Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...