Homeಮುಖಪುಟವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರ ಬರುತ್ತೇವೆ: ಬ್ರೆಜಿಲ್ ಅಧ್ಯಕ್ಷ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರ ಬರುತ್ತೇವೆ: ಬ್ರೆಜಿಲ್ ಅಧ್ಯಕ್ಷ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ಹರಡುವುದು ನಿಧಾನವಾಗುವುದಕ್ಕಿಂತ ಮೊದಲೆ ಲಾಕ್‌ಡೌನ್‌ಗಳನ್ನು ಸಡಿಲಗೊಳಿಸುವ ಅಪಾಯದ ಬಗ್ಗೆ ವಿಶ್ವ ಸಂಸ್ಥೆಯ ಏಜನ್ಸಿ ಲ್ಯಾಟಿನ್ ಅಮೆರಿಕನ್ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ ನಂತರ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವಿಶ್ವ ಆರೋಗ್ಯ ಸಂಸ್ಥೆಯಿಂದ ಬ್ರೆಜಿಲ್ ಹೊರಬರುವುದಾಗಿ ಬೆದರಿಕೆ ಹಾಕಿದ್ದಾರೆ.

ಕೊರೊನಾ ದೈನಂದಿನ ಸಾವುನೋವುಗಳಲ್ಲಿ ಬ್ರೆಜಿಲ್ ಇಟಲಿಯನ್ನು ಮೀರಿಸಿದೆ. ಆದರೆ ಬೋಲ್ಸೊನಾರೊ ದೇಶದ ಲಾಕ್‌ಡೌನ್ ಆದೇಶಗಳನ್ನು ತ್ವರಿತವಾಗಿ ತೆಗೆದುಹಾಕಲು ವಾದಿಸುತ್ತಲೇ ಇದ್ದಾರೆ, ಆರ್ಥಿಕ ಹಿನ್ನಡೆಯೂ ಸಾರ್ವಜನಿಕ ಆರೋಗ್ಯದ ಅಪಾಯಗಳನ್ನು ಮೀರಿಸುತ್ತದೆ ಎಂದು ಹೇಳಿದ್ದಾರೆ.

ಲ್ಯಾಟಿನ್ ಅಮೆರಿಕದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಾದ ಬ್ರೆಜಿಲ್ ಮತ್ತು ಮೆಕ್ಸಿಕೊಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ವರದಿಯಾಗುತ್ತಿದ್ದು, ಒಟ್ಟಾರೆಯಾಗಿ ಅಲ್ಲಿ 11 ಲಕ್ಷಕ್ಕೂ ಹೆಚ್ಚು ಲ್ಯಾಟಿನ್ ಅಮೆರಿಕನ್ನರು ಸೋಂಕಿಗೆ ಒಳಗಾಗಿದ್ದಾರೆ.

ಬ್ರೆಜಿಲಿಯನ್ ದಿನಪತ್ರಿಕೆ “ಫೋಲ್ಹಾ ಡಿ ಎಸ್.ಪಾಲೊ” ಪತ್ರಿಕೆ ತನ್ನ ಮೊದಲ ಪುಟದ ಸಂಪಾದಕೀಯದಲ್ಲಿ, ಅಧ್ಯಕ್ಷ ಬೋಲ್ಸೊನಾರೊ ವೈರಸ್ ಅನ್ನು ’ಸಣ್ಣ ಜ್ವರ’ ಎಂದು ಬಣ್ಣಿಸಿದ ಕೇವಲ ನೂರು ದಿನದಲ್ಲಿ, ಈ ವೈರಸ್ ನಿಮಿಷಕ್ಕೆ ಒಬ್ಬರಿಗಿಂತ ಹೆಚ್ಚು ಬ್ರೆಜಿಲಿಯನ್ನರನ್ನು ಕೊಲ್ಲುತ್ತಿದೆ ಎಂದು ಎತ್ತಿ ತೋರಿಸಿದೆ.

ಪತ್ರಿಕೆಯಲ್ಲಿ “ನೀವು ಇದನ್ನು ಓದುತ್ತಿರುವಾಗ, ಇನ್ನೊಬ್ಬ ಬ್ರೆಜಿಲಿಯನ್ ಕೊರೊನಾ ವೈರಸ್‌ನಿಂದ ಮೃತಪಟ್ಟರು” ಎಂದು ಬರೆದಿದೆ.

ಬ್ರೆಜಿಲ್‌ನ ಆರೋಗ್ಯ ಸಚಿವಾಲಯ ಗುರುವಾರ ವರದಿ ಮಾಡಿದ ಆಧಾರದಲ್ಲಿ, ದೇಶದಲ್ಲಿ ಕೊರೊನಾ ಪ್ರಕರಣ 6 ಲಕ್ಷ ದಾಟಿದೆ ಮತ್ತು 1,437 ಸಾವುಗಳು 24 ಗಂಟೆಗಳ ಒಳಗೆ ದಾಖಲಾಗಿವೆ, ಇದು ಸತತ ಮೂರನೇ ದೈನಂದಿನ ದಾಖಲೆಯಾಗಿದೆ. ಶುಕ್ರವಾರ ರಾತ್ರಿ ಬ್ರೆಜಿಲ್ ಇನ್ನೂ 1,005 ಸಾವುಗಳನ್ನು ವರದಿ ಮಾಡಿದೆ. ಅಲ್ಲಿ ಒಟ್ಟು 35,000 ಕ್ಕೂ ಹೆಚ್ಚು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.


ಓದಿ: ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...