Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...