Homeಮುಖಪುಟದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

- Advertisement -
- Advertisement -

ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷ ಭಾಷಣಕ್ಕೆ ಉದಾಹರಣೆಯಾಗಿ ದೆಹಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ದ್ವೇಷ ಭಾಷಣವನ್ನು ಫೇಸ್‌ಬುಕ್ ಸಿಇಒ ಮಾರ್ಕ್ ಜುಕೆಬರ್ಗ್ ಉಲ್ಲೇಖವು, ಗಲಭಗೆ ಬಿಜೆಪಿ ರಾಜಕಾರಣಿಗಳು ಕಾರಣವೆಂಬ ಆರೋಪವನ್ನು ದೆಹಲಿ ಪೊಲೀಸರು ನಿರಾಕರಿಸಿರುವ ಚರ್ಚೆಯನ್ನು ಮತ್ತೆ ಮುನ್ನಲೆಗೆ ತರುವ ಸಾಧ್ಯತೆಯಿದೆ.

ಫೆಬ್ರವರಿಯಲ್ಲಿ ನಡೆದ ಈ ಗಲಭೆಯಲ್ಲಿ 50 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು.

ಜುಕರ್‌ಬರ್ಗ್ ಜೂನ್ 2 ರಂದು ಫೇಸ್‌ಬುಕ್ ಉದ್ಯೋಗಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆಯ ನಿಯಮ ರೂಪಿಸುವ ಕುರಿತು ಮಾತನಾಡುತ್ತಿದ್ದರು. ಅವರು ನೇರವಾಗಿ ಕಪಿಲ್ ಮಿಶ್ರಾ ಎಂದು ಹೆಸರಿಸದಿದ್ದರೂ, ಅವರು ಉಲ್ಲೇಖಿಸಿದ ಉಲ್ಲೇಖವು ಅವರು ಯಾರನ್ನು ಉದ್ದೇಶಿಸಿ ಹೇಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಮೇ 25 ರಂದು ಮಿನ್ನೇಸೋಟದಲ್ಲಿ ಆಫ್ರಿಕನ್ ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಅಮೆರಿಕಾದಲ್ಲಿ ಭುಗಿಲೆದ್ದಿರುವ ’ಬ್ಲ್ಯಾಕ್‌ಲೈವ್ಸ್‌ಮ್ಯಾಟರ್’ ಬೃಹತ್ ಪ್ರತಿಭಟನೆಗಳಿಂದಾಗಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಖಂಡಿಸಲು ಅಥವಾ ತರಾಟೆಗೆ ಪಡೆಯಲು ಫೇಸ್‌ಬುಕ್ ವಿಫಲವಾಗಿದೆ ಎಂದು ಟೀಕಿಸಲ್ಪಟ್ಟ ಹಿನ್ನೆಲೆಯಲ್ಲಿ ಜುಕರ್‌ಬರ್ಗ್ ಅವರ ಸಂವಹನ ನಡೆಯಿತು.

ಆನ್‌ಲೈನ್ ಸಭೆಯು ಟ್ರಂಪ್‌ ಅವರ ಫೇಸ್‌ಬುಕ್ ಪೋಸ್ಟ್‌ಗಳನ್ನು ಚರ್ಚಿಸಿತು, ಅದರಲ್ಲಿ “ಲೂಟಿ ಪ್ರಾರಂಭವಾದಾಗ, ಶೂಟಿಂಗ್ ಪ್ರಾರಂಭವಾಗುತ್ತದೆ” ಎಂದು ಹೇಳುವ ಮೂಲಕ ಪ್ರತಿಭಟನೆಯ ಸಮಯದಲ್ಲಿ ಅಗ್ನಿಸ್ಪರ್ಶ ಮತ್ತು ಹಿಂಸಾಚಾರದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.

ಟ್ವಿಟರ್‌ನಂತಹ ಇತರ ಸೈಟ್‌ಗಳು ಅಧ್ಯಕ್ಷರ ಪೋಸ್ಟ್‌ಗಳ ಜೊತೆಗೆ ಎಚ್ಚರಿಕೆ ಲೇಬಲ್‌ಗಳನ್ನು ಹಾಕಿದಂತೆಯೇ ಪೇಸ್‌ಬುಕ್‌ನಲ್ಲೂ ಈ ಸಾಧ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಿದೆ.

ಫೆಬ್ರವರಿ 24-25 ರ ಟ್ರಂಪ್ ಭಾರತ ಪ್ರವಾಸದ ಸಂದರ್ಭದಲ್ಲಿ ಕಪಿಲ್ ಮಿಶ್ರಾ, ಈಶಾನ್ಯ ದೆಹಲಿಯ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ “ಡೊನಾಲ್ಡ್ ಟ್ರಂಪ್ ಭಾರತದಲ್ಲಿ ಇರುವವರೆಗೂ ನಾವು ಶಾಂತಿಯನ್ನು ಕಾಪಾಡುತ್ತೇವೆ. ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರ ಮಾತನ್ನು ಸಹ ಕೇಳುವುದಿಲ್ಲ” ಎಂದಿದ್ದರು.


ಓದಿ:  ಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...