Homeಅಂತರಾಷ್ಟ್ರೀಯDawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್...

Dawood Ibrahim – ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್ ಇಬ್ರಾಹಿಂ

- Advertisement -
- Advertisement -

ಹತ್ತಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ತಲೆಮರೆಸಿಕೊಂಡಿರುವ ಭೂಗತ ಲೋಕದ ದಾವೂದ್ ಇಬ್ರಾಹಿಂ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ಧಾರೆ, ಅವರ ಹೆಂಡತಿಗೂ ಕೊರೊನಾ ಸೋಂಕು ತಗುಲಿದೆ ಎಂಬಂತಹ ಸುದ್ದಿಗಳು ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರ ಸಹೋದರ ಅನೀಸ್‌ ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದ್ದು ಇವೆಲ್ಲವೂ ಸುಳ್ಳು ಎಂದಿದ್ದಾರೆ.

ದಾವೂದ್‌ ಇಬ್ರಾಹಿಂ ಮತ್ತವರ ಹೆಂಡತಿಗೆ ಕೋವಿಡ್-19 ರೋಗದ ಸೋಂಕು ತಗುಲಿದ್ದು, ಅವರನ್ನು ಕರಾಚಿಯ ಆರ್ಮಿ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ ಎಂದು ಕೆಲ ಮಾಧ್ಯಮಗಳಲ್ಲೂ ಸುದ್ದಿಗಳಾಗಿವೆ. ಆದರೆ, ದಾವೂದ್ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸುದ್ದಿಗಳನ್ನು ಅಲ್ಲಗಳೆದಿದ್ದಾರೆ.

ದಾವೂದ್‌ ಇಬ್ರಾಹಿಂನ ಎಲ್ಲಾ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳನ್ನ ನೋಡಿಕೊಳ್ಳುವ ಅನೀಸ್ ಇಬ್ರಾಹಿಂ ಅವರು ತಮ್ಮ ಅಣ್ಣನ ಬಗ್ಗೆ ಹರಡಿರುವ ಸುದ್ದಿಗಳು ಬರೇ ವದಂತಿ ಎಂದಿದ್ದಾರೆಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಸಹೋದರ ದಾವೂದ್‌ ಇಬ್ರಾಹಿಂ ಸೇರಿದಂತೆ ಇಡೀ ಕುಟುಂಬದ ಯಾರೊಬ್ಬರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪ್ರಪಂಚದೆಲ್ಲಡೆ ಹರಡಿರುವ ಕೊರೊನಾ ಪಾಕಿಸ್ತಾನಕ್ಕೂ ಹಬ್ಬಿದೆ. ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂಬ ವದಂತಿಗಳಿರುವ ಹಿನ್ನೆಲೆಯಲ್ಲಿ ಬಹುತೇಕ ಮಾಧ್ಯಮಗಳು ಅವರಿಗೆ ಕೊರೊನ ತಗುಲಿದೆ ಎಂಬ ವರದಿಗಳನ್ನು ಮಾಡಿದ್ದರು. ಅದನ್ನು ಅವರ ಸಹೋದರ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…


ದಾವೂದ್‌‌ ಇಬ್ರಾಹಿಂ ಮತ್ತು ಭಾರತದ ಸಂಬಂಧದ ವಿಚಾರದಲ್ಲಿ ಹಲವಾರು ಗೊಂದಲಗಳಿದ್ದು, ಅವರು ಅನೇಕ ಕಂಪನಿಗಳಲ್ಲಿ ಹಣ ಹೂಡಿದ್ದಾರೆ ಎಂಬ ಆರೊಪವಿದೆ. ಅಲ್ಲದೇ ಭಾರತದ ಹಲವಾರು ಮಾಧ್ಯಮಗಳು ದಾವೂದ್‌ ಪಾಕಿಸ್ತಾನ ಸರ್ಕಾರದ ಬೆಂಬಲದೊಂದಿಗೆ ಅಲ್ಲಿ ನೆಲೆಸಿದ್ದಾರೆ ಎಂದು ವರದಿ ಮಾಡಿವೆ. ಈಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿಯೂ ಸಹ ಅವರು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಬಂದಿವೆ.

ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾರೆಂದು ಭಾರತದ ಆರೋಪಕ್ಕೆ ಈ ಕೊರೊನಾ ಸುದ್ದಿ ಪುಷ್ಟಿ ನೀಡಿತ್ತು. ದಾವೂದ್‌ ಕರಾಚಿಯಲ್ಲಿದ್ದಾನೆಂದು ಭಾರತ ಪದೇಪದೇ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇದೀಗ ಕೊರೋನಾ ಸೋಂಕಿನ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅನೀಸ್ ಇಬ್ರಾಹಿಂ ಅವರು ತಮ್ಮ ಕುಟುಂಬದವರು ಪಾಕಿಸ್ತಾನದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆದರೆ, ಯುಎಇ ಮತ್ತು ಪಾಕಿಸ್ತಾನದಲ್ಲಿ ವ್ಯವಹಾರಗಳಿರುವುದನ್ನು ಅನೀಸ್ ಒಪ್ಪಿಕೊಂಡಿದ್ದಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯ ವರದಿಯಿಂದ ತಿಳಿದುಬರುತ್ತದೆ.


ಇದನ್ನೂ ಓದಿ : ಜನರ ತೆರಿಗೆ ದುಡ್ಡಲ್ಲಿ ದಾವೂದ್ ಇಬ್ರಾಹಿಂ ನಷ್ಟ ತುಂಬಲು ಮುಂದಾಯ್ತಾ ‘ನಮೋ’ ಸರ್ಕಾರ?


ಇದನ್ನೂ ಓದಿ: ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...