Homeಮುಖಪುಟಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ದೇಶದ ಎಲ್ಲಾ ರಾಜ್ಯಗಳನ್ನು ಹಲವಾರು ವಿಷಯಗಳಲ್ಲಿ ಬಾಧಿಸುತ್ತಿದ್ದರೆ ದೇಶದ ದೊಡ್ಡ ರಾಜ್ಯವೆನಿಸಿಕೊಂಡ ಉತ್ತರಪ್ರದೇಶವನ್ನು ತುಸು ಹೆಚ್ಚೆ ಬಾಧಿಸುತ್ತಿದೆ. ಲಾಕ್‌ಡೌನ್‌ ನಂತರ ರಾಜ್ಯಕ್ಕೆ ಮರಳಿರುವ 30 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಹೆಣಗಾಡುತ್ತಿರುವ ಸಂದರ್ಭದಲ್ಲಿಯೇ ಸ್ನಾತಕೋತ್ತರ ಪದವೀಧರರು ಸಹ ಉದ್ಯೋಗ ಖಾತರಿ ಕೆಲಸಗಳಿಗಾಗಿ ಹುಡುಕುತ್ತಿರುವ ದಯನೀಯ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಎನ್‌ಡಿಟಿವಿ ವಿಶೇಷ ವರದಿ ಮಾಡಿದ್ದು ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

“ನಾನು ಬಿಬಿಎ ಪದವಿ ಹೊಂದಿದ್ದೇನೆ ಆದರೆ ನನಗೆ ಯಾವುದೇ ಯೋಗ್ಯವಾದ ಕೆಲಸ ಸಿಗಲಿಲ್ಲ. ಅಂತಿಮವಾಗಿ, ನಾನು ತಿಂಗಳಿಗೆ 6,000-7,000 ರೂ ವೇತನ ಸಿಗುವ ಕೆಲಸಕ್ಕೆ ಸೇರಿದೆ. ನಂತರ ಲಾಕ್ ಡೌನ್ ಕಾರಣದಿಂದ ಆ ಕೆಲಸವೂ ಸಹ ಹೋಗಿದೆ. ಆದ್ದರಿಂದ, ನಾನು ನನ್ನ ಹಳ್ಳಿಗೆ ಹಿಂತಿರುಗಿದ್ದು, ಇಲ್ಲಿ ನಮ್ಮ ಗ್ರಾಮ ಪ್ರಧಾನ್ (ಗ್ರಾಮ ಮುಖ್ಯಸ್ಥ) ನನಗೆ ನರೇಗ ಅಡಿಯಲ್ಲಿ ಕೂಲಿ ಕೆಲಸ ಪಡೆಯಲು ಸಹಾಯ ಮಾಡಿದರು ”ಎಂದು ಬಿಬಿಎ ಪದವಿ ಪಡೆದ ಸತೇಂದ್ರ ಕುಮಾರ್ ಹೇಳುತ್ತಾರೆ.

ರೋಷನ್ ಕುಮಾರ್ ಸ್ನಾತಕೋತ್ತರ ಪದವೀಧರರಲ್ಲಿ ಒಬ್ಬರು. ಅವರು ಕೊಳಗಳನ್ನು ಅಗೆಯುವುದು ಮತ್ತು ಗ್ರಾಮೀಣ ರಸ್ತೆಗಳನ್ನು ಹಾಕುವುದು ಮುಂತಾದ ಶ್ರಮದಾಯಕ ಕೆಲಸಗಳನ್ನು ಮಾಡಲು ಸಿದ್ಧರಿದ್ದಾರೆ. ಇದು ಕೌಶಲ್ಯರಹಿತ ಕಾರ್ಮಿಕರು ಮಾಡುವ ಕೆಲಸವಾಗಿದೆ. “ನಾನು ಯೋಗ್ಯ ಕೆಲಸ ಮಾಡುತ್ತಿದ್ದೆ ಮತ್ತು ಒಂದಷ್ಟು ಹಣವನ್ನು ಸಂಪಾದಿಸುತ್ತಿದ್ದೆ ಆದರೆ ಲಾಕ್ ಡೌನ್ ನಂತರ ನನ್ನನ್ನು ಕೆಲಸ ಬಿಡಲು ಕೇಳಲಾಯಿತು” ಎಂದು ಎಂಎ ಪದವಿ ಪಡೆದ ರೋಷನ್ ಕುಮಾರ್ ಹೇಳಿದರು.

