Homeಕರ್ನಾಟಕಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

- Advertisement -
- Advertisement -

ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.

ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.

ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.


ಇದನ್ನೂ ಓದಿ:  ಸ್ಯಾಂಡಲ್‌ವುಡ್ ಚಿತ್ರ ನಟ ಚಿರಂಜೀವಿ ಸರ್ಜಾ ನಿಧನ


ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.

ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.

ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.

ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನಮನ ಮಿಡಿಯುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...