Homeಮುಖಪುಟತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಮೋದಿಯವರು ಮನವಿ ಮಾಡಿದ್ದರು. ಆದರೆ ಮೋದಿಯವರೇ ಉದ್ಘಾಟಿಸಿದ ಪುಡ್ ಪಾರ್ಕ್ ನಲ್ಲಿ ಕೆಲಸದಿಂದ ತೆಗೆಯುವ ಕ್ರಿಯೆ ಮುಂದುವರೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ತುಮಕೂರಿನ ಫುಡ್ ಪಾರ್ಕ್ ನಲ್ಲೀಗ ಖಾಯಂ ಕಾರ್ಮಿಕರಿಗೆ ಕುತ್ತು ಬಂದಿದೆ. ಕೊರೊನಾ ಲಾಕ್ ಡೌನ್ ಪರಿಣಾಮ ಅರ್ಧಕ್ಕಿಂತ ಹೆಚ್ಚು ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಇದರಿಂದ ಖಾಯಂ ಕಾರ್ಮಿಕರು ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ಫುಡ್‌ಪಾರ್ಕ್ ಆಡಳಿತ ಮಂಡಳಿ ಗ್ರಾಮಗಳಿಗೆ ತೆರಳಿರುವ ಖಾಯಂ ಕಾರ್ಮಿಕರಿಗೆ ಮತ್ತೆ ಕೆಲಸಕ್ಕೆ ಬರಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೇ ಊರುಗಳಿಂದಲೇ ಕಾರ್ಮಿಕರಿಂದ ಇ-ಮೇಲ್  ಮೂಲಕ ರಾಜಿನಾಮೆ ಪಡೆಯಲಾಗಿದೆ. ಆಡಳಿತ ಮಂಡಳಿಯ ಒತ್ತಡಕ್ಕೆ ಸಿಲುಕಿರುವ ಖಾಯಂ ಕಾರ್ಮಿಕರು ಅನಿವಾರ್ಯವಾಗಿ ರಾಜಿನಾಮೆ ನೀಡಿದ್ದಾರೆ.

ಫುಡ್ ಪಾರ್ಕ್ ಅಸ್ತಿತ್ವಕ್ಕೆ ಬಂದು ಆರು ವರ್ಷ ಕಳೆದಿದೆ. ಸಾವಿರಾರು ಕಟುಂಬಗಳಿಗೆ ಮಾರ್ಗವಾಗಲಿದೆ ಎಂಬ ಭರವಸೆ ಕೇವಲ ಮಾತುಗಳಲ್ಲೇ ಉಳಿದಿದೆ. ಈಗ ಇರುವ ಖಾಯಂ ಕಾರ್ಮಿಕರ ಕೆಲಸಕ್ಕೂ ಸಂಕಷ್ಟ ಎದುರಾಗಿದೆ. ಸ್ಥಳೀಯ ಮತ್ತು ಉತ್ತರ ಭಾರತ ನೂರು ಕಾರ್ಮಿಕರು ಖಾಯಂ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಮನೆಗೆ ಹೋಗಬೇಕಾಗಿದೆ.