ಎಂ.ಎ ಪದವೀಧರರಾದ ಸುರ್ಜಿತ್ ಕುಮಾರ್ ಅವರು ಕೂಲಿ ಕೆಲಸವನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳುತ್ತಾರೆ. “ನನಗೆ ಎಂಎ ಮತ್ತು ಬಿ.ಎಡ್ ಪದವಿ ಇದೆ ಮತ್ತು ನಾನು ಕೆಲಸ ಹುಡುಕುವ ಮೊದಲು ಲಾಕ್‌ಡೌನ್ ವಿಧಿಸಲಾಯಿತು” ಎಂದು ಅವರು ಹೇಳುತ್ತಾರೆ.

ಲಾಕ್‌ಡೌನ್‌ಗೆ ಮೊದಲು ಒಂದು ದಿನಕ್ಕೆ ಸರಾಸರಿ 20 ನರೇಗ ಕೂಲಿ ಕಾರ್ಮಿಕರು ಇದ್ದರು. ಈಗ ಆ ಸಂಖ್ಯೆ ದಿನಕ್ಕೆ 100 ಕ್ಕಿಂತ ಹೆಚ್ಚಾಗಿದೆ, ಅದರಲ್ಲಿ ಕನಿಷ್ಠ ಐದನೇ ಒಂದು ಭಾಗದವರು ಪದವಿ ಪಡೆದವರು ಅಥವಾ ಲಾಕ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರು. ಲಾಕ್‌ಡೌನ್‌ನಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಕಳೆದುಕೊಂಡವರು ನರೇಗ ಕೆಲಸಕ್ಕೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಜುನೈದ್‌ಪುರದ ಗ್ರಾಮ ಮುಖ್ಯಸ್ಥ ವೀರೇಂದ್ರ ಸಿಂಗ್ ಹೇಳುತ್ತಾರೆ.

ರಾಜ್ಯಕ್ಕೆ ಮರಳಿದ 30 ಲಕ್ಷ ವಲಸಿಗರಿಗೆ ಉದ್ಯೋಗ ಒದಗಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಎಂಜಿಎನ್‌ಆರ್‌ಇಜಿಎಗೆ ಹೆಚ್ಚಿನ ಕೆಲಸ ಮಾಡಿಸಲು ತಿಳಿಸಿದೆ.

ಕಳೆದ ತಿಂಗಳು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಆತ್ಮ ನಿರ್ಭಾರ ಭಾರತ್ ಅಭಿಯಾನ್” ಪ್ಯಾಕೇಜ್ ಅಡಿಯಲ್ಲಿ ಐದನೇ ಮತ್ತು ಅಂತಿಮ ಹಂತದ ಕ್ರಮಗಳನ್ನು ವಿವರಿಸುವಾಗ ನರೇಗಾಕ್ಕೆ ಪ್ರಸ್ತುತ ಬಜೆಟ್ ಅಂದಾಜು 60,000 ಕೋಟಿ ರೂ ಇದ್ದು, ಹೆಚ್ಚುವರಿ 40,000 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದರು.

ದೇಶಾದ್ಯಂತ ಸುಮಾರು 14 ಕೋಟಿ ಜನರು ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಪ್ರತಿ ಕಾರ್ಡ್ ಹೊಂದಿರುವವರಿಗೆ ಈ ವರ್ಷ 100 ದಿನಗಳ ಖಾತರಿಯ ಕೆಲಸವನ್ನು ಪಡೆಯಲು ಸಾಧ್ಯವಾದರೆ ಸರ್ಕಾರಕ್ಕೆ 2.8 ಲಕ್ಷ ಕೋಟಿ ರೂ ಖರ್ಚಾಗುತ್ತದೆ. ಇದಲ್ಲದೇ ಏಪ್ರಿಲ್ 1 ರಿಂದ ದೇಶಾದ್ಯಂತ ಕನಿಷ್ಠ 35 ಲಕ್ಷ ಜನರು ಎಂಜಿಎನ್‌ಆರ್‌ಇಜಿಎಗೆ ಅರ್ಜಿ ಸಲ್ಲಿಸಿದ್ದಾರೆ, ಇದು ಈ ದಶಕದಲ್ಲಿ ಅತಿ ಹೆಚ್ಚು.

“ಎಂಜಿಎನ್‌ಆರ್‌ಇಜಿಎ ಜಾಬ್ ಕಾರ್ಡ್‌ಗಳಿಗೆ ಉದ್ಯೋಗ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಬಜೆಟ್ ಅಗತ್ಯವಿದೆ. ಎಂಎನ್‌ಆರ್‌ಇಜಿಎ ಅಡಿಯಲ್ಲಿ ಕೆಲಸ ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಅದನ್ನು ಪಡೆಯಬೇಕು ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಥಶಾಸ್ತ್ರಜ್ಞ ರೀತಿಕಾ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...