Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...