ಇದನ್ನೂ ಓದಿ: ತುಮಕೂರು: ಫುಡ್ ಪಾರ್ಕ್ ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ನಾನುಗೌರಿ.ಕಾಂ ಜೊತೆ ಪರಿಸ್ಥಿತಿಯನ್ನು ಹಂಚಿಕೊಂಡ ಕಾರ್ಮಿಕರು, ಫುಡ್ ಪಾರ್ಕ್ ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಡ ಹೇರುತ್ತಿದೆ. ಕಿರುಕುಳ ನೀಡುತ್ತಿದೆ. ಈಗಾಗಲೇ ಕೆಲವರು ರಾಜಿನಾಮೆ ನೀಡಿದ್ದಾರೆ. ನಮಗೆಲ್ಲ 2 ವರ್ಷದ ಹಿಂದ ಖಾಯಂ ಆಗಿತ್ತು. ಸ್ಥಳೀಯರು ಮತ್ತು ಹೊರಗಿನಿಂದ ಬಂದಿರುವ ಕಾರ್ಮಿಕರಿಂದ ರಾಜಿನಾಮೆ ಪಡೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರಬೇಡಿ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಫುಡ್‌ಪಾರ್ಕ್‌ನಲ್ಲಿ ಮೇಂಟೇನೆನ್ಸ್ ಮತ್ತು ಪ್ರೊಡಕ್ಷನ್ ಎಂಬ ಎರಡು ವಿಭಾಗಗಳಿವೆ. ಇವೆರಡಿರಿಂದ ಸೇರಿ ನೂರು ಮಂದಿ ಖಾಯಂ ಕಾರ್ಮಿಕರಿದ್ದಾರೆ. ಇವರಲ್ಲಿ ಸುಮಾರು 60ರಷ್ಟು ಮಂದಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ. ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದರೆ ನಾವು ಏನು ಮಾಡಬೇಕು. ನಮ್ಮ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಸೆಟ್ಲಮೆಂಟ್‌ ಮಾಡಿ ಅಂದ್ರೆ ನೋಡೋಣ ಎನ್ನುತ್ತಿದ್ದಾರೆ. ಹೀಗಾಗಿ ಕಷ್ಟವಾಗಿದೆ ಎಂದು ಕಾರ್ಮಿಕರು ನೋವು ತೋಡಿಕೊಂಡರು.

ಆಡಳಿತ ಮಂಡಲಳಿಯ ಕ್ರಮದಿಂದ ಖಾಯಂ ಕಾರ್ಮಿಕರು ಕಂಗಾಲಾಗಿದ್ದಾರೆ. ಭವಿಷ್ಯ ಕತ್ತಲಿಗೆ ಬೀಳಲಿದೆ ಎಂಬ ಚಿಂತೆ ಅವರನ್ನು ಕಾಡತೊಡಗಿದೆ. ನೀವು ಬೇರೆ ಕೆಲಸ ನೋಡಿಕೊಳ್ಳಿ ಎಂದು ಬಾಯಿಮಾತಿನ ಸಂದೇಶ ರವಾನಿಸಿರುವುದು ಅವರಿಗೆ ದಿಕ್ಕು ತೋಚದಂತೆ ಮಾಡಿದೆ. ಮುಂದಿನ 15-20 ದಿನಗಳಲ್ಲಿ ಮತ್ತಷ್ಟು ಕಾರ್ಮಿಕರ ರಾಜಿನಾಮೆ ಪಡೆದುಕೊಳ್ಳುವುದು ಖಚಿತ ಎಂಬ ಆತಂಕ ಖಾಯಂ ಕಾರ್ಮಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಖಾಯಂ ಕಾರ್ಮಿಕರಿಂದಲೇ ರಾಜಿನಾಮೆ ಪಡೆದುಕೊಳ್ಳುತ್ತಿದ್ದಾರೆ ಎಂದರೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ಮತ್ತಷ್ಟು ಹೇಳತೀರದು. ಹಲವು ಸಮಸ್ಯೆಗಳಿಂದಲೇ ಗಮನ ಸೆಳೆದಿರುವ ಫುಡ್ ಪಾರ್ಕ್ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದಿದೆ. ಖಾಯಂ ಮತ್ತು ಗುತ್ತಿಗೆ ಕಾರ್ಮಿಕರು ಈಗ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.

ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆಯಾದ ಫುಡ್‌ಪಾರ್ಕ್ ಮುಚ್ಚುವಂತಹ ಸ್ಥಿತಿಗೆ ಬಂದಿದೆ. ಯಾವುದೇ ಕಂಪನಿಗಳು ಲಾಕ್‌ಡೌನ್‌ ಕಾರಣಕ್ಕಾಗಿ ನೌಕರರು ಮತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ. ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಮೋದಿಯವರೇ ಉದ್ಘಾಟಿಸಿದ, ಕೇಂದ್ರ ಸರ್ಕಾರದ ಸಹಭಾಗಿತ್ವ ಇರುವ ಫುಡ್ ಪಾರ್ಕ್ ನಲ್ಲೇ ಆ ಆದೇಶ ಉಲ್ಲಂಘನೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ.


ಇದನ್ನೂ ಓದಿ: ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...