್ಮಿಕವಾಗಿ ವಿಸ್ಕಿ ತುಂಬಿದ ಎರಡು ರಾಯಲ್ ಸ್ಟಾಗ್ ಮದ್ಯದ ಬಾಟಲಿಗಳು, ಕನ್ನಡಕ ಮತ್ತು ಕೆಲವು ತಿಂಡಿಗಳನ್ನು ಹೊಂದಿರುವ ಟೇಬಲ್‌ನ ಫೋಟೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ್ದ ಅಂಫಾನ್ ಚಂಡಮಾರುತದ ನಂತರ ಸರ್ಕಾರದ ಪುನರ್ವಸತಿ ಪ್ರಯತ್ನಗಳನ್ನು ತೋರಿಸುವ ಪೋಸ್ಟ್‌ನಲ್ಲಿ ಈ ಫೋಟೊ ಸಹ ಸೇರಿಕೊಂಡಿತ್ತು.

ಆಕಸ್ಮಿಕವಾಗಿ ಈ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಕಿರಿಯ ಉದ್ಯೋಗಿಗೆ ಇದಕ್ಕಾಗಿ ಲಿಖಿತ ವಿವರಣೆಯನ್ನು ನೀಡುವಂತೆ ಕೇಳಲಾಗಿದ್ದರೂ, ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಮೇಲ್ವಿಚಾರಣೆ ಮಾಡದಿದ್ದಕ್ಕಾಗಿ ಸರ್ಕಾರವು ಮಾಧ್ಯಮ ವಿಭಾಗವನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ತತ್‌ಕ್ಷಣದ ಕಾರಣವಾಗಿ ಸರ್ಕಾರದ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಬಿಟ್ಟು ಹೋಗಿರುವುದು ಸರ್ಕಾರವನ್ನು ಕೆರಳಿಸಿದ್ದು, ಮಾಧ್ಯಮ ವಿಭಾಗದ ಬದಲಾವಣೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಮೊದಲೇ ಕೆಲವು ಆಂತರಿಕ ಸಮಸ್ಯೆಗಳು ಇದ್ದವು, ಆದರೆ ಸಾಧನೆಗಳ ಪಟ್ಟಿಯಲ್ಲಿ ಸಿಎಎ ಅನ್ನು ಉಲ್ಲೇಖಿಸದಿರುವುದು ಒಂದು ಪ್ರಮುಖ ಅಂಶವಾಗಿರಬಹುದು ಎಂದು ಮೂಲವೊಂದು ತಿಳಿಸಿದೆ.


ಇದನ್ನೂ ಓದಿ: ಮದ್ಯ ಬಾಟಲಿಗಳ ಚಿತ್ರ ಪೋಸ್ಟ್‌ ಮಾಡಿದ ಗೃಹ ಸಚಿವಾಲಯ: ಟ್ವಿಟ್ಟರ್‌ನಲ್ಲಿ ಟ್ರೋಲ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢರ ಆಸ್ಥಾನದಲ್ಲಿ ಪುಂಗಿದಾಸರಿಗೆ ಮಾತ್ರ ಸ್ತಾನ. ಇದು ಇಂದಿನ ನೀತಿ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...