Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...